![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಚಿಕಿತ್ಸೆಗೆ 6 ಬೆಡ್ಗಳ ಪ್ರತ್ಯೇಕ ಕೊಠಡಿ ನಿಗದಿ
Team Udayavani, Mar 28, 2020, 4:04 PM IST
![bk-tdy-1](https://www.udayavani.com/wp-content/uploads/2020/03/bk-tdy-1-20-620x342.jpg)
ಸಾಂದರ್ಭಿಕ ಚಿತ್ರ
ಬಾಗಲಕೋಟೆ: ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುತ್ತಿದ್ದ ಜನ, ಇದೀಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಲಾಕ್ಡೌನ್ ಇದ್ದು, ಯಾವುದೇ ಕಾಯಿಲೆ ಅಥವಾ ತುರ್ತು ಸಂದರ್ಭಗಳಿದ್ದರೂ ಜಿಲ್ಲಾ ಆಸ್ಪತ್ರೆಯೇ ಸರ್ವರಿಗೂ ಅಪದ್ಭಾಂದವ ಆಗಿದೆ.
ನವನಗರದ ಜಿಲ್ಲಾ ಆಸ್ಪತ್ರೆ ಯಾರೇ ಬಂದರೂ ಚಿಕಿತ್ಸೆಗಾಗಿ ಬಾಗಿಲು ತೆರೆದಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಸಂತಾನಹರಣ ಶಸ್ತ್ರ ಚಿಕಿತ್ಸೆ ಸಹಿತ ಸಾಮಾನ್ಯ ಕಾಯಿಲೆಗೆ ಜಿಲ್ಲಾ ಆಸ್ಪತ್ರೆಗೆ ಬರಬೇಡಿ ಎಂದು ಸೂಚಿಸಿದರೂ ಜನರು ನಿತ್ಯ ಬರುತ್ತಲೇ ಇದ್ದಾರೆ. . ಕೋವಿಡ್-19 ಚಿಕಿತ್ಸೆಗೆ ಪ್ರತ್ಯೇಕ 6 ಬೆಡ್ಗಳ ಪ್ರತ್ಯೇಕ ಕೊಠಡಿಗಳಿವೆ.
ಕೋವಿಡ್-19ರ ಮುನ್ನೆಚ್ಚರಿಕೆ: ಕೋವಿಡ್ 19 ವೈರಸ್ ಭೀತಿ ಎಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯವಾಗಿ ಕೆಮ್ಮು-ನೆಗಡಿ-ಜ್ವರ ಬಂದರೂ ಜನರು, ಜಿಲ್ಲಾ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಈ ರೋಗದ ಜತೆಗೆ ಉಸಿರಾಟದ ತೀವ್ರ ತೊಂದರೆ ಯಾಗುತ್ತಿದ್ದರೆ ಮಾತ್ರ ಅದು ಕೊರೊನಾ ರೋಗದ ಲಕ್ಷಣ ಎಂದು ಜಾಗೃತಿ ಮೂಡಿಸಿದರೂ ರೋಗಿಗಳು ಬರುವುದು ನಿಲ್ಲುತ್ತಿಲ್ಲ. ಜಿಲ್ಲೆಯಲ್ಲಿ ಈ ವರೆಗೆ ಕೊರೊನಾ ವೈರಸ್ ಕಂಡು ಬಂದಿಲ್ಲ. ಒಂದು ವೇಳೆ ಕಂಡು ಬಂದಲ್ಲಿ ಅಂತಹ ವ್ಯಕ್ತಿಗಳಿಗಾಗಿ ಚಿಕಿತ್ಸೆ ನೀಡಲು ಸರ್ಕಾರಿ ಆಸ್ಪತ್ರೆಯಲ್ಲಿ 1 ಮೀಟರ್ ಅಳತೆ ಅಂತರದಲ್ಲಿ ಒಟ್ಟು 6 ಬೆಡ್ಗಳ ಪ್ರತ್ಯೇಕ ಕೊಠಡಿ ನಿಗದಿಪಡಿಸಲಾಗಿದೆ. ಅದಕ್ಕಾಗಿ ಡಾ| ಸಿ.ಎಸ್. ಜಗಳಿ ಹಾಗೂ ಡಾ| ಗಿರೀಶ ಸಂಗಮ ಎಂಬ ಇಬ್ಬರು ತಜ್ಞ ವೈದ್ಯರು, ವಿವಿಧ ಸಿಬ್ಬಂದಿ ಸಜ್ಜುಗೊಳಿಸಲಾಗಿದೆ. ವೈದ್ಯರು, ಸಿಬ್ಬಂದಿಗಳು, ರೋಗಿಗಳ ಆರೈಕೆಗಾಗಿ-ನಿರ್ವಹಣೆಗಾಗಿ ಪ್ರತ್ಯೇಕ ತರಬೇತಿ ಪಡೆದಿದ್ದಾರೆ.
11 ಪರೀಕ್ಷೆ ಮಾದರಿಗಳೂ ನೆಗೆಟಿವ್ : ಕೋವಿಡ್-19 ವೈರಸ್ ರೋಗ ಶಂಕಿತರ ಚಿಕಿತ್ಸೆಗಾಗಿ 10 ಹಾಸಿಗೆಗಳ ಪ್ರತ್ಯೇಕ ವಿಭಾಗ ಆರಂಭಿಸಿದ್ದು, ಈಗಾಗಲೇ 11 ಜನರಿಗೆ ಚಿಕಿತ್ಸೆ ನೀಡಲಾಗಿದೆ. ಗುರುವಾರ ಇಬ್ಬರು ವ್ಯಕ್ತಿಗಳ ಗಂಟಲು ದ್ರವ ಮತ್ತು ರಕ್ತ ತಪಾಸಣೆಗೆ ಕಳುಹಿಸಿದ್ದು, ಅವರ ವರದಿಯೂ ಕೊರೊನಾ ವೈರಸ್ ಇಲ್ಲದಿರುವುದು ದೃಢಪಟ್ಟಿದೆ. ಈವರೆಗೆ ಒಟ್ಟು 11 ಜನರ ಪರೀಕ್ಷೆ ಮಾದರಿ ಬಂದಿದ್ದು, ಯಾರಿಗೂ ವೈರಸ್ ಕಂಡು ಬಂದಿಲ್ಲ.
ಖಾಸಗಿ ಸೇವೆ ಬಂದ್ : ಲಾಕ್ಡೌನ್ ಘೋಷಣೆ ಮುಂಚೆಯೇ ಕೋವಿಡ್ 19 ಭೀತಿಯಿಂದ ಕೆಲವು ಖಾಸಗಿ ವೈದ್ಯರು ಹೊರ ರೋಗಿಗಳ ವಿಭಾಗ ಬಂದ್ ಮಾಡಿದ್ದರು. ಇದೀಗ ಲಾಕ್ಡೌನ್ ಘೋಷಣೆ ಬಳಿಕ, ಜಿಲ್ಲೆಯ ಸುಮಾರು 865ಕ್ಕೂ ಹೆಚ್ಚು ಆಸ್ಪತ್ರೆ, ಕ್ಲಿನಿಕ್ಗಳು ಬಂದ್ ಆಗಿವೆ. ತುರ್ತು ಸಂದರ್ಭ, ಒಳ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡುತ್ತಿವೆ. ಹೀಗಾಗಿ ಜನರು, ಸರ್ಕಾರಿ ಆಸ್ಪತ್ರೆಗಳಿಗೆ ತೆರಳುತ್ತಿದ್ದಾರೆ.
ಕೋವಿಡ್ 19 ವೈರಸ್ ಹಿನ್ನೆಲೆಯಲ್ಲಿ ಸಾಮಾನ್ಯವಾಗಿ ಕೆಮ್ಮು, ನೆಗಡಿ, ಜ್ವರ ಕಾಣಿಸಿಕೊಂಡರೂ ಜಿಲ್ಲಾ ಆಸ್ಪತ್ರೆಗೆ ಬರಬೇಕಿಲ್ಲ. ಈ ರೋಗಗಳ ಜತೆಗೆ ಉಸಿರಾಟದ ತೊಂದರೆ ಇದ್ದರೆ ತಕ್ಷಣ ಚಿಕಿತ್ಸೆಗೆ ದಾಖಲಾಗಬೇಕು. ಇಂತಹ ತುರ್ತು ಸಂದರ್ಭದಲ್ಲೂ ನಮ್ಮ ಆಸ್ಪತ್ರೆಯ ವೈದ್ಯರು ಎಲ್ಲ ರೀತಿಯ ಸೇವೆ ಒದಗಿಸುತ್ತಿದ್ದಾರೆ. ಕೆಲವು ಶಸ್ತ್ರ ಚಿಕಿತ್ಸೆಗಳನ್ನು ಅನಿವಾರ್ಯವಾಗಿ ಸ್ಥಗಿತಗೊಳಿಸಿದ್ದೇವೆ. –ಡಾ|ಪ್ರಕಾಶ ಬಿರಾದಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ
–ಶ್ರೀಶೈಲ ಕೆ. ಬಿರಾದಾರ
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ](https://www.udayavani.com/wp-content/uploads/2024/07/bagalakote-150x90.jpg)
Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ
![ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ](https://www.udayavani.com/wp-content/uploads/2024/07/rabakavi-1-150x84.jpg)
ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ
![Fetoside](https://www.udayavani.com/wp-content/uploads/2024/07/Fetoside-150x90.jpg)
Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!
![Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ](https://www.udayavani.com/wp-content/uploads/2024/07/sandalwood-150x77.jpg)
Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ ನಾಗಪ್ಪ
![4-](https://www.udayavani.com/wp-content/uploads/2024/07/4--150x90.jpg)
Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.