ಲಯನ್ಸ್‌ ಸೇವೆಗೆ 8 ಪ್ರಶಸ್ತಿ ಗರಿ

•ವರ್ಷದಲ್ಲಿ 100 ಸಾಮಾಜಿಕ ಕಾರ್ಯ•48 ವರ್ಷ ಬಡವರ ಸೇವೆ

Team Udayavani, Jul 20, 2019, 3:38 PM IST

bk-tdy-5

ಬಾಗಲಕೋಟೆ: ಸುದ್ದಿಗೋಷ್ಠಿಯಲ್ಲಿ ಡಾ| ವಿಕಾಸ ದಡ್ಡೇನವರ ಮಾತನಾಡಿದರು.

ಬಾಗಲಕೋಟೆ: ಜಿಲ್ಲೆಯಲ್ಲಿ ಲಯನ್ಸ್‌ ಕ್ಲಬ್‌ನಿಂದ ಕೈಗೊಂಡ ಹಲವು ಸಾಮಾಜಿಕ ಸೇವೆಗೆ 8 ಪ್ರಶಸ್ತಿಗಳು ಬಂದಿದ್ದು, ಪ್ರಸಕ್ತ ವರ್ಷ ಇನ್ನೂ ಹೆಚ್ಚಿನ ಸಾಮಾಜಿಕ ಸೇವೆ ಕೈಗೊಳ್ಳಲು ಲಯನ್ಸ್‌ ಕ್ಲಬ್‌ ಮುಂದಾಗಿದೆ ಎಂದು ಕ್ಲಬ್‌ನ ನಿರ್ಗಮಿತ ಅಧ್ಯಕ್ಷ ಡಾ| ವಿಕಾಸ ದಡ್ಡೇನವರ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಯನ್ಸ್‌ ಕ್ಲಬ್‌ನ ಜಿಲ್ಲಾ ಶಾಖೆ, ಕಳೆದ 48 ವರ್ಷಗಳಿಂದ ಬಡವರ ಸೇವೆಯಲ್ಲಿ ತೊಡಗಿದೆ. ಪ್ರಸ್ತುತ ವರ್ಷ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ನೂತನ ಪದಾಧಿಕಾರಿಗಳು, ಹಲವು ವಿನೂತನ ಸೇವೆಗೈಯಲು ಸಜ್ಜಾಗಿದ್ದಾರೆ ಎಂದರು.

ಕ್ಲಬ್‌ನ ನೂತನ ಅಧ್ಯಕ್ಷರಾಗಿ ಖ್ಯಾತ ಚಿಕ್ಕ ಮಕ್ಕಳ ತಜ್ಞವೈದ್ಯ ಡಾ| ರಾಘವೇಂದ್ರ ವನಕಿ ಜು.21ರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಕಾರ್ಯದರ್ಶಿಯಾಗಿ ವೈಜನಾಥ ಪಾಟೀಲ, ಖಜಾಂಚಿಯಾಗಿ ಹರ್ಷಾ ಕಂಠಿ ಆಯ್ಕೆಯಾಗಿದ್ದಾರೆ. ಲಯನ್ಸ್‌ ಕ್ಲಬ್‌ನ ಅಧ್ಯಕ್ಷೆಯಾಗಿ ಡಾ| ಸುಚಿತ್ರಾ ವನಕಿ, ಕಾರ್ಯದರ್ಶಿಯಾಗಿ ರಜನಿ ಪಾಟೀಲ, ಖಜಾಂಚಿಯಾಗಿ ಶೃತಿ ಕಂಠಿ ನೇಮಕಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಲಯನ್ಸ್‌ ಕ್ಲಬ್‌ನ ಉಪ ಶಾಖೆ ರಚನೆ ಮಾದು, ಅದರ ಅಧ್ಯಕ್ಷೆಯಾಗಿ ಡಾ| ಅರ್ಚನಾ ದಡ್ಡೇನವರ, ಕಾರ್ಯದರ್ಶಿಯಾಗಿ ಡಾ| ಕ್ಷಮತಾ ಕೆರೂಡಿ, ಖಜಾಂಚಿಯಾಗಿ ಸುಷ್ಮಾ ಹಿರೇಮಠ, ಜು.21ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿವರಿಸಿದರು.

ಅಗತ್ಯವಿದ್ದಲ್ಲಿ ಲಯನ್ಸ್‌: ಎಲ್ಲಿ ಅಗತ್ಯವಿದೆಯೋ ಅಲ್ಲಿ ಲಯನ್ಸ್‌ ಇದೆ ಎಂಬ ಗುರಿಯೊಂದಿಗೆ ವಿಶ್ವದಾದ್ಯಂತ ಲಯನ್ಸ್‌ ಸಂಸ್ಥೆ ಸೇವೆ ಸಲ್ಲಿಸುತ್ತಿದೆ. ವಿಶ್ವದ 200 ದೇಶಗಳು, 47 ಸಾವಿರ ಶಾಖೆಗಳು ಹಾಗೂ 1.4 ಮಿಲಿಯನ್‌ ಸದಸ್ಯರೊಂದಿಗೆ ಸಮಾಜದ ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ಪರಿಸರ ಸಂರಕ್ಷಣೆ, ಯುವ ಜನತೆ ಏಳ್ಗೆ, ಹಸಿವು ಮುಕ್ತ ಭಾರತ, ಜನರ ಮೊಗದಲ್ಲಿ ಸಂತಸ ಎಂಬ ಕಳಿಕಳಿಯೊಂದಿಗೆ ನಿರಂತರ ಶ್ರಮಿಸುತ್ತಿದೆ. ಕಳೆದ 2018ರಲ್ಲಿ ಲಯನ್ಸ್‌ ಕ್ಲಬ್‌ 100ಕ್ಕೂ ಹೆಚ್ಚು ಸಾಮಾಜಿಕ ಚಟುವಟಿಕೆ ಹಮ್ಮಿಕೊಂಡು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೇ ಸಾಮಾಜಿಕ ಸೇವೆಗೆ 8 ಪ್ರಶಸ್ತಿಗಳು ಲಭಿಸಿವೆ ಎಂದು ತಿಳಿಸಿದರು.

ಲಯನ್ಸ್‌ ಕ್ಲಬ್‌ ನೂತನ ಅಧ್ಯಕ್ಷ ಡಾ| ರಾಘವೇಂದ್ರ ವನಕಿ ಮಾತನಾಡಿ, ಹಿಂದಿನ ವರ್ಷದ ಪದಾಧಿಕಾರಿಗಳ ಸಲಹೆ, ಮಾರ್ಗದರ್ಶನದ ಜತೆಗೆ ಮುಂಬರುವ ವರ್ಷ ಜಿಲ್ಲೆಯಲ್ಲಿ ಹಮ್ಮಿಕೊಳ್ಳಬೇಕಾದ ಸಾಮಾಜಿಕ ಸೇವೆಗಳ ಪಟ್ಟಿ ಮಾಡಿಕೊಳ್ಳಲಾಗಿದೆ. ಮುಖ್ಯವಾಗಿ ಶ್ರೀಮಂತರು, ಉದ್ಯಮಿಗಳ ಮನೆಯಲ್ಲಿ ಅನಗತ್ಯವಾಗಿರುವ ವಸ್ತುಗಳನ್ನು ಸಂಗ್ರಹಿಸಿ, ಅಗತ್ಯವಿರುವವರ ಮನೆಗೆ ಹಂಚುವ ವಿಶೇಷ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಲಯನ್ಸ್‌ ಕ್ಲಬ್‌ನ ಎಂ.ಎಸ್‌. ಜಿಗಜಿನ್ನಿ, ಹನಮಂತ ದೊಡಮನಿ, ವೈಜನಾಥ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.