ಕೂಗಳತೆಯಲ್ಲಿದ್ದರೂ ಪ್ರಯೋಜನವಾಗದ ಕೆರೆ

•ಹಳ್ಳಿಗಳಿಗೆ 'ಸಂಜೀವಿನಿ'•ತುಂಬಿ ನಿಂತರೆ ಅಕ್ಕಪಕ್ಕದ ಸಾವಿರಾರು ಎಕರೆ ಜಮೀನುಗಳಿಗೆ ಅನುಕೂಲ

Team Udayavani, Jun 7, 2019, 8:58 AM IST

bk-tdy-2..

ಬನಹಟ್ಟಿ: ಬನಹಟ್ಟಿ ಸಮೀಪದ ಬೃಹತ್‌ ಕೆರೆ.

ಬನಹಟ್ಟಿ: ರೈತರ ಜೀವಜಲವಾಗಿರುವ ಬನಹಟ್ಟಿಯ ಕೆರೆಯಿಂದ ಜಗದಾಳ, ನಾವಲಗಿ, ಚಿಮ್ಮಡ, ಬಂಡಿಗಣಿ, ಯಲ್ಲಟ್ಟಿ ಸೇರಿದಂತೆ ಮುಧೋಳ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಅಂತರ್ಜಲಮಟ್ಟ ಹೆಚ್ಚಳವಾಗಿದ್ದರೆ, ಕೂಗಳತೆಯಲ್ಲಿರುವ ರಬಕವಿ-ಬನಹಟ್ಟಿ ಪಟ್ಟಣಕ್ಕೆ ಪ್ರಯೋಜನವಾಗದಿರುವುದು ವಿಪರ್ಯಾಸವೇ ಸರಿ.

ಶತಮಾನದ ಇತಿಹಾಸ ಹೊಂದಿರುವ ಬನಹಟ್ಟಿಯ ಬೃಹತ್‌ ಕೆರೆ ಸುಮಾರು 64 ಎಕರೆ ವಿಸ್ತೀರ್ಣ ಹೊಂದಿದ್ದು, ಅದು ತುಂಬಿ ನಿಂತರೆ ಅಕ್ಕಪಕ್ಕದ ಸಾವಿರಾರು ಎಕರೆ ಜಮೀನುಗಳಿಗೆ ಅನುಕೂಲವಾಗುತ್ತದೆ. 8-10 ಗ್ರಾಮಗಳ ದೂರದವರೆಗೆ ಇರುವ ಕೊಳವೆಬಾವಿಗಳಲ್ಲಿ ಸದಾ ನೀರು ಶೇಖರಣೆಯಾಗಲು ಈ ಕೆರೆ ಕಾರಣವಾಗಿದೆ. ಆದರೆ ರಬಕವಿ-ಬನಹಟ್ಟಿಗೆ ಯಾವುದೇ ರೀತಿಯ ಅನುಕೂಲವಾಗಿಲ್ಲ. ಕಾರಣ ಇದಕ್ಕೆ ಮಹತ್ವದ ಯೋಜನೆ ರೂಪಿಸಿ ರಬಕವಿ-ಬನಹಟ್ಟಿ ಅವಳಿ ಪಟ್ಟಣದಲ್ಲಿರುವ ಲಕ್ಷಕ್ಕೂ ಅಧಿಕ ಜನರಿಗೆ ಪ್ರಯೋಜನವಾಗುವಂತೆ ಮಾಡಬೇಕಿದೆ.

ನೀರಿದ್ದರೂ ಇಲ್ಲ ಪ್ರಯೋಜನ: ಘಟಪ್ರಭಾ ಎಡದಂಡೆ ಕಾಲುವೆ ಮೂಲಕ ನೀರು ಹರಿದು ಬಂದರೆ ಬನಹಟ್ಟಿ ಕೆರೆ ತುಂಬುತ್ತದೆ. ಕೆರೆ ಒಮ್ಮೆ ಭರಪೂರ ಭರ್ತಿಯಾದರೆ ಸುಮಾರು 0.75 ಟಿಎಂಸಿ ನೀರು ಶೇಖರಣೆಯಾಗುತ್ತದೆ. ಈ ನೀರನ್ನು ಬೇಸಿಗೆ ದಿನಗಳಲ್ಲಿ ರಬಕವಿ-ಬನಹಟ್ಟಿ ಅವಳಿನಗರಕ್ಕೆ ಪೂರೈಸಬಹುದು. ಇದರಿಂದ ಅತ್ಯಂತ ಕಡಿಮೆ ವೆಚ್ಚದಲ್ಲಿ ನೀರಿನ ಸಮಸ್ಯೆ ನೀಗಿಸಬಹುದಾಗಿದ್ದು, ಈ ಕುರಿತು ಜನಪ್ರತಿನಿಧಿಗಳು ಆಲೋಚನೆ ಮಾಡದಿರುವುದು ದುರದೃಷ್ಟಕರ.

ಹೂಳು ತೆಗೆದರೆ ಇನ್ನಷ್ಟು ಅನುಕೂಲ: ಕೆರೆಯಲ್ಲಿ ಹೂಳು ತೆಗೆದರೆ ಇನ್ನಷ್ಟು ಆಳವಾಗಿ ನೀರು ಸಂಗ್ರಹಣೆಯಾಗುತ್ತದೆ. ಸರಕಾರ ಈ ಕೆರೆಯನ್ನು ಹೂಳು ತೆಗೆದು ಸಾಕಷ್ಟು ನೀರು ನಿಲ್ಲುವಂತೆ ಮಾಡಿದರೆ ಸಾಕಷ್ಟು ಅನುಕೂಲವಾಗುತ್ತದೆ. ನೀರಿನ ಬವಣೆ ನೀಗಿದಂತಾಗುತ್ತದೆ. ಇಂತಹ ಕೆರೆಯನ್ನು ಸದ್ಬಳಕೆ ಮಾಡಿಕೊಳ್ಳದೇ ಮತ್ತೆ ಟ್ಯಾಂಕರ್‌, ಕೊಳವೆ ಬಾವಿ ಸೇರಿದಂತೆ ಇತರೆ ಹರಸಾಹಸ ಮಾಡುವುದರ ಮೂಲಕ ಕಸರತ್ತು ನಡೆಸುತ್ತಿದೆ.

ಕೆರೆ ಒತ್ತುವರಿ: 64 ಎಕರೆ ವಿಸ್ತೀರ್ಣ ಹೊಂದಿರುವ ಈ ಕೆರೆ ಸದ್ಯ ಭೂಗಳ್ಳರ ಪಾಲಾಗಿ ಅಂದಾಜು 10 ಎಕರೆ ಪ್ರದೇಶ ಖಾಸಗಿ ವ್ಯಕ್ತಿಗಳ ಪಾಲಾಗಿದೆ. ಈ ಒತ್ತುವರಿ ಪ್ರದೇಶವನ್ನು ವಾಪಸ್‌ ಪಡೆಯುವತ್ತ ಸರ್ಕಾರ ಪ್ರಮುಖ ಹೆಜ್ಜೆ ಇಡಬೇಕಿದೆ.

ಪೂರಕ ಕೆರೆ ನಿರ್ಮಾಣವಾದ್ರೆ ಅನುಕೂಲ:

ಇರುವ ಬೃಹತ್‌ ಕೆರೆಯೊಂದಿಗೆ ಇನ್ನೊಂದು ಪೂರಕ ಕೆರೆಯೊಂದನ್ನು ನಿರ್ಮಿಸಬೇಕೆಂಬುದು ಇಲ್ಲಿಯ ನಾಗರಿಕರ ಆಗ್ರಹವಾಗಿದೆ. ಈಗಾಗಲೇ ಕೆಲವರು ಕಳೆದೆರಡು ದಶಕಗಳಿಂದ ಈ ಬೇಡಿಕೆಯನ್ನು ಇಟ್ಟಿದ್ದರೂ ಗಮನ ಹರಿಸಿಲ್ಲ. ಪಟ್ಟಣಕ್ಕೆ ಅಂಟಿಕೊಂಡು ಕೆರೆ ನಿರ್ಮಾಣವಾದರೆ ಅನುಕೂಲವಾಗಲಿದೆ. ಕೊಳವೆ ಬಾವಿಗಳು ಬತ್ತುವ ಪ್ರಮೇಯವೇ ಬರುವುದಿಲ್ಲ. ಸದ್ಯ ಶೇ.50ಕ್ಕೂ ಅಧಿಕ ಕೊಳವೆ ಬಾವಿಗಳು ಅಂತರ್ಜಲ ಕುಸಿತದಿಂದ ತಮ್ಮ ಕಾರ್ಯ ಸ್ಥಗಿತಗೊಳಿಸಿವೆ. ಪೂರಕ ಕೆರೆ ನಿರ್ಮಾಣವಾದರೆ ಅಂತರ್ಜಲ ಹೆಚ್ಚಿಸುವುದರೊಂದಿಗೆ ನಗರ ಸೌಂದರ್ಯವೂ ಹೆಚ್ಚಲಿದೆ.]
•ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.