ತೇರದಾಳವನ್ನು ಮಾದರಿ ಕ್ಷೇತ್ರವನ್ನಾಗಿಸುವ ಪ್ರಾಮಾಣಿಕ ಪ್ರಯತ್ನ:ಸವದಿ


Team Udayavani, Dec 7, 2022, 10:19 PM IST

1sadasdad

ರಬಕವಿ-ಬನಹಟ್ಟಿ: ತೇರದಾಳ ಮತಕ್ಷೇತ್ರದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿಯೂ ಕೂಡಾ ತೇರದಾಳ ಮತಕ್ಷೇತ್ರವನ್ನು ಮಾದರಿ ಮತಕ್ಷೇತ್ರವನ್ನಾಗಿಸುವಲ್ಲಿ ಪ್ರಯತ್ನಿಸುತ್ತೇನೆ. ನಾವೆಲ್ಲರೂ ಉಳಿಯಬೇಕಾದರೆ ರಾಜ್ಯ ಮತ್ತು ದೇಶದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ಬರಬೇಕು. ಈ ನಿಟ್ಟಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಬಹಳಷ್ಟು ಮುಖ್ಯವಾಗಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಬುಧವಾರ ಸಮೀಪದ ರಾಮಪುರದ ದಾನೇಶ್ವರಿ ಸಮುದಾಯ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕ್ಷೇತ್ರದಲ್ಲಿ ಉತ್ತಮ ರಸ್ತೆಗಳು ನಿರ್ಮಾಣಗೊಂಡಿವೆ. ಸಮುದಾಯ ಭವನಗಳ ನಿರ್ಮಾಣ, ಅಲಂಕಾರಿಕ ದೀಪಗಳ ಅಳವಡಿಕೆ, ನೀರಾವರಿ ಯೋಜನೆಗಳು, ರೈತ ಮತ್ತು ನೇಕಾರರ ಅಭಿವೃದ್ಧಿಗಾಗಿ ಹಾಗೂ ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿಗಾಗಿ ಶ್ರಮಿಸುವುದರ ಜೊತೆಗೆ ರಬಕವಿ ಬನಹಟ್ಟಿ ನಗರಸಭೆಗೆ ನಗರೋತ್ಥಾನ ಯೋಜನೆ ಅಡಿಯಲ್ಲಿ 35 ಕೋಟಿ ರೂ. ಅನುದಾನವನ್ನು ತೆಗೆದುಕೊಂಡು ಬರಲಾಗಿದೆ. ಕ್ಷೇತ್ರದಲ್ಲಿ ನೇಕಾರರ ಅಭಿವೃದ್ಧಿಗಾಗಿ ಸರಕಾರದ ಜೊತೆ ಮಾತುಕತೆ ಮಾಡಿ ಅನೇಕ ಸಮಸ್ಯೆಗಳನ್ನು ಪರಿಹರಿಸಿದ್ದೇನೆ. ಕಳೆದ ಬಾರಿ ಮಾಜಿ ಶಾಸಕಿ ಉಮಾಶ್ರೀ ನೇಕಾರರನ್ನು ಮರೆತಿದ್ದರಿಂದ ಕಳೆದ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದರು.

ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಂಡು ಪಕ್ಷದಿಂದ ದೂರ ಉಳಿಯಬೇಡಿ. ಪಕ್ಷ ತಾಯಿ ಇದ್ದಂತೆ. ಆದ್ದರಿಂದ ಎಲ್ಲರೂ ಒಗ್ಗಟ್ಟಾಗಿ 2023 ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶಿವಾನಂದ ಗಾಯಕವಾಡ ಮಾತನಾಡಿ,1947 ರಲ್ಲಿ ದೇಶವನ್ನು ವಿಭಜಿಸಿದವರು ಇಂದು ಭಾರತ ಜೋಡೋ ಕಾರ್ಯಕ್ರಮ ಮಾಡುತ್ತಿದ್ದಾರೆ. ಸಿದ್ಧರಾಮಯ್ಯನವರಂತಹ ಹಿಂದೂ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಸಾಕಷ್ಟು ತೊಂದರೆಯನ್ನು ಎದುರಿಸಬೇಕಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ದುಂಡಪ್ಪ ಮಾಚಕನೂರ, ಸುರೇಶ ಚಿಂಡಕ, ಶಂಕರ ಜುಂಜಪ್ಪನವರ ಸೇರಿದಂತೆ ಅನೇಕರು ಮಾತನಾಡಿದರು.

ರಬಕವಿ-ಬನಹಟ್ಟಿ ನಗರ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ನಗರಸಭೆಯ ಅಧ್ಯಕ್ಷ ಸಂಜಯ ತೆಗ್ಗಿ, ಉಪಾಧ್ಯಕ್ಷೆ ವಿದ್ಯಾ ಧಬಾಡಿ, ಸ್ಥಾಯಿ ಸಮಿತಿ ಕಾರ್ಯಾಧ್ಯಕ್ಷ ಸದಾಶಿವ ಪರೀಟ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸಪ್ರಭು ಹಟ್ಟಿ, ಮಲ್ಲಿಕಾರ್ಜುನ ನಾಶಿ, ಮಲ್ಲಿಕಾರ್ಜುನ ಬಾಣಕಾರ, ಬಸವರಾಜ ತೆಗ್ಗಿ, ಸಿದ್ದನಗೌಡ ಪಾಟೀಲ, ಹಿರಾಚಂದ ಕಾಸರ, ಶಿವಾನಂದ ಬಾಗಲಕೋಟಮಠ, ಸವಿತಾ ಹೊಸೂರ, ಸುವರ್ಣಾ ಕೊಪ್ಪದ, ಶ್ರೀಶೈಲ ದಲಾಲ, ಬಸವರಾಜ ಭದ್ರನ್ನವರ, ಸಿದ್ರಾಮ ಸವದತ್ತಿ, ಓಂಪ್ರಕಾಶ ಕಾಬರಾ, ಬಾಳವ್ವ ಕಾಖಂಡಕಿ, ಪರಪ್ಪ ಪೂಜಾರಿ, ಪರಪ್ಪ ಉರಬಿನವರ, ಶಿವಾನಂದ ಕಾಗಿ, ಜಯವಂತ ಮಿಳ್ಳಿ, ಶಂಕರೆಪ್ಪ ಬುಜರುಕ ಡಾ. ಅಕ್ಬರ ತಾಂಬೋಳಿ, ಡಾ. ಅಭಯ ಯಂಡೋಳಿ, ಪರಪ್ಪ ಬಿಳ್ಳೂರ, ರಾಮಣ್ಣ ಹುಲಕುಂದ ಇದ್ದರು.

ಕಾರ್ಯಕ್ರಮದಲ್ಲಿ ಮಹಾದೇವ ಕೋಟ್ಯಾಳ, ಆನಂದ ಕಂಪು, ಶಂಕರ ಅಂಗಡಿ, ಶ್ರೀಶೈಲ ಬೀಳಗಿ, ಈಶ್ವರ ಪಾಟೀಲ, ಗೌರಿ ಮಿಳ್ಳಿ, ವೈಷ್ಣವಿ ಬಾಗೇವಾಡಿ, ಶಶಿಕಲಾ ಸಾರವಾಡ, ಜಯಶ್ರೀ ಬಾಗೇವಾಡಿ, ದುರ್ಗವ್ವ ಹರಿಜನ, ದೀಪಾ ಕೊಣ್ಣೂರ, ಮಲಕಪ್ಪ ಪಾಟೀಲ, ಬೀಮಸಿ ಪಾಟೀಲ, ಶಿವು ಗುಂಡಿ, ಯಲ್ಲಪ್ಪ ಕಟಗಿ, ಭೀಮಸಿ ಹಂದಿಗುಂದ , ಚಿದಾನಂದ ಹೊರಟ್ಟಿ, ನಾರಾಯಣ ಮಾಲಪಾಣಿ, ಅರುಣ ಬುದ್ನಿ, ಮಂಜು ಲೆಂಡಿ, ಶಿವಾನಂದ ಬುದ್ನಿ, ಸೋಮನಾಥ ಗೊಂಬಿ, ಮಹಾದೇವ ಆಲಕನೂರ ಸೇರಿದಂತೆ ನಗರ ಬಿಜೆಪಿ ಘಟಕದ ಮುಖಂಡರು ಇದ್ದರು.

ಶ್ರೀಶೈಲ ಬೀಳಗಿ ಪ್ರಾರ್ಥಿಸಿದರು. ಆನಂದ ಕಂಪು ಸ್ವಾಗತಿಸಿದರು. ಪ್ರಕಾಶ ಸಿಂಗನ್ ನಿರೂಪಿಸಿದರು. ಶಿವಾನಂದ ಕಾಗಿ ವಂದಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.