ಐಹೊಳೆಯತ್ತ ಪ್ರವಾಸಿಗರ ದಂಡು


Team Udayavani, Oct 9, 2019, 12:21 PM IST

bk-tdy-1

ಅಮೀನಗಡ: ಪ್ರವಾಹ ಭೀತಿಯಿಂದಾಗಿ ಪ್ರವಾಸ ಮೊಟಕುಗೊಳಿಸಿದ್ದ ಪ್ರವಾಸಿಗರು ಪ್ರವಾಸಿ ತಾಣ ಐಹೊಳೆ ಕಡೆಗೆ ಮುಖ ಮಾಡಿದ್ದಾರೆ.

ರವಿವಾರ ಸೇರಿದಂತೆ ಮಹಾನವಮಿ, ವಿಜಯದಶಮಿ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಸಾಲು ಸಾಲು ರಜೆ ಹಾಗೂ ಮಕ್ಕಳಿಗೆ ದಸರಾ ನಿಮಿತ್ತ ಶಾಲೆಗಳ ರಜೆ ಹಿನ್ನೆಲೆಯಲ್ಲಿ ಐಹೊಳೆಯಲ್ಲಿರುವ ಐತಿಹಾಸಿಕ ಪ್ರಸಿದ್ಧ ದೇವಾಲಯಗಳನ್ನು ವೀಕ್ಷಣೆ ಮಾಡಲು ಆಗಮಿಸುವ ಪ್ರವಾಸಿಗರ ಸಂಖ್ಯೆ ದುಪ್ಪಟ್ಟಾಗಿದೆ. ವಿಶೇಷವಾಗಿ ಐಹೊಳೆ ಮತ್ತು ಪಟ್ಟದಕಲ್ಲಿಗೆ ಎರಡು ಮೂರು ದಿನಗಳಲ್ಲಿ ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಭಾಗಗಳಿಂದ ತಂಡೋಪತಂಡವಾಗಿ ಸಾವಿರಾರು ಜನ ಪ್ರವಾಸಿಗರು ಆಗಮಿಸಿದ್ದು, ಪ್ರವಾಸಿ ಸ್ಥಳಗಳಲ್ಲಿ ಜನಸಾಗರ ಕಂಡು ಬರುತ್ತಿದೆ.

ಪ್ರವಾಸಿಗರಿಂದ ಸ್ಮಾರಕ ವೀಕ್ಷಣೆ: ಐಹೊಳೆಗೆ ಬಂದ ಪ್ರವಾಸಿಗರು ಇತಿಹಾಸ ಪ್ರಸಿದ್ದ ಪಾರಂಪರಿಕ ಸ್ಮಾರಕಗಳಾದ ದುರ್ಗಾ ದೇವಾಲಯ, ಲಾಡಖಾನ, ಗೌಡರ ದೇವಾಲಯ, ಹುಚ್ಚಮಲ್ಲಿ ದೇವಾಲಯ, ರಾವಳಪಡಿ ಗುಹಾಂತರ, ಗಳಗನಾಥ ದೇವಾಲಯ,ಸೂರ್ಯನಾರಯಣನ ಗುಡಿ, ಕೊಂತಿ ಗುಡಿಗಳ ಗುಂಪು ಸೇರಿದಂತೆ 125 ಕ್ಕೂ ಹೆಚ್ಚು ದೇಗುಲಗಳನ್ನು ಐಹೊಳೆ ಪರಿಸರದಲ್ಲಿ ನೋಡಬಹುದಾಗಿದೆ ಮತ್ತು ವಿಶಾಲವಾದ ಸ್ಥಳಗಳನ್ನು ಒಳಗೊಂಡಂತೆ ದುರ್ಗದ ಗೋಡೆಗಳಿದ್ದು, ಈಗ ಅವುಗಳ ಕುರುಹುಗಳ ಮಾತ್ರ ಉಳಿದಿವೆ.

ಆರನೇಯ ಶತಮಾನದ ಈ ಕೋಟೆ ಕರ್ನಾಟಕದ ಒಂದು ಪ್ರಾಚೀನ ದುರ್ಗವಾಗಿದೆ. ಇಲ್ಲಿ ಬೃಹತ್‌ ಶಿಲಾಯುಗದ ಕಾಲದಿಂದಲೂ ಪ್ರಾಚ್ಯ ಅವಶೇ‚ಷಗಳು ಕಾಣಸಿಗುತ್ತವೆ. ಪ್ರವಾಸಿಗರು ಐಹೊಳೆಯಲ್ಲಿ ಸುತ್ತಾಡಿ ಪಾರಂಪರಿಕೆ ದೇವಾಲಯಗಳನ್ನು ವೀಕ್ಷಣೆ ಮಾಡಿ ರಜೆಯ ಮಜಾ ಪಡೆಯುತ್ತಿದ್ದಾರೆ. ಸ್ಥಳೀಯ ಪ್ರವಾಸೋದ್ಯಮ ಕಳೆ ಕಟ್ಟಿದೆ.

ವ್ಯಾಪಾರ ಜೋರು: ಐತಿಹಾಸಿಕ ಪ್ರವಾಸಿ ಕೇಂದ್ರ ಐಹೊಳೆಯಲ್ಲಿ ಪ್ರವಾಸಿಗರ ದಂಡು ಏರಿಕೆಯಾಗಿದೆ ಇದರಿಂದ ಪ್ರವಾಸಿಗರ ನಂಬಿದ್ದ ಹೋಟೆಲ್‌ಗ‌ಳು, ಸಣ್ಣ ವ್ಯಾಪಾರಿಗಳು, ಹಣ್ಣು ವ್ಯಾಪಾರಿಗಳು, ಬೀದಿ ವ್ಯಾಪಾರಿಗಳ ಮುಖದಲ್ಲಿ ಸಂತಸ ಮೂಡಿಸಿದೆ. ಪ್ರವಾಸಕ್ಕೆ ಆಗಮಿಸಿದ್ದ ಪ್ರವಾಸಿಗರು ತಿಂಡಿ ತಿನಿಸಿನ ಅಂಗಡಿಗಳಲ್ಲಿ ತಿಂಡಿ ಖರೀದಿ, ಹಣ್ಣು ಹಂಪಲು ಖರೀದಿ ಕೂಡಾ ಹೆಚ್ಚಾಗಿತ್ತು. ಪ್ರವಾಸಿ ತಾಣಗಳಲ್ಲಿ ಕೆಲ ಮೂಲಭೂತ ಕೊರತೆಯಿಂದ ಪ್ರವಾಸಿಗರು ಪರದಾಡಿದ್ದು ಕೂಡಾ ಕಂಡು ಬಂದಿದ್ದು ಮಾತ್ರ ಬೇಸರದ ಸಂಗತಿ.

ಐತಿಹಾಸಿಕ ಪ್ರವಾಸಿ ತಾಣ ಐಹೊಳೆಗೆ ಮಲಪ್ರಭಾ ನದಿಯ ಪ್ರವಾಹ ಬಂದ ಹೋದ ನಂತರ ಪ್ರವಾಸಿಗರ ಸಂಖ್ಯೆ ಬಹುತೇಕ ಕಡಿಮೆಯಾಗಿತ್ತು. ಈಗ ಸಾಲು ಸಾಲು ಸರ್ಕಾರಿ ಕಚೇರಿಯ ರಜೆ ಮತ್ತು ದಸರಾ ಹಬ್ಬದ ನಿಮಿತ್ತ ಶಾಲೆಗಳ ರಜೆ ಹಿನ್ನೆಲೆಯಲ್ಲಿ ಎರಡು ಮೂರು ದಿನಗಳಿಂದ ಪ್ರವಾಸಿಗರ ಆಗಮನ ಹೆಚ್ಚಾಗಿದೆ.  –ಬಿ.ಡಿ. ಮುತ್ತಗಿ, ಭಾರತೀಯ ಪುರಾತತ್ವ ಇಲಾಖೆ ಸಿಬ್ಬಂದಿ

 

-ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.