162 ಕೆರೆ ಸಮಗ್ರ ಅಭಿವೃದ್ಧಿ


Team Udayavani, Jan 22, 2020, 4:07 PM IST

bk-tdy-1

ಬಾಗಲಕೋಟೆ: ನರೇಗಾ ಯೋಜನೆಯಡಿ ಕೆರೆ, ಶಾಲಾ ಆಟದ ಮೈದಾನ, ಶಾಲಾ ಕಂಪೌಂಡ್‌, ಕುರಿ ದೊಡ್ಡಿ, ಕೃಷಿ ಸೇರಿದಂತೆ ವಿವಿಧ ಕಾಮಗಾರಿಗಳಲ್ಲಿ ಪ್ರತಿದಿನ 12 ಸಾವಿರದಿಂದ 15ಸಾವಿರದವರೆಗೆ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿರುವುದಾಗಿ ಜಿಪಂ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಗಾ ಯೋಜನೆಯಡಿ 38.85 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೆ ಒಟ್ಟು 31.45 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ಶೇ. 80.96 ಪ್ರಗತಿ ಸಾಧಿಸುವ ಮೂಲಕ ರಾಜ್ಯದಲ್ಲಿ ಬಾಗಲಕೋಟೆ ಜಿಲ್ಲೆಯು 8ನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

5044 ಕುರಿ ದೊಡ್ಡಿ: ಪ್ರಸಕ್ತ ಸಾಲಿನಲ್ಲಿ ಅನುಮೋದನೆಗೊಂಡ 5044 ಕುರಿ ದೊಡ್ಡಿಗಳ ಪೈಕಿ 1114 ಕಾಮಗಾರಿಗಳು ಪೂರ್ಣಗೊಂಡಿವೆ. 162 ಕೆರೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 34 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿವೆ. 256 ಶಾಲಾ ಕಾಂಪೌಂಡ್‌ ಕಾಮಗಾರಿಗಳ ಪೈಕಿ 66 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ 161 ಕಾಮಗಾರಿ ಪ್ರಗತಿಯಲ್ಲಿವೆ. 198 ಶಾಲಾ ಆಟದ ಮೈದಾನ ಕಾಮಗಾರಿಗಳಲ್ಲಿ 69 ಪೂರ್ಣ, 86 ಪ್ರಗತಿಯಲ್ಲಿವೆ. ನರೇಗಾ ಮತ್ತು ಶಿಕ್ಷಣ ಇಲಾಖೆಯ ಅನುದಾನದ ಒಗ್ಗೂಡಿಸುವಿಕೆಯಡಿ 170 ಶಾಲಾ ಶೌಚಾಲಯ ಕಾಮಗಾರಿ ಕೈಗೊಳ್ಳಲಾಗಿದ್ದು, ಅದರಲ್ಲಿ 163 ಕಾಮಗಾರಿ ಪೂರ್ಣಗೊಂಡಿವೆ. ಇದಕ್ಕಾಗಿ 212.85 ಲಕ್ಷ ರೂ. ವೆಚ್ಚ ಮಾಡಲಾಗಿದೆ ಎಂದರು.

ಪ್ರವಾಹ; 7.89 ಕೋಟಿ ಅನುದಾನ: ನೆರೆ ಹಾವಳಿಗೆ ತುತ್ತಾದ 111 ಸಿ.ಸಿ ರಸ್ತೆ, 67 ಚರಂಡಿ, 18 ಬಸಿ ಕಾಲುವೆ, 17 ಶಾಲಾ ಕಾಂಪೌಂಡ್‌, 16 ಆಟದ ಮೈದಾನ, 12 ಚೆಕ್‌ಡ್ಯಾಂ, 12 ಸಿಡಿ, 16 ಶೌಚಾಲಯ ದುರಸ್ತಿ, 15 ಸ್ಮಶಾನ ಅಭಿವೃದ್ಧಿ, 11 ಕೃಷಿ ಹೊಂಡ ಹಾಗೂ 2 ಘನ ತ್ಯಾಜ್ಯ ವಿಲೇವಾರಿ ಸೇರಿ ಒಟ್ಟು 565 ಕಾಮಗಾರಿಗಳಿಗೆ ನರೇಗಾ ಯೋಜನೆಯಡಿ ಒಟ್ಟು 789.06 ಲಕ್ಷ ರೂ. ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು. ಗ್ರಾಮೀಣ ಕುಡಿಯುವ ನೀರು: ಜಿಲ್ಲೆಯಲ್ಲಿ ಒಟ್ಟು 790 ಶುದ್ಧ ನೀರಿನ ಘಟಕಗಳು ಅಳವಡಿಸಲಾಗಿದ್ದು, ಅವುಗಳಲ್ಲಿ 616 ಚಾಲ್ತಿಯಲ್ಲಿದ್ದು, 174 ದುರಸ್ತಿಯಲ್ಲಿವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಒಟ್ಟು 41 ಯೋಜನೆ ತೆಗೆದುಕೊಳ್ಳಲಾಗಿದ್ದು, ಈಗಾಗಲೇ 38 ಪೂರ್ಣಗೊಂಡಿದ್ದು, 2 ಯೋಜನೆಗಳು ಪ್ರಗತಿಯಲ್ಲಿರುತ್ತವೆ. 1 ಯೋಜನೆ ಸಾಂಕೇತಿಕವಾಗಿ ಪ್ರಾರಂಭವಾಗಿದೆ.

ಸಂಜೀವಿನಿ ಎನ್‌ಆರ್‌ಎಲ್‌ಎಂ: ಎನ್‌ಆರ್‌ಎಲ್‌ ಎಂ ಯೋಜನೆಯಡಿ 2019-20ನೇ ಸಾಲಿಗೆ ನೀಡಿದ ಭೌತಿಕ ಗುರಿಗೆ ಅನುಗುಣವಾಗಿ ಎಲ್ಲ ಚಟುವಟಿಕೆಗಳಲ್ಲಿ ಶೇ. 100 ಸಾಧನೆಯಾಗಿದ್ದು,ರಾಜ್ಯದಲ್ಲಿ ಜಿಲ್ಲೆಯು 3ನೇ ಸ್ಥಾನದಲ್ಲಿದೆ. ಈ ಯೋಜನೆಯಡಿ 260 ಗ್ರಾಮೀಣ ಯುವಕ-ಯುವತಿಯರಿಗೆ ವಿವಿಧ ಕೋರ್ಸಗಳಿಗೆ ಸ್ವ-ಉದ್ಯೋಗ ತರಬೇತಿ ಹಾಗೂ ಬ್ಯಾಂಕ್‌ ಸಾಲ ಒದಗಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಪ್ಲಾಸಿಕ್‌ ಮುಕ್ತ ಅಭಿಯಾನದಡಿ ಜಿಲ್ಲಾ ಮಟ್ಟದಲ್ಲಿ ಒಂದು ದಿನ ಬಟ್ಟೆ ಬ್ಯಾಗ್‌ ಮೇಳ ಹಮ್ಮಿಕೊಳ್ಳಲಾಗಿತ್ತು ಎಂದರು.

ಗುರುಗಳು ಬಂದರು ಗುರುವಾರ: ಕಳೆದ ವರ್ಷ ಬಾಗಲಕೋಟೆ ಜಿಲ್ಲೆ ಎಸ್‌.ಎಸ್‌.ಎಲ್‌.ಸಿ ಫಲಿತಾಂಶ ಶೇ.75.63 ರಷ್ಟಾಗಿ ರಾಜ್ಯಕ್ಕೆ 27 ಸ್ಥಾನ ಪಡೆದಿದ್ದು, ಪ್ರಸಕ್ತ ಸಾಲಿಗೆ ಫಲಿತಾಂಶದಲ್ಲಿ ಸುಧಾರಣೆ ತರಲು ಕಡಿಮೆ ಫಲಿತಾಂಶ ಹೊಂದಿದ ಶಾಲೆಗಳಿಗೆ ಜಿಲ್ಲೆಯ 27 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳೆಂದು ನಿಯೋಜಿಸಿ ಆದೇಶಿಸಲಾಗಿದೆ.

ನೋಡಲ್‌ ಅಧಿಕಾರಿಗಳು ಜಿಲ್ಲೆಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಹೊಂದಿದ ಶಾಲೆಗಳಿಗೆ ಪ್ರತಿ ಗುರುವಾರ ಭೇಟಿ ನೀಡಲಿದ್ದಾರೆ. ಇದಕ್ಕೆ ಗುರುಗಳು ಬಂದರು ಗುರುವಾರ ಎಂದು ಹೆಸರು ಇಡಲಾಗಿದೆ. ಅಲ್ಲದೇ ಇವರು ಅನಿರೀಕ್ಷಿತವಾಗಿ ಶಾಲೆಗಳಿಗೆ ಭೇಟಿ ನೀಡಿ ಶಾಲಾ ಮೂಲಭೂತ ಸೌಲಭ್ಯಗಳನ್ನು ಹಾಗೂ ಶೈಕ್ಷಣಿಕ ಗುಣಮಟ್ಟ ಬಗ್ಗೆ ಪರಿಶೀಲಿಸಿ ಅವುಗಳ ಸುಧಾರಣೆಗೆ ಸಲಹೆ ಸೂಚನೆ ನೀಡಲಿದ್ದಾರೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.