ನಿರಾಣಿ ವ್ಯಕ್ತಿಯಷ್ಟೇ ಅಲ್ಲ, ದೊಡ್ಡ ಶಕ್ತಿ;  ಬೀಳಗಿ ಮಾದರಿ ಕ್ಷೇತ್ರ ನಿರ್ಮಾಣದ ಸಂಕಲ್ಪ


Team Udayavani, Apr 24, 2023, 8:35 AM IST

thumb

ಬಾಗಲಕೋಟೆ: ಪ್ರಧಾನಮಂತ್ರಿ ಕೃಷಿ ಸಮ್ಮಾನ್‌ ಯೋಜನೆ ಮೂಲಕ 6 ಸಾವಿರ ಕೇಂದ್ರ ಸರ್ಕಾರ ನೀಡಿದರೆ, ರಾಜ್ಯ ಸರ್ಕಾರ 4 ಸಾವಿರ ನೀಡುವ ಮೂಲಕ ವಾರ್ಷಿಕ 10 ಸಾವಿರ ನೀಡುತ್ತಿವೆ. ಇದರಿಂದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಒದಗಿಸುವ ಜೊತೆಗೆ ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳ ಶಿಕ್ಷಣಕ್ಕೆ ಜೊತೆಯಾಗಿ ನಿಂತಿದ್ದು ನಮ್ಮ ಬಿಜೆಪಿ ಸರ್ಕಾರ ಎಂದು ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಹೇಳಿದರು.

ಬೀಳಗಿ ಕ್ಷೇತ್ರದ ಗೋವಿನಕೊಪ್ಪ, ಕಲಾದಗಿ ಗ್ರಾಮದಲ್ಲಿ ಬೀಳಗಿ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಪರವಾಗಿ ಮತಯಾಚನೆ ಮಾಡಿದ ಅವರು, ತುಳಸಿಗೇರಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ರೈತರು, ಕೃಷಿ ಕಾರ್ಮಿಕರು, ನೇಕಾರರು, ಮೀನುಗಾರರು, ಎಲ್ಲ ವರ್ಗದ ಕೂಲಿ ಕಾರ್ಮಿಕರ ಕಲ್ಯಾಣಕ್ಕೆ ಬಿಜೆಪಿ ಬದ್ಧವಾಗಿ ಕಾರ್ಯ ನಿರ್ವಹಿಸಿದೆ. 20 ವರ್ಷಗಳಲ್ಲಿ 3 ಬಾರಿ ಶಾಸಕರಾಗಿ, 2 ಅವಧಿಗೆ ಸಚಿವರಾಗಿ ಮುರುಗೇಶ ನಿರಾಣಿ ಬೀಳಗಿ ಮತಕ್ಷೇತ್ರ ಹಾಗೂ ಕರ್ನಾಟಕದ ಜನತೆಯ ಸೇವೆ ಮಾಡಿದ್ದಾರೆ. ಅವರ ಅವಧಿಯಲ್ಲಿ ಬೀಳಗಿಯಲ್ಲಿ ನೀರಾವರಿ, ಶಿಕ್ಷಣ, ರಸ್ತೆ ಮೂಲ ಸೌಕರ್ಯ ಎಲ್ಲ ರಂಗಗಳಲ್ಲೂ ಅಭಿವೃದ್ಧಿಯಾಗಿದೆ. ಬೀಳಗಿ ಜನತೆಯ ಬಗ್ಗೆ ವಿಶೇಷ ಅಂತಃಕರವಿರುವ ಮುರುಗೇಶ ನಿರಾಣಿ ಅವವರನ್ನು ಮತ್ತೂಮ್ಮೆ ದಾಖಲೆ ಮತಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದರು.

ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಮುರುಗೇಶ ನಿರಾಣಿ ಮಾತನಾಡಿ, ಕಳೆದ 5 ವರ್ಷಗಳಲ್ಲಿ ಮಾಡಿದ ಜನಸೇವೆಗೆ ಪ್ರತಿಫಲವಾಗಿ ಹೋದಲ್ಲೆಲ್ಲ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಜನತೆಯ ಆಶಯ-ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಿದ್ದೇನೆ. 3 ಬಾರಿ ಆಶೀರ್ವಾದ ಮಾಡಿದ್ದೀರಿ. ಈ ಬಾರಿಯೂ ನಿಮ್ಮ ಬೆಂಬಲ-ಆಶೀರ್ವಾದವಿರಲಿ ಎಂದು ಮತದಾರರಲ್ಲಿ ವಿನಂತಿಸಿದರು. ಕಾಂಗ್ರೆಸ್‌ ಜಾತಿ-ಜಾತಿಗಳಲ್ಲಿ ಜಗಳ ಹಚ್ಚುವ ಮೂಲಕ ಒಡೆದಾಳುವ ನೀತಿ ಅನುಸರಿಸುತ್ತದೆ. ಬೀಳಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್‌ದ್ದು ಈ ಬಾರಿ ಖೇಲ್‌ ಕತಂ ನಾಟಕ ಬಂದ್‌ ಆಗಲಿದೆ ಎಂದರು.

ಈ ವೇಳೆ ವೆಂಕಟೇಶ ದಾಸನ್ನವರ, ವಿಠಲ ಸೊನ್ನದ, ಶ್ರೀನಿವಾಸ ಪೂಜಾರ, ಸುರೇಶ ಮಾದರ, ಮಂಜುಗೌಡ ಪಿ. ಪಾಟೀಲ, ಶಿವಪುತ್ರಪ್ಪ ದಾಸನ್ನವರ, ಉದಂಡಪ್ಪ ತಪರೇಶ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.