ಚಾಲಕನ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಚೆಕ್ ವಿತರಣೆ
Team Udayavani, Apr 17, 2021, 7:07 PM IST
ಹುಬ್ಬಳ್ಳಿ: ಕರ್ತವ್ಯದ ವೇಳೆ ಕಿಡಿಗೇಡಿಗಳು ಬೀಸಿದ ಕಲ್ಲು ತಗುಲಿ ಮೃತಪಟ್ಟ ಸಾರಿಗೆ ಸಂಸ್ಥೆ ಚಾಲಕ ನಬೀದ್ ರಸೂಲ್ ಕೆ. ಅವಟಿ ಅವರ ಕುಟುಂಬದ ಸದಸ್ಯರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರು 30 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಬಾಗಲಕೋಟೆ ವಿಭಾಗದ ಜಮಖಂಡಿ ಘಟಕದ ಚಾಲಕ ನಬೀದ್ ರಸೂಲ್ ಕೆ. ಅವಟಿ ಕರ್ತವ್ಯದಲ್ಲಿದ್ದಾಗ ಕಿಡಿಗೇಡಿಗಳು ಬಸ್ಸಿನ ಮುಂಭಾಗದ ಗಾಜಿಗೆ ಕಲ್ಲು ಬೀಸಿದ್ದರು. ಕಲ್ಲು ಗಾಜು ಪುಡಿ ಮಾಡಿಕೊಂಡು ಚಾಲಕ ಕುತ್ತಿಗೆ ಭಾಗಕ್ಕೆ ತಗುಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದರು.
ಕೂಡಲೇ ಘಟನೆಗೆ ಸ್ಪಂದಿಸಿದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರು ಜಮಖಂಡಿಗೆ ತೆರಳಿಗೆ ಮೃತರ ಕುಟುಂಬದ ಸದಸ್ಯರಿಗೆ 30 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು. ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಭರಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್