ಒಂದು ಜಿಲ್ಲೆ-ಒಂದು ಉತ್ಪನ್ನ; ಬೆಲ್ಲದ ಹಬ್ಬದ

ಬೆಲ್ಲವನ್ನು ಬಳಸಿ ಯಾವ ಯಾವ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಪರಿಚಯಿಸು ಕೆಲಸ ಮಾಡುತ್ತಿದ್ದಾರೆ

Team Udayavani, Dec 24, 2021, 5:44 PM IST

ಒಂದು ಜಿಲ್ಲೆ-ಒಂದು ಉತ್ಪನ್ನ; ಬೆಲ್ಲದ ಹಬ್ಬದ

ಬಾಗಲಕೋಟೆ: ನಗರದ ವಿದ್ಯಾಗಿರಿಯ ಬೀಮ್ಸ್‌ ಎಂಬಿಎ ಕಾಲೇಜಿನಲ್ಲಿ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಎರಡು ದಿನಗಳ ಬೆಲ್ಲದ ಹಬ್ಬದ ಕಾರ್ಯಕ್ರಮಕ್ಕೆ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು.

ಗುರುವಾರ ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಬಿವಿವ ಸಂಘದ ಎಂ.ಬಿ.ಎ ಕಾಲೇಜ, ಮುಧೋಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಕೃಷಿಕ ಸಮಾಜದ ಸಹಯೋಗದಲ್ಲಿ ರೈತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಬೆಲ್ಲದ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಆಯಾ ಜಿಲ್ಲೆಯ ಪ್ರಮುಖ ಬೆಳೆಯನ್ನು ಆಯ್ಕೆ ಮಾಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಗೆ ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಬೆಲ್ಲವನ್ನು ಆಯ್ಕೆ ಮಾಡಲಾಗಿದ್ದು, ಬೆಲ್ಲದಿಂದ ವಿವಿಧ ಉತ್ಪನ್ನಗಳನ್ನು ತಯಾರಿಸಿ ಮಾರುಕಟ್ಟೆಯಲ್ಲಿ ಮಾರುವುದರಿಂದ ರೈತ ಬೆಳೆದ ಬೆಳೆಗೆ ಬೆಲೆ ಬರುವುದಲ್ಲದೇ ಆದಾಯ ಹೆಚ್ಚಿಸಲು ಸಾಧ್ಯವಾಗುತ್ತದೆ. ಇದರಿಂದ ರೈತರ ಶಕ್ತಿ ಹೆಚ್ಚಿಸಿದಂತಾಗುತ್ತದೆ. ಬೆಲ್ಲದಿಂದ ಉತ್ಪಾದಿಸಲು ಕಿರು ಸಂಸ್ಕರಣಾ ಘಟಕ ಸ್ಥಾಪನೆ ಸರಕಾರ ಹೆಚ್ಚಿನ ಒತ್ತು ನೀಡಿದ್ದು, ಸಹಾಯಧನ ರೂಪದಲ್ಲಿ ಸಾಲವನ್ನು ಸಹ ಒದಗಿಸಲಾಗುತ್ತಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳು 2022ರೊಳಗಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಹಲವಾರು ಯೋಜನೆ ಹಾಗೂ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಅದರಂತೆ ಆಯಾ ಜಿಲ್ಲೆಗಳಲ್ಲಿನ ಪ್ರಮುಖ ಬೆಳೆಗಳನ್ನು ಆಯ್ಕೆ ಮಾಡಿ ಆ ಬೆಳೆಯಿಂದ ಯಾವ ಯಾವ ಉತ್ಪನ್ನಗಳನ್ನು ತಯಾರಿಸಬಹುದಾಗಿದೆ ಎಂಬ ಪರಿಕಲ್ಪನೆಯನ್ನು ರೈತರ ಹಾಗೂ ಇತರ ಸಣ್ಣ ಪುಟ್ಟ ಉದ್ದಿಮೆದಾರರಿಗೆ ಪರಿಚಯಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ.ರಾಜೇಂದ್ರ ಮಾತನಾಡಿ, ರೈತರು ಬೆಳೆದ ಬೆಳೆಯಿಂದ ಉತ್ಪಾ ಸಿದ ವಸ್ತುಗಳನ್ನು ಮಾರುಕಟ್ಟೆಯಲ್ಲಿ ಮಾರಲಾಗುತ್ತಿದೆ. ಜನರು ಸಹ ಜಾಗೃತರಾಗಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ರೈತರ ಆದಾರ ದ್ವಿಗುಣಗೊಳಿಸಲು ಸರಕಾರ ಹಲವಾರು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ವಿವಿಧ ಯೋಜನೆಗಳಿಗೆ ಕಿರು ಸಾಲ, ತಂತ್ರಜ್ಞಾನಗಳ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.

ಜಿಲ್ಲಾ ಜಂಟಿ ಕೃಷಿ ನಿದೇಶಕಿ ಡಾ|ಚೇತನಾ ಪಾಟೀಲ ಮಾತನಾಡಿ, ರೈತರು ಸಹ ಉದ್ಯಮಿಗಳಾಗಿ ಹೊರಹೊಮ್ಮಬೇಕು. ಶೇಖರಣೆ, ಸಂಸ್ಕರಣೆ ಸಾಧ್ಯವಾಗಿಸಲು ಸರಕಾರ ಕ್ರಮಕೈಗೊಂಡಿದೆ. ಮಾರುಕಟ್ಟೆ ಬಗ್ಗೆ ಪರಿಚಯಿಸಲು ನಗರದ ಎಂಬಿಎ ಕಾಲೇಜಿನ ವಿದ್ಯಾರ್ಥಿಗಳ ಸಹಕಾರ ಪಡೆಯಲಾಗುತ್ತಿದೆ. ಎಂಬಿಎ ವಿದ್ಯಾರ್ಥಿಗಳು ಮುಂದೆ ಉದ್ಯಮಿಗಳಾಗಲಿದ್ದು, ಬೆಲ್ಲವನ್ನು ಬಳಸಿ ಯಾವ ಯಾವ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ಪರಿಚಯಿಸು ಕೆಲಸ ಮಾಡುತ್ತಿದ್ದಾರೆ ಎಂದರು.

ಜಿ.ಪಂ ಸಿಇಒ ಟಿ.ಭೂಬಾಲನ್‌, ಬವಿವ ಸಂಘದ ಎಂಬಿಎ ಕಾಲೇಜಿನ ಪ್ರಾಚಾರ್ಯ ಆರ್‌.ಜಿ. ಅಳ್ಳೊಳ್ಳಿ, ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ|ಮೌನೇಶ್ವರಿ ಕಮ್ಮಾರ, ಎಂ.ಬಿ.ಎ ಕಾಲೇಜಿನ ಅಶೋಕ ಉಟಗಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಪಿ.ಕೆ.ಪಾಟೀಲ, ಕೃಷಿ ವಿಜ್ಞಾನಿ ಬಿ.ಎಚ್‌.ಬಿರಾದಾರ, ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಯಲ ಹಿರಿಯ ವಿಜ್ಞಾನ ಡಾ| ಬಾಬಾಸಾಹೇಬ ಬೋರಸೆ, ಧಾರವಾಡದ
ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿ ಡಾ| ಹೇಮಲತಾ ಪೋದ್ದಾರ, ಬಿವಿವ ಸಂಸ್ಥೆಯ ಇಂಜಿನೀಯರಿಂಗ್‌ ಕಾಲೇಜಿನ ಪ್ರಾದ್ಯಾಪಕ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ಭಾರತಿ ಮೇಟಿ ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಕೃಷಿ ಪ್ರಶಸ್ತಿ ಪ್ರದಾನ
ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಹಾಗೂ ಕೃಷಿ ಮಹಿಳೆ ಪ್ರಶಸ್ತಿಗೆ ಆಯ್ಕೆಯಾದ ರೈತರನ್ನು ಸನ್ಮಾನಿಸಲಾಯಿತು. ಬಾದಾಮಿ ತಾಲೂಕಿನ ಶಂಕರಗೌಡ ವೀರನಗೌಡ, ಜ್ಞಾನೇಶ್ವರ ವಿಠಲ ಮುಂದಿನಮನಿ, ಬಾಗಲಕೋಟೆಯ ಗೋವಿಂದ ಭಜಂತ್ರಿ, ಬೀಳಗಿಯ ಸುನೀತಾ ಮೇಟಿ, ಯಲ್ಲಪ್ಪ ಹಳ್ಳೂರ, ಜಮಖಂಡಿಯ ಶಶಿಕಾಂತ ಗಲಗಲಿ, ಚಿದಾನಂದ ಹಂದಿಗುಂದ, ಸಂತೋಷ ಮೈಗೂರ, ಮುಧೋಳ ತಾಲೂಕಿನ ಶಂಕರ ಗಣಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಲಾಯಿತು.

ಎಂಬಿಎ ವಿದ್ಯಾರ್ಥಿಗಳಿಂದ ಬೆಲ್ಲದ ಉತ್ಪನ್ನಗಳ ಪ್ರದರ್ಶನ ವಿದ್ಯಾಗಿರಿಯ ಬೀಮ್ಸ್‌ ಎಂಬಿಎ ಕಾಲೇಜಿನ ವಿದ್ಯಾರ್ಥಿಗಳು ಬೆಲ್ಲದಿಂದ ಎನೆಲ್ಲ ಉತ್ಪನ್ನಗಳನ್ನು ತಯಾರಿಸಬಹುದೆಂಬುದನ್ನು ಪ್ರದರ್ಶನದ ಮೂಲಕ ತೋರಿಸಿಕೊಟ್ಟರು. ಬೆಲ್ಲದಿಂದ ತಯಾರಿಸಲಾದ ವಿವಿಧ ಉತ್ಪನ್ನಗಳಾದ ಹುಳ್ಳಿ ಸಂಗಟಿ, ಗಸಗಸ ಪಾಯಿಸಾ, ಬೆಲ್ಲದ ಅನ್ನ, ಸಿರಿದಾನ್ಯಗಳ ಲಾಡು, ರಾಗಿ ಲಾಡು, ಬುಟಾ ಕಡಬು, ಶೇಂಗಾ ಚಿಕ್ಕಿ, ಬೆಲ್ಲದಗಾರಿಗೆ, ಉದುರು ಸಜ್ಜಕ, ಶೇಂಗಾ ಉಚಿಡಿ, ನವಣೆಯ ಹೋಳಿಗೆ, ಮಾದ್ಲಿ, ವಿಲೇಟ ಬಲ್ವಾ, ಲಡಕಿ ಲಾಡು, ಶೇಂಗಾ ಅಂಟು, ಮಿಠಾಯಿ ಹಾಗೂ ಮುಖದ ಕಾಂತಿಗೆ ಬೆಲ್ಲದ ಫೇಸ್‌ ಸ್ಕರ್ಬ್ ಮತ್ತು ಹೇರ್‌ ಮಾಸ್ಕ್ ಪ್ರದರ್ಶಿಸಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.