ಮತಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ 67.90 ಕೋಟಿ ರೂ. ಅನುದಾನ
Team Udayavani, Sep 26, 2020, 8:46 PM IST
ಜಮಖಂಡಿ: ವಿಧಾನಸಭಾ ಮತಕ್ಷೇತ್ರದ ಅಭಿವೃದ್ಧಿ ಹಾಗೂ ಅನುದಾನ ಬಿಡುಗಡೆ ವಿಳಂಬ ಕುರಿತು ಅಧಿವೇಶನದಲ್ಲಿ ಚುಕ್ಕೆ ಗುರುತಿಲ್ಲದ ನಾಲ್ಕು ಪ್ರಶ್ನೆಗಳಿಗೆ ಸಂಬಂಧಿಸಿದ ಸಚಿವರು ಉತ್ತರಿಸಿದ್ದಾರೆ ಎಂದು ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಸದನದಕಲಾಪದಲ್ಲಿ ಟ್ಯಾಕ್ಷಿ, ಅಟೋ ಚಾಲಕರಿಗೆ ನೀಡಬೇಕಾದ ಸಹಾಯಧನ ಕುರಿತು ಪ್ರಶ್ನಿಸಿದಾಗ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ರಾಜ್ಯದಲ್ಲಿ 2,15,155 ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗಿದೆ. ಜಮಖಂಡಿ ಕ್ಷೇತ್ರದಿಂದ 326 ಫಲಾನುಭವಿಗಳ ಅರ್ಜಿ ಸ್ವೀಕೃತವಾಗಿದ್ದು ಅದರಲ್ಲಿ 287 ಜನರಿಗೆ ಪರಿಹಾರ ಸಂದಾಯವಾಗಿದ್ದು ಇನ್ನು 28 ಫಲಾನುಭವಿಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.
ಅಂಗನವಾಡಿ ಕೇಂದ್ರಗಳಗೆ ಸರಕಾರಿ ಸ್ವಾಮ್ಯದ ಸಂಸ್ಥೆಗಳಿಂದ ಔಷಧಿ ಪೂರೈಕೆಯಾಗುತ್ತಿದೆ ಎಂದು ಸದನದಲ್ಲಿ ಪ್ರಶ್ನಿಸಿದಾಗ ಮಹಿಳಾ ಮಕ್ಕಳ ಅಭಿವೃದ್ಧಿ ಹಾಗೂ ಅಂಗವಿಕಲ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ, ಖಾಸಗಿ ಕಂಪನಿಗಳಿಗೆ ಅನುಮತಿ ನೀಡಿಲ್ಲ ಎಂದು ಉತ್ತರ ನೀಡಿದ್ದಾರೆ ಎಂದರು.
ತಾಲೂಕಿನ ಕಂಕಣವಾಡಿ ಗ್ರಾಮದ ಗುಹೇಶ್ವರ ದೇವಸ್ಥಾನದ ಹತ್ತಿರ ಕೃಷ್ಣಾನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಕಾಮಗಾರಿ ಕುರಿತು ಸದನದಲ್ಲಿ ಪ್ರಶ್ನಿಸಿದಾಗ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಉತ್ತರಿಸಿ, ಕಂಕಣವಾಡಿ ಗ್ರಾಮದ ಗುಹೇಶ್ವರ ದೇವಸ್ಥಾನದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಪ್ರಸ್ತಾವನೆ ಸರಕಾರಕ್ಕೆ ಬಂದಿದೆ. 11 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳುವ ಪ್ರಸ್ತಾವನೆ ಲಭ್ಯವಿದೆ ಎಂದು ಉತ್ತರ ನೀಡಿದ್ದಾರೆ ಎಂದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಹಾಳಾದ ರಸ್ತೆ ಕಾಮಗಾರಿಗಳನ್ನು ದುರಸ್ತಿಪಡಿಸಲು 67.90 ಕೋಟಿ ಅನುದಾನ ಮಂಜೂರು ಮಾಡಿದ್ದು, ಅದರಲ್ಲಿ 36.65 ಕೋಟಿ ಬಿಡುಗಡೆ ಮಾಡಲಾಗಿದೆ ಉತ್ತರ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ