ಕಮಲ ಪಡೆಯಲ್ಲಿ ಗರಿಗೆದರಿದ ರಾಜಕೀಯ!

ಸಚಿವ ಸ್ಥಾನ ರೇಸ್‌ನಲ್ಲಿ ಕಾರಜೋಳ-ಚರಂತಿಮಠ-ನಿರಾಣಿ•ನಿಗಮ ಮಂಡಳಿಯಲ್ಲಿ ಸ್ಥಾನ ನಿರೀಕ್ಷೆ

Team Udayavani, Jul 25, 2019, 12:14 PM IST

Udayavani Kannada Newspaper

ಶ್ರೀಶೈಲ ಕೆ. ಬಿರಾದಾರ
ಬಾಗಲಕೋಟೆ:
ರಾಜ್ಯದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾದ ಬೆನ್ನಲ್ಲೆ ಮುಳುಗಡೆ ಜಿಲ್ಲೆಯ ಬಿಜೆಪಿ ಪಕ್ಷದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.

ಹೌದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ತಮ್ಮ ನಾಯಕರಿಗೆ ಸಚಿವ ಸ್ಥಾನ ಸಿಗಲಿದೆ. ನಮಗೆ ನಿಗಮ ಮಂಡಳಿ ಇಲ್ಲವೇ ಪ್ರಮುಖ ಹುದ್ದೆಗಳ ನಿರ್ದೇಶಿತ ಸದಸ್ಯಗಳು ದೊರೆಯಲಿವೆ ಎಂಬ ಆಶಾಭಾವನೆ ಹಲವು ಪ್ರಮುಖ ಕಾರ್ಯಕರ್ತರು ಹೊಂದಿದ್ದು, ಇದೀಗ ಪಕ್ಷದ ಹಿರಿಯರು, ಆಕಾಂಕ್ಷಿ ಪೈಪೋಟಿ ಎದುರಿಸುವ ಅನಿವಾರ್ಯತೆ ಬಿಜೆಪಿಗರ ಸರತಿಯಾಗಿದೆ.

ಸಚಿವ ಸ್ಥಾನದ ನಿರೀಕ್ಷೆ: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದಲ್ಲಿ ಪರ ಜಿಲ್ಲೆಯ ಉಸ್ತುವಾರಿ ಸಚಿವರನ್ನು ಕಂಡಿದ್ದ ಬಾಗಲಕೋಟೆ ಜಿಲ್ಲೆ, ಈ ಬಾರಿ ಸ್ವ ಜಿಲ್ಲೆಯ ಸಚಿವರನ್ನೇ ಉಸ್ತುವಾರಿಯನ್ನಾಗಿ ಕಾಣಲಿದೆ ಎಂಬ ಬಲವಾದ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಮುಧೋಳದ ಬಿಜೆಪಿಯ ಹಿರಿಯ ಶಾಸಕ ಗೋವಿಂದ ಕಾರಜೋಳ, ಬಾಗಲಕೋಟೆ ಶಾಸಕ ಡಾ|ವೀರಣ್ಣ ಚರಂತಿಮಠ ಹಾಗೂ ಬೀಳಗಿಯ ಶಾಸಕ ಮುರುಗೇಶ ನಿರಾಣಿ ಅವರ ಹೆಸರು ಸಚಿವ ಸ್ಥಾನಕ್ಕೆ ಪ್ರಭಲವಾಗಿ ಕೇಳಿ ಬರುತ್ತಿವೆ.

ಕಾರಜೋಳರು ದಲಿತ ಕೋಟಾದಡಿ ಮೊದಲ ಅವಧಿಯಲ್ಲೇ ಸಚಿವರಾಗುವ ಸಾಧ್ಯತೆ ಹೆಚ್ಚಿದ್ದು, ಅವರೊಂದಿಗೆ ಶಿಕ್ಷಣ ಸಂಸ್ಥೆಯೊಂದನ್ನು ಬೃಹದಾಕಾರವಾಗಿ ಬೆಳೆಸಿದ ಡಾ|ವೀರಣ್ಣ ಚರಂತಿಮಠರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.

ಜತೆಗೆ ಯಡಿಯೂರಪ್ಪ ಅವರೊಂದಿಗೆ ಆಪ್ತರಾಗಿರುವ, ಒಂದು ಬಾರಿ ಕೈಗಾರಿಕೆ ಸಚಿವರಾಗಿ ಗಮನ ಸೆಳೆಯುವ ಕಾರ್ಯ ಮಾಡಿದ ನಿರಾಣಿ ಅವರಿಗೂ ಸಚಿವ ಸ್ಥಾನ ದೊರೆಯಲಿದೆ ಎಂಬ ನಿರೀಕ್ಷೆ ಇದೆ. ಆದರೆ, ಬಾಗಲಕೋಟೆ ಜಿಲ್ಲೆಗೆ, ಮೊದಲ ಹಂತದಲ್ಲಿ ಒಂದು ಸಚಿವ ಸ್ಥಾನ ಮಾತ್ರ ದೊರೆಯುತ್ತದೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. ಆ ಒಂದು ಸ್ಥಾನಕ್ಕೆ ಮೊದಲಿಗೆ ಯಾರು ಅದೃಷ್ಟವಂತರಾಗುತ್ತಾರೆ ಎಂಬ ಕುತೂಹಲವೂ ಮೂಡಿಸಿದೆ.

ಚರಂತಿಮಠ ಬೆಂಬಲಗರಿಂದ ಬೇಡಿಕೆ: 2004 ಮತ್ತು 2008ರಲ್ಲಿ ಶಾಸಕರಾಗಿ, ಮುಳುಗಡೆಯಿಂದ ನಲುಗಿದ್ದ ಬಾಗಲಕೋಟೆಯ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಿದ, ಕ್ರಿಯಾಶೀಲ ಶಾಸಕರೆಂದೇ ಕರೆಸಿಕೊಳ್ಳುವ ಡಾ|ಚರಂತಿಮಠರಿಗೆ ಬರಲಿರುವ ಬಿಜೆಪಿ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಬೇಕು ಎಂಬ ಬಲವಾದ ಬೇಡಿಕೆ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ಹಲವರು, ಪಕ್ಷದ ಹಿರಿಯ ನಾಯಕರಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಬಿಜೆಪಿ ನಗರ ಘಟಕದ ಮೂಲಗಳು ತಿಳಿಸಿವೆ.

ಜಿಲ್ಲೆಯ ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ಐದು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ. ಕೋಟಾದಡಿ ಕಾರಜೋಳರು ಸ್ಥಾನ ಪಡೆದರೂ ಉಳಿದ ನಾಲ್ಕು ಕ್ಷೇತ್ರಗಳ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ದೊರೆಯಲಿವೆ ಎಂಬ ವಿಶ್ವಾಸ ಬಿಜೆಪಿ ಪ್ರಮುಖರು ವ್ಯಕ್ತಪಡಿಸುತ್ತಿದ್ದಾರೆ.

ಸಿದ್ದು ಹಣಿಯಲು ಕೊಡಲೇಬೇಕು: ಮಾಜಿ ಸಿಎಂ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಸದ್ಯ ಬಾದಾಮಿ ಶಾಸಕರಾಗಿದ್ದು, ಅವರ ಪ್ರಭಾವವನ್ನು ಜಿಲ್ಲೆಯಲ್ಲಿ ಕಡಿಮೆ ಮಾಡಲು ಜಿಲ್ಲೆಯಲ್ಲಿ ಎರಡರಿಂದ ಮೂವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ಒಂದೆಡೆ ಕೇಳಿ ಬರುತ್ತಿದೆ. ಆದರೆ, ಸದ್ಯಕ್ಕೆ ಅಂತಹ ಪರಿಸ್ಥಿತಿ ಬಿಜೆಪಿಯಲ್ಲಿಲ್ಲ ಎಂಬ ಮಾತಿದೆ.

ಕಾಂಗ್ರೆಸ್‌-ಜೆಡಿಎಸ್‌ನಲ್ಲಿ ಅತೃಪ್ತರಾಗಿರುವವರು ಬಿಜೆಪಿಗೆ ಬರಲಿದ್ದು, ಅವರನ್ನು ಸಮಾಧಾನಪಡಿಸಿದ ಬಳಿಕವೇ ಬಿಜೆಪಿಯಲ್ಲಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ನಿರ್ಧಾರವಾಗಲಿದೆ ಎನ್ನಲಾಗಿದೆ. ಹೀಗಾಗಿ ಸದ್ಯಕ್ಕೆ ಜಿಲ್ಲೆಯಲ್ಲಿ ಕಾರಜೋಳರು ಹೊರತುಪಡಿಸಿದರೆ, ಉಳಿದವರಿಗೆ ಸಚಿವ ಸ್ಥಾನ ಸಿಗುವುದು ಅಷ್ಟು ಸುಲಭದ ಮಾತಲ್ಲ.

ಒಟ್ಟಾರೆ, ಕಳೆದ 14 ತಿಂಗಳಿಂದ ಮಂಕಾಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಸದ್ಯ ಹುರುಪು ಹುಮ್ಮಸ್ಸು ಕಾಣುತ್ತಿದೆ. ಜಿಲ್ಲೆಯಲ್ಲಿ ಅತಿಹೆಚ್ಚು ಶಾಸಕರಿದ್ದರೂ ತಮ್ಮ ಕೆಲಸ ಕಾರ್ಯಗಳಾಗುತ್ತಿಲ್ಲ ಎಂಬ ಕೊರಗು ಎದುರಿಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ, ಪ್ರಸ್ತುತ ರಾಜಕೀಯ ಬೆಳವಣಿಗೆ ಮುಖ ಅರಳುವಂತೆ ಮಾಡಿದೆ.

3ನೇ ಬಾರಿ ಶಾಸಕರಾಗಿರುವ ಡಾ|ವೀರಣ್ಣ ಚರಂತಿಮಠರು ಸ್ವಚ್ಛ ಹಾಗೂ ಕ್ರಿಯಾಶೀಲ, ಉತ್ತಮ ಆಡಳಿತಗಾರರೆಂದು ಹೆಸರು ಪಡೆದಿದ್ದಾರೆ. ಇಂದಿನ ಸೂಕ್ಷ್ಮ ರಾಜಕೀಯ ಪರಿಸ್ಥಿತಿಯಲ್ಲಿ ಇಂತಹ ನಾಯಕರಿಗೆ ಸಚಿವ ಸ್ಥಾನ ಕೊಟ್ಟರೆ, ಪಕ್ಷಕ್ಕೂ ಅನುಕೂಲ ಹಾಗೂ ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುತ್ತಾರೆ. ಜಿಲ್ಲಾ ಕೇಂದ್ರ ಸ್ಥಾನದಲ್ಲಿದ್ದು ಪಕ್ಷಕ್ಕೆ ತನು-ಮನ-ಧನದಿಂದ ಅವರು ದುಡಿದಿದ್ದಾರೆ. ಈಚೆಗೆ ಲೋಕಸಭೆ ಚುನಾವಣೆಯಲ್ಲಿ ಸಂಸತ್‌ ಸ್ಥಾನ ಗೆಲ್ಲಲು ಅವರ ಪಾತ್ರವೂ ದೊಡ್ಡದಿದೆ. ಹೀಗಾಗಿ ಚರಂತಿಮಠರಿಗೆ ನಮ್ಮ ಪಕ್ಷದ ಹಿರಿಯರು ಸಚಿವ ಸ್ಥಾನ ಕೊಡಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ. ಕೊಡುವಂತೆ ಒತ್ತಾಯವೂ ಮಾಡುತ್ತೇವೆ. ಒಂದು ವೇಳೆ ಕೊಡದಿದ್ದರೆ, ಅವರ ಪರವಾಗಿ ನಾವು ಹೋರಾಟಕ್ಕೂ ಸಿದ್ಧರಿದ್ದೇವೆ.
ರಾಜು ವಿ. ನಾಯ್ಕರ,
ಬಿಜೆಪಿ ನಗರ ಘಟಕದ ಅಧ್ಯಕ್ಷ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.