ಸಹಕಾರ ಪಟ್ಟಣ ಬ್ಯಾಂಕ್‌ಗಳ ಮೇಲೆ ಗದಾಪ್ರಹಾರ

ಸಹಕಾರಿ ಕ್ಷೇತ್ರದಿಂದ ಸೌಲಭ್ಯಗಳು ದೊರತಿವೆಯೇ ಹೊರತು ರಾಷ್ಟ್ರೀಕೃತ ಬ್ಯಾಂಕಿನಿಂದಲ್ಲ

Team Udayavani, Jul 23, 2022, 6:17 PM IST

ಸಹಕಾರ ಪಟ್ಟಣ ಬ್ಯಾಂಕ್‌ಗಳ ಮೇಲೆ ಗದಾಪ್ರಹಾರ

ಕೂಡಲಸಂಗಮ: ರಾಜ್ಯ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಸಹಕಾರ ಪಟ್ಟಣ ಬ್ಯಾಂಕ್‌ಗಳು ಬೆಳೆಯಬಾರದು ಎಂದು ಗದಪ್ರಹಾರ ಮಾಡುತ್ತಿವೆ. ಇದರಿಂದ ಸಹಕಾರಿ ಬ್ಯಾಂಕ್‌ಗಳು ಬಹಳಷ್ಟು ಕಷ್ಟ, ತೊಂದರೆ ಅನುಭವಿಸುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ.ಪಟ್ಟಣಶೆಟ್ಟಿ ಹೇಳಿದರು.

ಕೂಡಲಸಂಗಮ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕ್‌ಗಳ ಮಹಾಮಂಡಳದಿಂದ ರಾಜ್ಯದ ಪಟ್ಟಣ ಸಹಕಾರ ಬ್ಯಾಂಕ್‌ಗಳ ಆಡಳಿತ ಮಂಡಳಿ ಸದಸ್ಯರಿಗೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಸಹಕಾರ ಬ್ಯಾಂಕ್‌ ಗಳ ಬೆಳವಣಿಗೆಯಲ್ಲಿ ಬಹಳಷ್ಟು ಜನರ ಶ್ರಮ ಇರುವುದು. ಸರ್ಕಾರ ಬ್ಯಾಂಕ್‌ಗಳ ಬೆಳವಣಿಗೆಗೆ ಸಹಕರಿಸಬೇಕು. ಇಂತಹ ವಿಚಾರ ಸಂಕಿರಣಗಳ ಮೂಲಕ ಬ್ಯಾಂಕ್‌ಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕ್‌ಗಳ ಮಹಾಮಂಡಳದ ನಿರ್ದೇಶಕಿ ಮಲ್ಲಮ್ಮ ಯಾಳವಾರ ಮಾತನಾಡಿ, ದೇಶದ ಬಡತನ ನಿರ್ಮೂಲನೆಯಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ನಗರ, ಗ್ರಾಮೀಣ ಪ್ರದೇಶದ ಜನರಿಗೆ ಸಹಕಾರಿ ಕ್ಷೇತ್ರದಿಂದ ಸೌಲಭ್ಯಗಳು ದೊರತಿವೆಯೇ ಹೊರತು ರಾಷ್ಟ್ರೀಕೃತ ಬ್ಯಾಂಕಿನಿಂದಲ್ಲ ಎಂದರು.

ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕ್‌ಗಳ ಮಹಾಮಂಡಳದ ನಿರ್ದೇಶಕ ರಾಜಕುಮಾರ ಬಾದವಾಡಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಯಕತ್ವದ ಗುಣ ಬೆಳೆಸುವುದು ಸಹಕಾರಿ ಬ್ಯಾಂಕಿನ ಗುರಿ. ಸರ್ಕಾರ ಆರ್‌ಬಿಐ ಮೂಲಕ ಸಹಕಾರಿ ಬ್ಯಾಂಕ್‌ಗಳನ್ನು ಕುಗ್ಗಿಸುವ ಕಾರ್ಯ ಮಾಡುತ್ತಿದೆ. ಬ್ಯಾಂಕಿನ ಸಿಬ್ಬಂದಿ ಪ್ರಾಮಾಣಿಕತೆಯಿಂದ ಜನರ ದುಡ್ಡನ್ನು ಸಮರ್ಥವಾಗಿ ಕಾಯುವ ಕಾರ್ಯ ಮಾಡಬೇಕು ಎಂದರು.

ಮಹಾಮಂಡಳದ ನಿರ್ದೇಶಕ ಟಿ.ಆರ್‌. ನಿರಂಜನ, ಕೃಷ್ಣಮೂರ್ತಿ ಭಂಡಾರಿ, ಶರಣಪ್ಪ ವಾರದ, ಮಾಜಿ ನಿರ್ದೇಶಕ ಶಶಿಕಾಂತ ಪಾಟೀಲ ಇದ್ದರು. ಸಮಾರಂಭದ ನಂತರ ಆರ್‌ಬಿಐನ ನಿವೃತ್ತ ಎಜಿಎಂ ಎಚ್‌.ಎಸ್‌. ಮಹಾದೇವಸ್ವಾಮಿ, ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಆಡಳಿತ ಮಂಡಳಿ ನಿರ್ದೇಶಕರ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪಾತ್ರ, ಸಹಕಾರ ಸಂಘಗಳ ಅಪರ ನಿಬಂಧಕ ಎಚ್‌.ಎಸ್‌.ನಾಗರಾಜಯ್ಯ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳು ಹಾಗೂ ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ವಸೂಲಾತಿ ನಿರ್ವಹಣೆ ವಿಷಯ ಕುರಿತು ಉಪನ್ಯಾಸ ನೀಡಿದರು. ವಿಚಾರ ಸಂಕಿರಣಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ 300ಕ್ಕೂ ಅಧಿಕ ಸಹಕಾರಿ ಬ್ಯಾಂಕ್‌ಗಳ ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.