ಪುರಸಭೆಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ
ಮಹಿಳಾ ಸದಸ್ಯರ ಎಳೆದಾಟ ಪ್ರಕರಣ; ಹಲವರ ವಿಚಾರಣೆ
Team Udayavani, Jul 3, 2021, 4:46 PM IST
ಮಹಾಲಿಂಗಪುರ: ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ವೇಳೆ ಶಾಸಕರು ಮತ್ತು ಪುರಸಭೆ ಬಿಜೆಪಿ ಸದಸ್ಯರು, ವಿರೋಧ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿಯ ಮೂವರು ಮಹಿಳಾ ಸದಸ್ಯೆಯರ ಎಳೆದಾಟ ಗಲಾಟೆ ಪ್ರಕರಣ ಕುರಿತು ಸಿಐಡಿ ತನಿಖೆ ಆರಂಭಿಸಿದೆ.
ಬೆಂಗಳೂರಿನ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ ಪುರಸಭೆಗೆ ಆಗಮಿಸಿ ಅಧಿಕಾರಿಗಳು, ಪುರಸಭೆ ಸದಸ್ಯೆ ಚಾಂದನಿ ನಾಯಕ, ಪತಿ ನಾಗೇಶ ನಾಯಕ ಅವರನ್ನು ಗಂಟೆಗಟ್ಟಲೇ ವಿಚಾರಣೆ ನಡೆಸಿದ್ದಾರೆ. ನ.9ರ ಗಲಾಟೆಗೆ ಸಂಬಂಧಿ ಸಿದಂತೆ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಅಲ್ಲದೇ ಮಹಾಲಿಂಗಪುರ ಠಾಣೆಯಲ್ಲಿ ದಾಖಲಾದ ಪ್ರಕರಣಗಳು, ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಮತ್ತು ಪ್ರಜಾಪ್ರತಿನಿಧಿ ಕಾಯ್ದೆ-1951ಯ ಅಡಿಯಲ್ಲಿ ದಾಖಲಾದ ಪ್ರಕರಣವನ್ನು ಡಿಜಿ-ಐಜಿಪಿ ಹೆಚ್ಚಿನ ತನಿಖೆಯ ಸಂಬಂಧ ಸಿಐಡಿ ವಿಭಾಗದಲ್ಲಿ ಕೈಗೊಳ್ಳುವಂತೆ ಆದೇಶಿಸಿರುವ ಕಾರಣ ಬೆಂಗಳೂರು ಸಿಐಡಿ ವಿಶೇಷ ವಿಚಾರಣೆಗಳ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಸತ್ಯವತಿ. ಎಸ್ ನೇತೃತ್ವದ 5 ಜನ ಅಧಿ ಕಾರಿಗಳ ತಂಡ ತನಿಖೆ ಆರಂಭಿಸಿದೆ.
ಶುಕ್ರವಾರ ವಿಚಾರಣೆ ವೇಳೆ ಪುರಸಭೆ ಸದಸ್ಯೆ ಚಾಂದನಿ ನಾಯಕ, ಅವರ ಪತಿ ನಾಗೇಶ ನಾಯಕ, ಮುಖ್ಯಾಧಿಕಾರಿ ಎಚ್. ಎಸ್.ಚಿತ್ತರಗಿ, ಸ್ಥಳಿಯ ಠಾಣಾಧಿಕಾರಿ ಎಸ್.ಎಸ್.ಘಾಟಗೆ ಸೇರಿದಂತೆ ಹಲವರು ಇದ್ದರು. ಪುರಸಭೆಯಲ್ಲಿನ ವಿಚಾರಣೆ ಬಳಿಕ ಅಧಿಕಾರಿಗಳ ತಂಡವು ಚಾಂದನಿ ನಾಯಕ ಅವರ ಮನೆ ಸೇರಿದಂತೆ ಘಟನೆಗೆ ಕಾರಣವಾದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ