ಕೃಷ್ಣಾ-ಘಟಪ್ರಭಾ ಆರ್ಭಟ

ಜಿಲ್ಲೆಯ 131 ಗ್ರಾಮಗಳಲ್ಲಿ ಪ್ರವಾಹ•ಕೃಷ್ಣಾ ನದಿಗೆ ಹರಿದು ಬರುತ್ತಿದೆ 4 ಲಕ್ಷ ಕ್ಯೂಸೆಕ್‌ ನೀರು

Team Udayavani, Aug 8, 2019, 11:43 AM IST

8–Agust-21

ಬಾಗಲಕೋಟೆ: ರೈತರೇ ಕಟ್ಟಿದ ಚಿಕ್ಕಪಡಸಲಗಿ ಬ್ಯಾರೇಜ್‌ ಬಳಿಯ ವಿಜಯಪುರ-ಧಾರವಾಡ ರಾಜ್ಯ ಹೆದ್ದಾರಿ ಹತ್ತಿರ ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದು

ಶ್ರೀಶೈಲ ಬಿರಾದಾರ
ಬಾಗಲಕೋಟೆ:
ಕಳೆದೊಂದು ವಾರದಿಂದ ಕೃಷ್ಣಾ ನದಿಯಲ್ಲಿ ಮಾತ್ರ ಉಂಟಾಗಿದ್ದ ಪ್ರವಾಹ ಬುಧವಾರದಿಂದ ಮಲಪ್ರಭಾ ಹಾಗೂ ಘಟಪ್ರಭಾ ನದಿಗಳಿಗೂ ವಿಸ್ತರಿಸಿದೆ. ಜಿಲ್ಲೆಯ ಮೂರು ನದಿಗಳಲ್ಲೂ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಆರು ತಾಲೂಕಿನ 131 ಗ್ರಾಮಗಳ ಜನರು ಅತಂತ್ರ ಬದುಕು ಸಾಗಿಸುತ್ತಿದ್ದಾರೆ.

ಕೃಷ್ಣಾ ನದಿಗೆ ಬುಧವಾರ 3,46,567 ಕ್ಯೂಸೆಕ್‌, ಘಟಪ್ರಭಾ ನದಿಗೆ 1.72 ಲಕ್ಷ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಈ ಎರಡೂ ನದಿಗಳ ನೀರು ಆಲಮಟ್ಟಿ ಜಲಾಶಯ ಸೇರುತ್ತಿದ್ದು, ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಆಲಮಟ್ಟಿ ಜಲಾಶಯದ ಹಿನ್ನೀರು ಬಾಗಲಕೋಟೆ, ಬೀಳಗಿ, ಜಮಖಂಡಿ ತಾಲೂಕಿನ ಹಲವು ಹಳ್ಳಿಗಳು ಬಾಧಿತಗೊಂಡಿವೆ.

13 ಸೇತುವೆ ಜಲಾವೃತ: ಮಲಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಬಾದಾಮಿ ತಾಲೂಕಿನ 27 ಹಳ್ಳಿಗಳು ಪ್ರವಾಹಕ್ಕೆ ಒಳಗಾಗುವ ತೀವ್ರ ಭೀತಿಯಲ್ಲಿವೆ. ಬುಧವಾರ ಘಟಪ್ರಭಾ ನದಿ ಪಾತ್ರದ ಯಾದವಾಡ-ಮುಧೋಳ ರಾಜ್ಯ ಹೆದ್ದಾರಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರ ಬಂದ್‌ ಆಗಿದೆ. ಈ ಸೇತುವೆ ಸಹಿತ ಈವರೆಗೆ ಜಿಲ್ಲೆಯಲ್ಲಿ 13 ಸೇತುವೆಗಳ ಸಂಪರ್ಕ ಕಡಿತಗೊಂಡಿದೆ. ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಮುಧೋಳ ತಾಲೂಕಿನ ಮಳಲಿ, ಮಾಚಕನೂರ, ಇಂಗಳಗಿ, ಜಾಲಿಬೇರಿ, ಉತ್ತೂರ, ಬುದ್ನಿ ಬಿಕೆ, ಮಿರ್ಜಿ, ಚೆನಾಳ, ಒಂಟಗೋಡಿ, ರಂಜಣಗಿ ಗ್ರಾಮಗಳಿಗೆ ಮುಂಭಾಗ ನೀರು ನುಗ್ಗಿದೆ. ಮಿರ್ಜಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಇಲ್ಲಿನ ನದಿ ಪಾತ್ರದ 250 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

131 ಹಳ್ಳಿಗೆ ಆತಂಕ: ಮೂರು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಜಮಖಂಡಿ 26, ಬೀಳಗಿ 12, ಮುಧೋಳ 21, ಬಾಗಲಕೋಟೆ 12, ಬಾದಾಮಿ 27 ಹಾಗೂ ಹುನಗುಂದ ತಾಲೂಕಿನ 33 ಹಳ್ಳಿಗಳು ಸೇರಿ ಒಟ್ಟು 131 ಹಳ್ಳಿಗಳಿಗೆ ಯಾವುದೇ ಕ್ಷಣದಲ್ಲಿ ನೀರು ನುಗ್ಗುವ ಆತಂಕ ಎದುರಾಗಿದೆ. ಈಗಾಗಲೇ ಮುಧೋಳ ಪಟ್ಟಣದ ಎರಡು ಗಲ್ಲಿಗಳು, ಮಿರ್ಜಿ ಸಹಿತ ಏಳು ಗ್ರಾಮ, ಜಮಖಂಡಿ ತಾಲೂಕಿನ 13 ಗ್ರಾಮಗಳ ಸುತ್ತ ನೀರು ಆವರಿಸಿಕೊಂಡಿದೆ. ಘಟಪ್ರಭಾ ನದಿ ಪಾತ್ರದಲ್ಲಿ 23 ಹಾಗೂ ಮಲಪ್ರಭಾ ನದಿ ಪಾತ್ರದಲ್ಲಿ 18 ಬ್ಯಾರೇಜ್‌ಗಳಿದ್ದು, ಎಲ್ಲಾ ಬ್ಯಾರೇಜ್‌ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ.

ಇಬ್ಬರು ಯುವಕರ ರಕ್ಷಣೆ: ಘಟಪ್ರಭಾ ನದಿ ಪ್ರವಾಹ ಉಂಟಾಗಿದ್ದು, ಮುಧೋಳ ತಾಲೂಕಿನ ನಾಗರಾಳದಲ್ಲಿ ನದಿ ದಟದಲ್ಲಿದ್ದ ವಿದ್ಯುತ್‌ ಪಂಪಸೆಟ್ ತರಲು ಹೋಗಿದ್ದ ಇಬ್ಬರು ಯುವಕರು ಪ್ರವಾಹದಲ್ಲಿ ಸಿಲುಕಿದ್ದರು. ಅವರನ್ನು ಮಹಾಲಿಂಗಪುರ ಪೊಲೀಸರು ರಕ್ಷಣೆ ಮಾಡಿದ್ದಾರೆ. ಆ.8 ಮತ್ತು 9ರಂದು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.