ಜಮಖಂಡಿಯಲ್ಲಿ 100 ಹಾಸಿಗೆಗಳ ಕೋವಿಡ್ ಸೆಂಟರ್‌


Team Udayavani, May 2, 2021, 7:04 PM IST

yyryr

ಜಮಖಂಡಿ: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಜಿಲ್ಲೆಗೊಂದು ಕೊರೊನಾ ಸೆಂಟರ್‌ ನಿರ್ಮಿಸಿದೆ. ಆದರೆ, ತಾಲೂಕಿನಲ್ಲಿ ಸಹಕಾರಿ ತತ್ವದಡಿಯಲ್ಲಿ ಕೊರೊನಾ ಸೆಂಟರ್‌ ಆರಂಭಿಸುವ ಚಿಂತನೆಗಳು ನಡೆದಿವೆ.

ತಾಲೂಕಿನಲ್ಲಿ ಸರಕಾರಿ ಇಲಾಖೆ, ಭಾರತೀಯ ವೈದ್ಯಕೀಯ ಸಂಸ್ಥೆ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ 100 ಹಾಸಿಗೆಗಳ ಕೊರೊನಾ ಸೆಂಟರ್‌ ಆರಂಭಿಸುವ ಚಿಂತನೆ ನಡೆದಿದ್ದು, ಎರಡು ದಿನಗಳಲ್ಲಿ ರೂಪರೇಷೆ ಪೂರ್ಣಗೊಳ್ಳಲಿವೆ. ಕೊರೊನಾ ಸೋಂಕಿತರಿಗೆ ದಿನದ 24 ಗಂಟೆ ಸೇವೆ ಲಭಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದ್ದು, ಸರಕಾರಿ ಯಂತ್ರ ಮತ್ತು ಖಾಸಗಿ ಸಂಸ್ಥೆಗಳು ಅಂದಾಜು 70:30 ಅನುಪಾತದಲ್ಲಿ ಕೆಲಸ ನಡೆಯಲಿದೆ.

 ಶೇ.70ರ ಅನುಪಾತದಲ್ಲಿ:

100 ಹಾಸಿಗೆ ಕೊರೊನಾ ಸೆಂಟರ್‌ ಆರಂಭಕ್ಕೆ ಚಿಂತನೆಗಳು ನಡೆಯುತ್ತಿದ್ದು, ಆರೋಗ್ಯ, ಕಂದಾಯ ಇಲಾಖೆ, ನಗರಸಭೆ ಮತ್ತು ಪೊಲೀಸ್‌ ಇಲಾಖೆ ಆರಕ್ಷಕರು ಶೇ. 70ರ ಅನುಪಾತದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಆರೋಗ್ಯ ಇಲಾಖೆ ವಿವಿಧ ವಿಭಾಗಗಳ ವೈದ್ಯರು, ನಸ್‌ ìಗಳು, ಆರೋಗ್ಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಸೇವೆ ಮಾಡಲಿದ್ದಾರೆ. ಕಂದಾಯ ಇಲಾಖೆ 100 ಹಾಸಿಗೆ ಕೊರೊನಾ ಸೆಂಟರಕ್ಕೆ ಅಗತ್ಯ ಸುಸಜ್ಜಿತ ಕಟ್ಟಡ ನೀಡಲಿದೆ. ಪೊಲೀಸ್‌ ಇಲಾಖೆ ಕೊರೊನಾ ಸೆಂಟರ್‌ ಒಳ-ಹೊರಾಂಗಣ ಭದ್ರತೆ ವಹಿಸಿಕೊಳ್ಳಲಿದೆ. ನಗರಸಭೆ ಕೊರೊನಾ ಸೆಂಟರ್‌ ಒಳಗೆ- ಹೊರಗಡೆ ಸ್ವತ್ಛತೆ ಕಾಪಾಡಲಿದೆ. ಆಶಾ ಕಾರ್ಯಕರ್ತೆಯರು ರೋಗಿಗಳ ಚಲನವಲನ-ಆರೋಗ್ಯ ವಿಚಾರಣೆ ನಡೆಸಲಿದ್ದಾರೆ.

ಶೇ.30ರ ಅನುಪಾತ:

ಸಹಕಾರ ತತ್ವದಡಿಯಲ್ಲಿ ನಿರ್ಮಾಣವಾಗಲಿರುವ ಕೊರೊನಾ ಸೆಂಟರ್‌ದಲ್ಲಿ ಖಾಸಗಿ ವೈದ್ಯರ ಪಾತ್ರ ಬಹುಮುಖ್ಯ. ದಿನದ 24 ಗಂಟೆ ಸೇವೆ ನಿರ್ವಹಿಸುವ ಕೊರೊನಾ ಸೆಂಟರ್‌ ದಲ್ಲಿ 8 ಗಂಟೆ ನಿಗದಿಪಡಿಸಿದ ಅವಧಿ ಯಲ್ಲಿ ಮೂರು ವಿಭಾಗದಲ್ಲಿ ವೈದ್ಯರು, ನರ್ಸ್‌ಗಳ ತಂಡ ಕೆಲಸ ನಿರ್ವಹಿಸುವ ಯೋಜನೆ ಇದಾಗಿದೆ. 24 ಗಂಟೆ ಸೇವೆ ಸಲ್ಲಿಸುವ ಕೊರೊನಾ ಸೆಂಟರ್‌ನಲ್ಲಿ ರೋಗಿಗಳಿಗೆ ನೀರು, ವಿದ್ಯುತ್‌, ಶೌಚಾಲಯ, ಸ್ವತ್ಛತೆ, ಭದ್ರತೆ, ಉಪಹಾರ, ಊಟದ ವ್ಯವಸ್ಥೆ ನಡೆಯಲಿದೆ. ಈಗಾಗಲೇ ಶಾಸಕ ಆನಂದ ನ್ಯಾಮಗೌಡ ನೇತೃತ್ವದಲ್ಲಿ ಕಂದಾಯ, ಆರೋಗ್ಯ ಇಲಾಖೆ, ನಗರಸಭೆ, ಪೊಲೀಸ್‌ ಮತ್ತು ಭಾರತೀಯ ವೈದ್ಯಕೀಯ ಸಂಸ್ಥೆಯ ಖಾಸಗಿ ಆಸ್ಪತ್ರೆಗಳ ವೈದ್ಯರ ಜಂಟಿ ಸಭೆ ನಡೆದಿದ್ದು, ಬಹುತೇಕ ಯಶಸ್ವಿಯಾಗಿದೆ. ತಾಲೂಕಿನ ಕೊರೊನಾ ಸೋಂಕಿತರಿಗೆ ಉತ್ತಮ ಸೇವೆ ಲಭ್ಯವಾಗಲಿದೆ.

ಕಂದಾಯ ಇಲಾಖೆ 100 ಹಾಸಿಗೆಯ ಸುಸಜ್ಜಿತ ಕಟ್ಟಡ ನೀಡಲಿದೆ. ಆರೋಗ್ಯ ಇಲಾಖೆ ಆಕ್ಸಿಜನ್‌, ರೋಗಿಗಳಿಗೆ ಪಿಪಿ ಕಿಟ್‌, ಔಷಧಿ  ಸಹಿತ ಇತರೇ ಪರಿಕರ ನೀಡಲಿದೆ. ಪೊಲೀಸ್‌ ಇಲಾಖೆ ಸುರಕ್ಷತೆ, ಭದ್ರತೆ ವ್ಯವಸ್ಥೆ ಮಾಡಲಿದೆ. ನಗರಸಭೆ ಕಾರ್ಮಿಕರು ಸ್ವತ್ಛತೆ ಕಾಪಾಡಲಿದೆ. ಖಾಸಗಿ ವೈದ್ಯರ ತಂಡ ದಿನದ 24 ಗಂಟೆ ರೋಗಿಗಳಿಗೆ ಚಿಕಿತ್ಸೆ ನೀಡಲಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.