688 ಜನ ವಸತಿಗೆ ಶಾಶ್ವತ ನೀರಿಲ್ಲ!

•ಜಿಲ್ಲೆಯಲ್ಲಿವೆ 1072 ಜನ ವಸತಿ•602 ಕಂದಾಯ ಗ್ರಾಮಗಳು•ಮೂರು ನದಿ ಇದ್ದರೂ ನೀರಿನ ಸದ್ಬಳಕೆ ಇಲ್ಲ

Team Udayavani, May 6, 2019, 2:56 PM IST

bagalkote-tdy-02

ಬಾಗಲಕೋಟೆ: ಹುನಗುಂದ ತಾಲೂಕು ಭೀಮನಗಡ ಜನ ವಸತಿಯಲ್ಲಿ ಖಾಸಗಿ ಟ್ಯಾಂಕರ್‌ ಮೂಲಕ ನೀರು ಪಡೆಯುತ್ತಿರುವ ಜನರು.

ಬಾಗಲಕೋಟೆ: ಮುಳುಗಡೆ ಜಿಲ್ಲೆಯ 688 ಜನ ವಸತಿ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಇಲ್ಲ ಎಂದರೆ ನಂಬಲೇಬೇಕು.

ಹೌದು, ಜಿಲ್ಲೆಯ ಆರು ತಾಲೂಕು (ಹೊಸದಾಗಿ ನಾಲ್ಕು ಘೋಷಣೆ ಮಾಡಿದ್ದು, ಆಡಳಿತಾತ್ಮಕವಾಗಿ ಆಡಳಿತ ನಡೆಸುತ್ತಿಲ್ಲ) ತಾಲೂಕು ಮತ್ತು 18 ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 602 ಕಂದಾಯ ಗ್ರಾಮಗಳು, 20 ಅಧಿಕೃತ ಕಂದಾಯ ಗ್ರಾಮಗಳೆಂದು ಘೋಷಣೆಯಾಗದ ಗ್ರಾಮಗಳು ಸೇರಿ ಒಟ್ಟು 1072 ಜನ ವಸತಿ ಪ್ರದೇಶಗಳಿವೆ. ಅಲ್ಲದೇ 15 ನಗರ ಸ್ಥಳೀಯ ಸಂಸ್ಥೆಗಳಿವೆ. ಅದರಲ್ಲಿ 688 ಜನ ವಸತಿ ಪ್ರದೇಶಗಳಿಗೆ ಈ ವರೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಈ ವರೆಗೂ ಕೈಗೊಂಡಿಲ್ಲ.

384 ಹಳ್ಳಿಗೆ ಮಾತ್ರ ಶಾಶ್ವತ ಯೋಜನೆ: ನಗರ ಪ್ರದೇಶ ಹೊರತುಪಡಿಸಿ, ಗ್ರಾಮೀಣ ಪ್ರದೇಶದ ಹಳ್ಳಿ, ಜನವಸತಿಗಳಿಗೆ ಕುಡಿಯುವ ನೀರು ಪೂರೈಸುವ ಹೊಣೆಹೊತ್ತ ಜಿ.ಪಂ, ಜಿಲ್ಲೆಯಲ್ಲಿ ಒಟ್ಟು 33 ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನಗೊಳಿಸಿದೆ. ಅದರಲ್ಲಿ 3 ಯೋಜನೆಗಳು ವಿವಿಧ ಕಾರಣಕ್ಕೆ ನೀರು ಕೊಡುತ್ತಿಲ್ಲ. ಉಳಿದ 30 ಯೋಜನೆಗಳಡಿ 384 ಹಳ್ಳಿಗಳಿಗೆ ನೀರು ಕೊಡಲಾಗುತ್ತಿದೆ ಎಂದು ಇಲಾಖೆ, ಅಂಕಿ-ಸಂಖ್ಯೆಯ ದಾಖಲೆ ಕೊಡುತ್ತದೆ.

ನದಿಗಳೇ ಆಸರೆ: ಬಹುಹಳ್ಳಿ ಕುಡಿಯುವ ನೀರು ಪೂರೈಕೆಗೆ ಜಿಲ್ಲೆಯ ಮೂರು ನದಿಗಳೇ ಆಸರೆಯಾಗಿವೆ. ಘಟಪ್ರಭಾ ನದಿ ಪಾತ್ರದಲ್ಲಿ ಬಾದಾಮಿ-2, ಮುಧೋಳ-1, ಬಾಗಲಕೋಟೆ-3 ಹಾಗೂ ಬೀಳಗಿ ತಾಲೂಕಿನಲ್ಲಿ 3 ಬಹುಹಳ್ಳಿ ಕು.ನೀರಿನ ಯೋಜನೆ ಇವೆ.

ಕೃಷ್ಣಾ ನದಿ ಪಾತ್ರದಲ್ಲಿ ಜಮಖಂಡಿ ತಾಲೂಕಿನಲ್ಲಿ 6, ಮುಧೋಳ-1, ಹುನಗುಂದ-4, ಬಾಗಲಕೋಟೆ-5, ಬೀಳಗಿ-3 ಯೋಜನೆಗಳು, ಮಲಪ್ರಭಾ ನದಿ ಪಾತ್ರದಲ್ಲಿ ಬಾದಾಮಿ-3 ಹಾಗೂ ಹುನಗುಂದ ತಾಲೂಕಿನಲ್ಲಿ 2 ಬಹುಹಳ್ಳಿ ಯೋಜನೆ ಚಾಲ್ತಿಯಲ್ಲಿವೆ. ಈ ಯೋಜನೆಗಳಿಗೆ ನದಿ ಪಾತ್ರದಲ್ಲಿ ಬ್ಯಾರೇಜ್‌ ನಿರ್ಮಿಸಿದ್ದು, ಅಲ್ಲಿ ಜಾಕವೆಲ್ ನಿರ್ಮಿಸಿ, ಪೈಪ್‌ಲೈನ್‌ ಮೂಲಕ 384 ಹಳ್ಳಿಗಳಿಗೆ ನೀರು ಕೊಡಲಾಗುತ್ತಿದೆ.

688 ಜನ ವಸತಿಗೆ ಶಾಶ್ವತ ಯೋಜನೆ ಇಲ್ಲ: ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಜಿಲ್ಲೆಯ 384 ಹಳ್ಳಿಗಳು ಮಾತ್ರ ಒಳಗೊಂಡಿದ್ದು, ಉಳಿದ 688 ಜನವಸತಿಗಳಿಗೆ ಶಾಶ್ವತ ಯೋಜನೆ ಕೈಗೊಂಡಿಲ್ಲ. ಈ ಜನ ವಸತಿಗಳಲ್ಲಿ ಕೊಳವೆ ಬಾವಿಗಳ ಮೂಲಕವೇ ಇಂದಿಗೂ ಕುಡಿಯುವ ನೀರು ಒದಗಿಸಲಾಗುತ್ತಿದೆ. ಆ ಕೊಳವೆ ಬಾವಿಗಳಲ್ಲಿ ನೀರು ಬತ್ತಿದರೆ, ಮತ್ತೂಂದು ಹೊಸ ಕೊಳವೆ ಬಾವಿ ಕೊರೆದು ನೀರು ಕೊಡುವ ಪರ್ಯಾಯ ಮಾರ್ಗ ಬಿಟ್ಟರೆ, ಶಾಶ್ವತ ಯೋಜನೆ ಕೈಗೊಳ್ಳಲು ಈ ವರೆಗೆ ಯಾರೂ ಮುಂದಾಗದಿರುವುದು ಆಡಳಿತ ವ್ಯವಸ್ಥೆಯ ಕಾಳಜಿ ಎಂಬ ಬೇಸರದ ಮಾತು ಕೇಳಿ ಬರುತ್ತಿದೆ.

ಏನಿದೆ ನೀರಿನ ವ್ಯವಸ್ಥೆ : ಜಿಲ್ಲೆಯ ಆರು ತಾಲೂಕಿನ 1072 ಜನ ವಸತಿ ಪ್ರದೇಶಗಳಲ್ಲಿ ಒಟ್ಟು 13,01,686 ಜನಸಂಖ್ಯೆ ಇದೆ. ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಯ ಜತೆಗೆ ಈ ಜನ ವಸತಿಗಳಲ್ಲಿ 1,243 ಕೊಳವೆ ಬಾವಿಗಳು, 1097 ಕಿರು ನೀರು ಪೂರೈಕೆ ಯೋಜನೆಗಳು, 3,758 ಕೈ ಪಂಪ್‌ಗ್ಳು ಸೇರಿ ಒಟ್ಟು 6,719 ಕೊಳವೆ ಬಾವಿಯಿಂದ ನೀರು ಪೂರೈಕೆ ವ್ಯವಸ್ಥೆ ಜಿಲ್ಲೆಯಲ್ಲಿವೆ.

ಆದರೆ, ಮೂರು ವರ್ಷಗಳ ಸತತ ಬರಗಾಲದಿಂದ ಶೇ.35ರಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಅದಕ್ಕಾಗಿ ಈ ವರ್ಷ ಮತ್ತೆ 305 ಹೊಸ ಕೊಳವೆ ಬಾವಿ ಕೊರೆಸಲಾಗಿದೆ. ಅದರಲ್ಲಿ 233 ಮಾತ್ರ ಸಫಲವಾಗಿದ್ದು, ಅವುಗಳಿಂದಲೇ ನೀರು ಕೊಡುವ ಪ್ರಯತ್ನ, ಜಿ.ಪಂ.ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಾಡುತ್ತಿದೆ.

ಒಟ್ಟಾರೆ, ಮೂರು ನದಿಗಳು ಹರಿದು, ರಾಷ್ಟ್ರದ ಅತ್ಯಂತ ದೊಡ್ಡ ಆಲಮಟ್ಟಿ ಜಲಾಶಯ ಜಿಲ್ಲೆಯಲ್ಲಿದ್ದರೂ, ಕುಡಿಯುವ ನೀರಿನ ಶಾಶ್ವತ ಯೋಜನೆ ಕೈಗೊಳ್ಳುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತ ಗಂಭೀರ ಪ್ರಯತ್ನ ನಡೆಸಿಲ್ಲ ಎಂಬುದು ಜಿಲ್ಲೆಯ ಜನರ ಆರೋಪ.

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.