ಇನ್ನೂ ಆರಂಭಗೊಳ್ಳದ ಅಗ್ನಿಶಾಮಕ ಠಾಣೆ

ಮಂಜೂರಾಗಿ ನಾಲ್ಕು ವರ್ಷವಾದ್ರೂ ಜನರಿಗಿಲ್ಲ ಉಪಯೋಗ

Team Udayavani, Jul 2, 2019, 8:10 AM IST

Udayavani Kannada Newspaper

ಗುಳೇದಗುಡ್ಡ: ಅಗ್ನಿಶಾಮಕ ಠಾಣೆಗೆ ತಾತ್ಕಾಲಿಕ ಕಚೇರಿ ಆರಂಭಕ್ಕೆ ಪುರಸಭೆ ತಾತ್ಕಾಲಿಕ ಜಾಗ ನೀಡಿ ಒಪ್ಪಿಗೆ ಕೊಟ್ಟಿದೆ. ಆದರೆ, ಈಗ ಶಾಶ್ವತ ಜಾಗ ನೀಡಿದರೆ ಸೂಕ್ತ ಎಂದು ಅಗ್ನಿಶಾಮಕ ಇಲಾಖೆ ಹೇಳುತ್ತಿರುವುದು ತಾತ್ಕಾಲಿಕ ಕಚೇರಿ ಆರಂಭ ಅನುಮಾನ ಎನ್ನಲಾಗುತ್ತಿದೆ.

ಹೌದು, ಪಟ್ಟಣಕ್ಕೆ ಅಗ್ನಿಶಾಮಕ ಠಾಣೆ ಮಂಜೂರಿಯಾಗಿದ್ರೂ ಅದರ ಪ್ರಯೋಜನ ಮಾತ್ರ ಜನರಿಗೆ ಸಿಗುತ್ತಿಲ್ಲ. ಠಾಣೆ ಆರಂಭಿಸಲು ಕ್ಷೇತ್ರದ ಶಾಸಕ ಸಿದ್ದರಾಮಯ್ಯನವರ ಒತ್ತಡವಿದ್ದರೂ ಸಹ ಇಲಾಖೆ ಮಾತ್ರ ಮನಸ್ಸು ಮಾಡುತ್ತಿಲ್ಲ. ಇಲಾಖೆಯ ಕೇಳಿತ್ತು ತಾತ್ಕಾಲಿಕ ಜಾಗ: ಅಗ್ನಿಶಾಮಕ ಠಾಣೆ ಆರಂಭಿಸುವ ಕುರಿತು ಮಾಜಿ ಸಿಎಂ,ಶಾಸಕ ಸಿದ್ದರಾಮಯ್ಯ ಒತ್ತಾಯ ಮಾಡಿದ್ದರಿಂದ ಹುಬ್ಬಳಿ ಮುಖ್ಯ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಮತ್ತೆ ಸ್ಥಳ ಪರಿಶೀಲನೆ ಮಾಡಿದ್ದರೂ ಅಷ್ಟೇ ಅಲ್ಲದೇ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟರೇ ಕಚೇರಿ ಆರಂಭಿಸಲಾಗುವುದು ಎಂದು ಹೇಳಿದ್ದರು. ಆದರೆ, ಈಗ ಶಾಶ್ವತ ಜಾಗ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ಮಾತು ಕೇಳಿಬಂದಿದೆ.

ಮೇ 22ರಂದೇ ತಾತ್ಕಾಲಿಕ ಜಾಗ: ಪುರಸಭೆ ಆಡಳಿತಾಧಿಕಾರಿಗಳು, ಬಾಗಲಕೋಟೆಯ ಎಸಿ ಎಚ್.ಜಯಾ ಅವರು ಮೇ 22ರಂದು ಬಾದಾಮಿ ನಾಕಾದ ಬಳಿ ಇರುವ ಸಿಟಿ ಸರ್ವೆ ನಂ.3/2 ರಲ್ಲಿರುವ ಪುರಸಭೆ ಮಾಲಿಕತ್ವದಲ್ಲಿರುವ ವಾಹನ ನಿಲುಗಡೆ ಶೆಡ್‌ ಮತ್ತು ಆವರಣದಲ್ಲಿರುವ ವಸತಿಗೃಹ ಸಮೇತ ತಾತ್ಕಾಲಿಕವಾಗಿ ಅಗ್ನಿಶಾಮಕ ಘಟಕ ಆರಂಭಿಸಲು ಮಂಜೂರಾತಿ ನೀಡಿದ್ದಾರೆ.

ಏಕೆ ಶಾಶ್ವತ ಜಾಗಕ್ಕೆ ಹಠ: ಈ ಮೊದಲು ಮುಧೋಳದಲ್ಲಿ ತಾತ್ಕಾಲಿಕ ಜಾಗದಲ್ಲಿ ರಾಜಕೀಯ ಒತ್ತಡಕ್ಕೆ ಮಣಿದು ಆರಂಭಿಸಿದ ಅಗ್ನಿಶಾಮಕ ಕಚೇರಿಗೆ ಸಮರ್ಪಕ ಜಾಗೆ ಇದುವರೆಗೂ ದೊರೆತಿಲ್ಲ. ಕಾರಣ ಗುಳೇದಗುಡ್ಡದಲ್ಲಿಯೂ ಹೀಗಾಗ ಬಾರದೆಂಬ ಮುಂದಾಲೋಚನೆಯಿಂದ ಅಗ್ನಿಶಾಮಕ ಅಧಿಕಾರಿಗಳು ತಾತ್ಕಾಲಿಕವಾಗಿ ಕಚೇರಿ ಆರಂಭಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಶ್ವತ ಜಾಗ ಕೊಟ್ಟು ಬಿಟ್ಟರೇ ಠಾಣೆಗೆ ಬೇಕಾದ ಕಚೇರಿ, ಸಿಬ್ಬಂದಿಗಳ ವಸತಿಗೃಹ ನಿರ್ಮಿಸಿ, ಜನರಿಗೆ ಉತ್ತಮ ಸೇವೆ ನೀಡಲು ಅನುಕೂಲವಾಗುತ್ತದೆ ಎಂಬುದು ಇಲಾಖೆಯ ಮಾತು.

 

•ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.