ಬಾಗಲಕೋಟೆ: ಸಂಭ್ರಮದ ಮಳೆರಾಜೇಂದ್ರಸ್ವಾಮಿ ರಥೋತ್ಸವ
Team Udayavani, Mar 19, 2024, 2:16 PM IST
ಉದಯವಾಣಿ ಸಮಾಚಾರ
ಬಾಗಲಕೋಟೆ: ಜಲ ತತ್ವ ಸಿದ್ಧಾಂತ ಪ್ರತಿಪಾದನೆ, ಜಲ ಪೂಜಿಸುವ ಮಳೆ ಆರಾಧನೆಯ ಮಠದ ಶ್ರೀ ಮಳೆರಾಜೇಂದ್ರ ಸ್ವಾಮಿ ಮಠದ ಜಾತ್ರೋತ್ಸವ ನಿಮಿತ್ತ ಹೊಸ ಮುರನಾಳ ಗ್ರಾಮದಲ್ಲಿ ಸೋಮವಾರ ಸಹಸ್ರಾರು ಭಕ್ತರ ಮಧ್ಯೆ ಮಹಾ ರಥೋತ್ಸವ ಸಂಭ್ರಮದಿಂದ ಜರುಗಿತು.
ಬೆಳಗ್ಗೆ ಶ್ರೀ ಮಳೆರಾಜೇಂದ್ರಸ್ವಾಮಿ ಮೂರ್ತಿಗೆ ಅಭಿಷೇಕ ಮಹಾ ಮಂಗಳಾರುತಿ, ಭಗವತದ್ಗೀತಾ ಪಾರಾಯಣ ನಡೆಯಿತು. ವಿಶೇಷ ಪುಷ್ಪಾಲಂಕಾರದೊಂದಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹರಕೆ ಹೊತ್ತ ಭಕ್ತರು ಉರುಳು ಸೇವೆ ಮಾಡಿ ಹರಕೆ ತೀರಿಸಿದರು.
ಮಧ್ಯಾಹ್ನ ಸಾವಿರಾರು ಮಹಿಳೆಯರ ಆರತಿ ಸೇವೆಯೊಂದಿಗೆ ಸ್ವಾಮಿ ಮೂರ್ತಿ ಹೊತ್ತ ಪಲ್ಲಕ್ಕಿ, ನಂದಿಕೋಲು, ಪುರವಂತರ
ಸೇವೆಯೊಂದಿಗೆ ಭಾಜಾ-ಭಜಂತ್ರಿ ಕರಡಿ ಮಜಲು ಸೇವೆ ನೆರವೇರಿದವು. ಮುಸ್ಲಿಂ ಮಹಿಳೆಯರು ದೀಪದಾರತಿಗಳಿಗೆ ಎಣ್ಣೆ ನೀಡಿದರು.
ಸಣ್ಣ ರಥೋತ್ಸವದ ನಂತರ ಶ್ರೀಮಠದಲ್ಲಿ ಮಳೆರಾಜೇಂದ್ರಸ್ವಾಮಿ ಮೂರ್ತಿಗೆ ಸಕಲ ಭಕ್ತರೊಡನೆ ವಿಶೇಷ ಮಂಗಳಾರತಿ
ನೆರವೇರಿಸಲಾಯಿತು. ಸಂಜೆ ಸಹಸ್ರಾರು ಜನರ ಮಧ್ಯ ಜಗದ್ಗುರು ಶ್ರೀ ಮಳೆರಾಜೇಂದ್ರಸ್ವಾಮಿ ಮಹಾರಥೋತ್ಸವ ಜರುಗಿತು. ನಂತರ ಸಕಲ ಭಕ್ತರು ಮಹಾಪ್ರಸಾದ ಸ್ವೀಕರಿಸಿದರು. ಹಿಂದು-ಮುಸ್ಲಿಂ ಭಾವೈಕ್ಯತೆ ಮಠವಾಗಿದ್ದರಿಂದ ಸಕಲ
ಧರ್ಮದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!