ಮಾಹಿತಿ ಕೇಳಿದ್ದಕ್ಕೆ ನಿಂದನೆ: ದೂರು ದಾಖಲು


Team Udayavani, Aug 6, 2019, 12:18 PM IST

bk-tdy-2

ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಗ್ರಾಮಸ್ಥರ ಆಗ್ರಹ

ಗುಳೇದಗುಡ್ಡ: ಗ್ರಾಮದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇತ್ತೀಚೆಗೆ ನಡೆದ ಗ್ರಾಮಸಭೆಯಲ್ಲಿ ಮಾಹಿತಿ ಕೇಳಿದ್ದಕ್ಕೆ ಕೆರಳಿದ ಗ್ರಾಪಂ ಸಿಬ್ಬಂದಿಯೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕಾಗಿ ನಿವೃತ್ತ ಕೃಷಿ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಕೋಟೆಕಲ್ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗ್ರಾಮದ ನಿವೃತ್ತ ಕೃಷಿ ಅಧಿಕಾರಿ ಹುಚ್ಚಪ್ಪ ಕಡಪಟ್ಟಿ ಎಂಬುವರು ಗ್ರಾಮದಲ್ಲಿ ಈಚೆಗೆ ನಡೆದ ಗ್ರಾಮಸಭೆಯಲ್ಲಿ ಮಾಹಿತಿ ಕೇಳಿದ್ದರು. ಅಲ್ಲದೇ ಮಾಹಿತಿ ಹಕ್ಕು ಮೂಲಕವೂ ಮಾಹಿತಿ ಕೇಳಿದ್ದರು. ಇದರಿಂದ ಅಸಮಾಧಾನಗೊಂಡ ಗ್ರಾಮ ಪಂಚಾಯತ ಸಿಬ್ಬಂದಿ ರಮೇಶ ಅಬಕಾರಿ ಎಂಬುವರು ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ಗುಳೇದಗುಡ್ಡ ಪೊಲೀಸ್‌ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಾಗಿದೆ.

ಗ್ರಾಪಂ ಸಿಬ್ಬಂದಿ ವಿರುದ್ಧ ಗ್ರಾಮಸ್ಥರ ಆಕ್ರೋಶ: ಇದನ್ನು ಖಂಡಿಸಿದ ಗ್ರಾಮದ ಹಲವಾರು ಜನರು ಸೋಮವಾರ ಪೊಲೀಸ್‌ ಠಾಣೆಗೆ ತೆರಳಿ ಗ್ರಾಪಂ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೋಟೆಕಲ್ಲ ಗ್ರಾಪಂ ಸಿಬ್ಬಂದಿ ಮಾತ್ರವಲ್ಲ ಅಲ್ಲಿನ ಅಧಿಕಾರಿಗಳು ಗ್ರಾಮದ ಯಾವುದೇ ಸಮಸ್ಯೆ ಬಗ್ಗೆ ಗಮನ ಹರಿಸುತ್ತಿಲ್ಲ. ತಮಗೆ ಬಂದಂತೆ ಮನಸೋ ಇಚ್ಛೆ ಕೆಲಸ ಮಾಡುತ್ತಾರೆ. ಕೇವಲ ಒಂದು ಕಂಪ್ಯೂಟರ್‌ ಉತಾರ ಕೇಳಿದರೆ ತಿಂಗಳುಗಟ್ಟಲೆ ಅಲೆದಾಡಿಸುತ್ತಾರೆ ಎಂದು ಅಳಲು ತೋಡಿಕೊಂಡರು.

ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿ ಸರ್ಕಾರದ ಯಾವುದೇ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುತ್ತಿಲ್ಲ. ಶೌಚಾಲಯ, ಆಶ್ರಯ ಹೀಗೆ ಸರ್ಕಾರದ ಯಾವುದೇ ಯೋಜನೆ ಇರಲಿ, ತಮಗೆ ಬೇಕಾದವರಿಗೆ ಹಾಕುತ್ತಿದ್ದಾರೆ.ಅರ್ಹ ಫಲಾನುಭವಿಗಳು ಈ ಕುರಿತು ಕೇಳಿದರೆ ಸರಿಯಾಗಿ ಮಾಹಿತಿ ನೀಡುವುದಿಲ್ಲ. ಸಿಬ್ಬಂದಿ ತಮಗೆ ತೋಚಿದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಭಿವೃದ್ಧಿ ಮಾಹಿತಿ ಕೇಳಿದರೆ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವ ಹಾಗೂ ದಬ್ಟಾಳಿಕೆ ಮಾಡುವ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಹುಚ್ಚಪ್ಪ ಕಡಪಟ್ಟಿ, ಶಶಿಧರ ದೇಸಾಯಿ, ಭುಜಂಗರಾವ್‌ ದೇಸಾಯಿ, ಸಂಗಪ್ಪ ಆಲೂರು, ಮಹೇಶ ನೀಲಪ್ಪ ಅಬಕಾರಿ, ಮಲ್ಲಪ್ಪ ಸಂಗಪ್ಪ ಆಲೂರು, ಹುಚ್ಚೇಶ ಪೂಜಾರ, ಬಸವರಾಜ ಯಡಹಳ್ಳಿ, ಮೈಲಾರಿ ಆಲೂರು,ಲಕ್ಷ್ಮಣ ಮಾದರ, ಮಹಾದೇವಪ್ಪ ಕೋಟಿ, ಹುಚ್ಚಪ್ಪ ಆಲೂರು ಮತ್ತಿತರರು ಆಗ್ರಹಿಸಿದರು.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.