ಪ್ರಶಸ್ತಿ ಹಣ ಸಸಿ ನೆಡಲು ಕೊಟ್ಟ ಬಾಲಕ: ಜಿಲ್ಲಾಧಿಕಾರಿ ಮೆಚ್ಚುಗೆ
Team Udayavani, Jul 6, 2019, 9:51 AM IST
ಬಾಗಲಕೋಟೆ: ವಿದ್ಯಾರ್ಥಿ ಸಮರ್ಥ ಪರಾಂಡೆ ಪ್ರಶಸ್ತಿ ಹಣದಲ್ಲಿ ತಂದ ಸಸಿಗಳನ್ನು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ನೆಟ್ಟರು.
ಬಾಗಲಕೋಟೆ: ಚಿತ್ರಕಲೆ ಸ್ಪರ್ಧೆಯೊಂದರಲ್ಲಿ ನಗದು ಬಹುಮಾನ ಪಡೆದಿದ್ದ ವಿದ್ಯಾರ್ಥಿಯೊಬ್ಬ ಆ ಹಣವನ್ನು ತಾನು ಕಲಿಯುವ ಶಾಲೆ ಆವರಣದಲ್ಲಿ ಸಸಿ ನೆಡಲು ಬಳಕೆ ಮಾಡಿದ್ದು, ಈ ಕಾರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದ್ದಾರೆ.
ಕೇಂದ್ರಿಯ ವಿದ್ಯಾಲಯದ 5ನೇ ತರಗತಿ ವಿದ್ಯಾರ್ಥಿ ಸಮರ್ಥ ಪರಾಂಡೆ ಎಂಬ ವಿದ್ಯಾರ್ಥಿ, ಈಚೆಗೆ ಲೈನ್ಸ್ ಕ್ಲಬ್ನಿಂದ ಹಮ್ಮಿಕೊಂಡಿದ್ದ ಚಿತ್ರಕಲೆ ಬಿಡಿಸುವ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದಿದ್ದ. 1ನೇ ಸ್ಥಾನ ಪಡೆದ ವಿದ್ಯಾರ್ಥಿ ಸಮರ್ಥಗೆ, ಲೈನ್ಸ್ ಕ್ಲಬ್ನಿಂದ 1,500 ನಗದು ಬಹುಮಾನ ನೀಡಲಾಗಿತ್ತು.
ಈ ಬಹುಮಾನದ ಹಣವನ್ನು, ಕೇಂದ್ರೀಯ ವಿದ್ಯಾಲಯ ಆವರಣದಲ್ಲಿ ಸಸಿ ನೆಡುವ ಉದ್ದೇಶಕ್ಕಾಗಿ ಶಾಲೆಗೆ ನೀಡಿದ್ದು, ಶಾಲೆಯ ಪ್ರಾಚಾರ್ಯರು ಮತ್ತು ಸಿಬ್ಬಂದಿ, ವಿದ್ಯಾರ್ಥಿ ನೀಡಿದ ಹಣದಲ್ಲಿ ಬೇವು, ಹುಣಸೆ ಸೇರಿದಂತೆ ವಿವಿಧ ಜಾತಿಯ 50 ಸಸಿಗಳನ್ನು ತರಿಸಿ, ಶಾಲೆಯ ಆವರಣದಲ್ಲಿ ನೆಟ್ಟಿದ್ದಾರೆ.
ವಿದ್ಯಾರ್ಥಿಯ ಪರಿಸರ ಸ್ನೇಹಿ ಕಾರ್ಯಕ್ಕೆ ಕೇಂದ್ರೀಯ ವಿದ್ಯಾಲಯದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಶಾಲೆಗೆ ಆಗಮಿಸಿ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದರು. ಅಲ್ಲದೇ ವಿದ್ಯಾರ್ಥಿ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ