ಕಿತ್ತೋದ ರಸ್ತೆಯಲ್ಲಿ ಪ್ರಯಾಸದ ಪ್ರಯಾಣ; ಯಾಮಾರಿದರೆ ಅಪಾಯ

ವಜ್ಜರಮಟ್ಟಿ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆಯಲ್ಲಿ ಓಡಾಡಲು ಕಷ್ಟವಾಗುತ್ತಿದೆ.

Team Udayavani, Oct 26, 2022, 4:05 PM IST

ಕಿತ್ತೋದ ರಸ್ತೆಯಲ್ಲಿ ಪ್ರಯಾಸದ ಪ್ರಯಾಣ; ಯಾಮಾರಿದರೆ ಅಪಾಯ

ಮುಧೋಳ: ವಜ್ಜರಮಟ್ಟಿ-ಹಲಗಲಿ ಸಂಪರ್ಕ ರಸ್ತೆ ಸಂಪೂರ್ಣ ಕಿತ್ತುಹೋಗಿದ್ದು, ಪ್ರಯಾಣಿಕರು ಪ್ರಯಾಣಕ್ಕಾಗಿ ಪ್ರಯಾಸ ಪಡುವಂತಾಗಿದೆ. ವಜ್ಜರಮಟ್ಟಿಯಿಂದ ಹಲಗಲಿ ಗ್ರಾಮಕ್ಕೆ 11 ಕಿ.ಮೀ ಅಂತರವಿದೆ ಅದರಲ್ಲಿ ಹಲಗಲಿಯಿಂದ ಆರಂಭದಲ್ಲಿ 6 ಕಿ.ಮೀ ರಸ್ತೆ ಸುಸಜ್ಜಿತವಾಗಿದ್ದು, ಇನ್ನೂ 5 ಕಿ.ಮೀ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದೆ. ಸಂಪೂರ್ಣವಾಗಿ ಕಿತ್ತುಹೋಗಿರುವ ರಸ್ತೆಯಲ್ಲಿ ಸಂಚರಿಸುವ ಬೈಕ್‌ ಸವಾರರು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಯಾಮಾರಿದರೆ ಅಪಾಯ: ರಸ್ತೆ ಮಧ್ಯದಲ್ಲಿ ಮೊಣಕಾಲುದ್ದದ ಗುಂಡಿಗಳು ನಿರ್ಮಾಣವಾಗಿದ್ದು, ಈ ಮಾರ್ಗದಲ್ಲಿ ಕಬ್ಬು ತುಂಬಿದ ವಾಹನ ಹಾಗೂ ಗರಸು ಸಾಗಿಸುವ ಭಾರಿ ವಾಹನಗಳ ಸಂಚಾರ ಹೆಚ್ಚಾಗಿದೆ. ಗುಂಡಿಗಳೇ ಹೆಚ್ಚಿರುವ ರಸ್ತೆಯಲ್ಲಿ ಕಬ್ಬು ಸಾಗಣೆ ವಾಹನದ ಚಾಲಕರು ಸ್ವಲ್ಪ ಯಾಮಾರಿದರೂ ಅಪಾಯ ಕಟ್ಟಿಟ್ಟ ಬುತ್ತಿ. ಗರುಸು ತುಂಬಿರುವ ದೊಡ್ಡ ಲಾರಿಗಳು ರಸ್ತೆಯಲ್ಲಿ ಬಂದರೆ ಮತ್ತೂಂದು ವಾಹನಕ್ಕೆ ಜಾಗವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾವಾಗುತ್ತದೆ. ರಸ್ತೆಯನ್ನು ವಿಸ್ತರಿಸಿ ಸುಧಾರಿಸಿದರೆ ಈ ಮಾರ್ಗದಲ್ಲಿ ಓಡಾಡುವ ಎಲ್ಲ ತೆರನಾದ ವಾಹನ ಸವಾರರಿಗೆ ಅನುಕೂಲವಾಗುತ್ತದೆ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಮಳೆಯಾದರೆ ಪರಿಸ್ಥಿತಿ ತೀರ ಗಂಭೀರ: ಇನ್ನು ಮಳೆಯಾದರೆ ಈ ಮಾರ್ಗದಲ್ಲಿ ಸಂಚರಿಸುವುದು ಪ್ರಯಾಸದ ಸಂಗತಿ. ಕಿತ್ತುಹೋಗಿರುವ ರಸ್ತೆಯಲ್ಲಿನ ಗುಂಡಿಗಳಲ್ಲಿ ಹೆಚ್ಚು ನೀರು ಸಂಗ್ರಹಗೊಂಡು ಸವಾರರಿಗೆ ರಸ್ತೆಯೇ ಕಾಣುವುದಿಲ್ಲ. ಇಂತಹ ರಸ್ತೆಯಲಿ ಸಂಚರಿಸುವ ವೇಳೆಯಲ್ಲಿ ಎಷ್ಟೋ ಬೈಕ್‌
ಸವಾರರು ಬಿದ್ದು ಗಾಯಗೊಂಡಿದ್ದು ಉಂಟು.

4 ಕಿ.ಮೀ ರಸ್ತೆ ಸುಧಾರಣೆಯಾಗಬೇಕಿದೆ: ವಜ್ಜರಮಟ್ಟಿ ಗ್ರಾಮಕ್ಕೆ ಹೊಂದಿಕೊಂಡು ಅಂದಾಜು 1.5 ಕಿ.ಮೀ ರಸ್ತೆ ದುರಸ್ತಿ ಕಾರ್ಯ ಸಾಗಿದೆ. ಇನ್ನು ಮಧ್ಯದಲ್ಲಿ ಬರುವ ಕಲ್ಲುಕಂಟಿ ಹಳ್ಳದಿಂದ ಹಲಗಲಿ ಗ್ರಾಮದವರೆಗಿನ ರಸ್ತೆಯೂ ಸುಸಜ್ಜಿತವಾಗಿದೆ. ಆದರೆ ಮಧ್ಯದಲ್ಲಿ ಬರುವ 4 ಕಿ.ಮೀ. ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು, ರಸ್ತೆ ದುರಸ್ತಿಗೆ ಅ ಧಿಕಾರಿಗಳು ಇನ್ನಾದರೂ ಮುಂದಾಗಬೇಕಿದೆ.

2 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ರಸ್ತೆ: ಪ್ರಸ್ತುತ ರಸ್ತೆಯನ್ನು ಎರಡು ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿತ್ತು. ಆದರೆ ನಿರ್ಮಾಣಗೊಂಡು ಮೂರೇ ತಿಂಗಳಿಗೆ ರಸ್ತೆ ಹಾಳಾಗಲು ಆರಂಭಿಸಿತ್ತು. ಅಂದಿನಿಂದ ಕಿತ್ತುಹೋಗುತ್ತಿರುವ ರಸ್ತೆ ದುರಸ್ತಿಗೆ ಆಡಳಿತ ಯಂತ್ರ ಮಾತ್ರ ಮುಂದಾಗದಿರುವುದು ದುರ್ದೈವದ ಸಂಗತಿ.

ಹಲಗಲಿ ವಜ್ಜರಮಟ್ಟಿ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆಯಲ್ಲಿ ಓಡಾಡಲು ಕಷ್ಟವಾಗುತ್ತಿದೆ.ಸಂಬಂಧಿಸಿದ ಅಧಿಕಾರಿಗಳು ಶೀಘ್ರ ರಸ್ತೆ ದುರಸ್ತಿಗೆ ಮುಂದಾಗಬೇಕು.
ಅರುಣ ಬಡಿಗೇರ,
ದ್ವಿಚಕ್ರವಾಹನ ಸವಾರ

ಹಲಗಲಿ ವಜ್ಜರಮಟ್ಟಿ ರಸ್ತೆಯಲ್ಲಿ 0ಯಿಂದ 1.8 ಕಿ.ಮೀ.ವರೆಗಿನ ಕಾಮಗಾರಿ ಪ್ರಗತಿ ಹಂತದಲ್ಲಿದೆ. 2 ಕಿ.ಮೀ. ಕಲ್ಲಿನಿಂದ 4ಕಿ.ಮೀ. ಕಲ್ಲಿನವರೆಗಿನ ರಸ್ತೆ ದುರಸ್ತಿಗೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರ ಕಾರ್ಯಾರಂಭವಾಗಲಿದೆ. ಇನ್ನುಳಿದಂತೆ 4 ಕಿ.ಮೀ ಕಲ್ಲಿನಿಂದ 6 ಕಿ.ಮೀ ಕಲ್ಲಿನವರೆಗೆ ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು.
ಪ್ರಮೋದ ಹೊಟ್ಟಿ, ಲೋಕೋಪಯೋಗಿ ಎಇಇ

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.