ಮಹಾರಾಷ್ಟ್ರದಲ್ಲಿ ಪ್ರಾರಂಭವಾದ ಹಿಂದೂ ಸಂಸ್ಕೃತಿಯ ಒಂದು ಭಾಗ; ವಾರಕರಿ ಸಂಪ್ರದಾಯ


Team Udayavani, Oct 23, 2022, 12:56 PM IST

9

ಕುಳಗೇರಿ ಕ್ರಾಸ್: ಭಕ್ತಿ ಚಳುವಳಿಯಾಗಿ ರೂಪಗೊಂಡು ಇದು 13ನೇ ಶತಮಾನದಿಂದ 18ನೇ ಶತಮಾನದವರೆಗೆ ಅಂದರೆ ಸುಮಾರು 600 ವರ್ಷಗಳ ಕಾಲ ವಾರಕರಿ ಸಂಪ್ರದಾಯವು ಮಹಾರಾಷ್ಟ್ರದ ಜನ ಸಾಮಾನ್ಯರ ಜೀವನದಲ್ಲಿ ಅಗಾದವಾದ ಪರಿಣಾಮವನ್ನು ಬೀರಿದ ಒಂದು ಆಧ್ಯಾತ್ಮಿಕ ಸಂಪ್ರದಾಯವೆಂದು ಹೇಳಬಹುದು.

ವಾರಕರಿ ಎಂದರೆ ಸಾಮಾನ್ಯವಾಗಿ ಯಾತ್ರೆ ಮಾಡುವವರು ಎಂದರ್ಥ. ಭಕ್ತ ಮಾರ್ಗದಲ್ಲಿ ಯಾತ್ರೆ ಮಾಡುವವರೆಲ್ಲರೂ ವಾರಕರಿ ಸಂಪ್ರದಾಯದವರು. ಇವರ ಆರಾಧ್ಯ ದೈವ ಫಂಡರಪುರದ ವಿಠ್ಠಲ. ಇದು ಶ್ರೀಕೃಷ್ಣನ ಇನ್ನೊಂದು ರೂಪ ಎಂದು ಪೌರಾಣಿಕ ಹಿನ್ನೆಲೆಯಿಂದ ತಿಳಿದು ಬರುತ್ತದೆ.

ದಿಂಡಿ ಪಾದಯಾತ್ರೆಯ ಪ್ರಮುಖ ಉದ್ದೇಶ (ವಾರಕರಿ ಸಂಪ್ರದಾಯ) ವಿಠ್ಠಲನ ಆರಾಧನೆಯನ್ನು ಮಾಡುತ್ತಾ ಜಾತಿಯತೆಯನ್ನು ಮೀರಿ ಎಲ್ಲರೂ ಆ ದಿಂಡಿಯಲ್ಲಿ ಸಮಾನತೆ ಮತ್ತು ಮಾನವೀಯತೆಯಿಂದ ಶಾಂತಿ, ಸಹಬಾಳ್ವೆ, ಅಹಿಂಸೆಯಿಂದ ಪರಸ್ಪರ ಒಬ್ಬರಿಗೊಬ್ಬರು ತಲೆ ಭಾಗುವಿಕೆಯಿಂದು ಎಲ್ಲರೂ ಸಮಾನರು ಎಂದು ತೋರಿಸುವ ಆದ್ಯಾತ್ಮಿಕ ಚಳುವಳಿಯಾಗಿದೆ.

ನೈತಿಕ ನಡುವಳಿಕೆ, ಮದ್ಯಪಾನ ಮತ್ತು ತಂಬಾಕನ್ನು ದೂರವಿಡುವಲ್ಲಿ ಕಟ್ಟುನಿಟ್ಟಾದ ಆಚಾರ ವಿಚಾರಗಳನ್ನು ಪಾಲಿಸುವುದು. ಮುಖ್ಯವಾಗಿ ಸಾತ್ವಿಕ ಆಹಾರ ಸೇವೆನೆ ಮತ್ತು ಏಕಾದಶಿ ದಿನದಂದು ಈರುಳ್ಳಿ, ಬೆಳ್ಳುಳ್ಳಿಯನ್ನು ಸ್ವೀಕರಿಸದೆ ಇರುವುದು.

ಇವರು ಪ್ರತಿ ವರ್ಷ ಕಾರ್ತಿಕ ಮಾಸದ ಏಕಾದಶಿಯಂದು ಪಾದಾಯಾತ್ರೆಯ ಮೂಲಕ ಪಂಢರಪುರಕ್ಕೆ ವಿಠ್ಠಲನ ದರ್ಶನಕ್ಕೆ ತೆರಳುತ್ತಾರೆ. ಇದು ಭಾರತೀಯ ಹಿಂದೂ ಸಂಸ್ಕೃತಿಯ ಬಹುದೊಡ್ಡ ಆದ್ಯಾತ್ಮಿಕ ಪಾದಯಾತ್ರೆ.

ದೊರೆಸ್ವಾಮಿ ವಿರಕ್ತಮಠ ಮತ್ತು ವಾರಕರಿ(ವಾರಿ)ಸಂಪ್ರದಾಯ: ರಾಷ್ಟ್ರೀಯ ಹೆದ್ಧಾರಿಗೆ ಹೊಂದಿಕೊಂಡಿರುವ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದಲ್ಲಿರುವ ಚಿಕ್ಕ ಮಠ ಹಲವಾರು ವರ್ಷಗಳಿಂದ ಗ್ರಾಮದಲ್ಲಿ ಆದ್ಯಾತ್ಮಿಕ ಚಿಂತನೆಗಳೊಂದಿಗೆ ಸಾಮಾಜಿಕ, ಸಾಂಸ್ಕೃತಿ, ಶೈಕ್ಷಣಿಕ ಮತ್ತು ಕನ್ನಡ ಪರ ಕೈಂಕರ್ಯಗಳನ್ನು ಮಾಡುತ್ತಾ ಶ್ರೀಮಠ ಜನ ಸಾಮಾನ್ಯರಿಗೆ ಜಾತಿ-ಮತ-ಪಂಥ ಎಂಬ ಬೇಧವನ್ನರಿಯದೆ ನಿರಂತರವಾಗಿ ಸರ್ವರನ್ನು ಸಮಾನವಾಗಿ ಕಾಣುತ್ತಿರುವ ಕೋಮು ಸೌಹಾರ್ದತೆಯ ಪ್ರತಿರೂಪದಂತೆ ಕಂಗೊಳಿಸುತ್ತಿದೆ.

ನೂರಾರು ವರ್ಷಗಳಿಂದ ವಾರಿ ಸಂಪ್ರದಾಯದವರು ದಿಂಡಿ ಪಾದಯಾತ್ರೆಯ ಮೂಲಕ ಪಂಢರಪುರಕ್ಕೆ ತೆರಳುವ ಸಂದರ್ಭದಲ್ಲಿ ಶ್ರೀಮಠಕ್ಕೆ ಬಂದು ವಿಶ್ರಮಿಸಿ ಕಥಾ-ಕೀರ್ತನೆಗಳನ್ನು ಪಠಿಸಿ ಶ್ರೀಮಠದಲ್ಲಿ ಸಿದ್ದಪಡಿಸಿದ ಪ್ರಸಾದವನ್ನು ಸ್ವೀಕರಿಸಿ ಕೆಲ ಕಾಲ ವಿಶ್ರಮಿಸಿ ಮುಂದೆ ಸಾಗುತ್ತಾರೆ.

ಇಲ್ಲಿ ಪ್ರತಿ ವರ್ಷ ಲಕ್ಷ್ಮೇಶ್ವರ, ಕೋಣನ ತಂಬಿಗೆ, ಹಲುವಾಗಲು, ಅಲ್ಲಾಪೂರ, ಹರಪ್ಪನಹಳ್ಳಿ, ಯಲ್ಲಾಪುರ ಹೀಗೆ ಇನ್ನೂ ಅನೇಕ ದಿಂಡಿ(ವಾರಿ ಸಂಪ್ರದಾಯ) ಪಾದಯಾತ್ರೆಯವರು ಹಾಗೆಯೇ ಹುಬ್ಬಳ್ಳಿ ಸಿದ್ಧಾರೂಡಮಠ, ಯಲ್ಲಮ್ಮನ ಗುಡ್ಡ, ಬನಶಂಕರಿಯಂತಹ ಅನೇಕ ಪುಣ್ಯ ಕ್ಷೇತ್ರಗಳಿಗೆ ಪಾದಯಾತ್ರೆ ಮಾಡುವ ಯಾತ್ರಾರ್ಥಿಗಳಿಗೆ ನೂರಾರು ವರ್ಷಗಳಿಂದ ಶ್ರೀಮಠ ಅನ್ನದಾಸೋಹವನ್ನು ನೀಡುತ್ತಾ ಹಸಿದವರ ಹೊಟ್ಟೆಯನ್ನು ತುಂಬಿಸುವಂತಹ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ.

ವಾರಿ ಸಂಪ್ರಧಾಯ 13ನೇ ಶತಮಾನದಲ್ಲಿ ಪ್ರಾರಂಭವಾದ ಒಂದು ಬಹುದೊಡ್ಡ ಆದ್ಯಾತ್ಮಿಕ ಚಳುವಳಿ. ಇಲ್ಲಿ ಜಾತಿ, ವರ್ಗ, ವರ್ಣ ರಹಿತ ಯಾತ್ರೆ ಇದಾಗಿದ್ದು, ಇಂತಹ ವಿಶಿಷ್ಠ ಪರಂಪರೆ ಹೊಂದಿರುವ ವಾರಕರಿ ಸಂಪ್ರದಾಯದವರು ನೂರಾರು ವರ್ಷಗಳಿಂದ ಶ್ರೀಮಠದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. – ಪೂಜ್ಯ ಶಾಂತಲಿಂಗ ಶ್ರೀಗಳು

-ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.