ಚುರುಕುಗೊಂಡ ಮಹಾಲಿಂಗಪುರ ತಾಲೂಕು ಹೋರಾಟ

24ರಂದು ಬೆಂಗಳೂರಿಗೆ ತೆರಳಲಿರುವ ಹೋರಾಟ ಸಮಿತಿ ನಿಯೋಗ

Team Udayavani, Jun 23, 2019, 9:26 AM IST

bk-tdy-3..

ಮಹಾಲಿಂಗಪುರ: ಪಟ್ಟಣವನ್ನು ತಾಲೂಕಾ ಕೇಂದ್ರವನ್ನಾಗಿಸಲು ಆಗ್ರಹಿಸಿ ಸಿಎಂಗೆ ಬರೆದ ಮನವಿ ಪತ್ರದೊಂದಿಗೆ ಮಹಾಲಿಂಗಪುರ ತಾಲೂಕಾ ಹೋರಾಟ ಸಮಿತಿ ನಿಯೋಗದ ಸದಸ್ಯರು.

ಮಹಾಲಿಂಗಪುರ: ಪಟ್ಟಣವನ್ನು ತಾಲೂಕಾ ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಿಗೆ ಮನವಿ ಸಲ್ಲಿಸಲು ತಾಲೂಕಾ ಹೋರಾಟ ಸಮಿತಿ ನಿಯೋಗ ಜೂ. 24ರಂದು ಬೆಂಗಳೂರಿಗೆ ತೆರಳಲಿದೆ ಎಂದು ಮಹಾಲಿಂಗಪುರ ತಾಲೂಕಾ ಹೋರಾಟ ಸಮಿತಿ ಅಧ್ಯಕ್ಷ ಮಹಾಲಿಂಗಪ್ಪ ಕೋಳಿಗುಡ್ಡ ಹೇಳಿದರು.

ಎಪಿಎಂಸಿ ವರ್ತಕರ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಪೂರ್ವದಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ಕಂದಾಯ ಸಚಿವರಿಗೆ ನಿಯೋಗವು ಭೇಟಿಯಾಗಿ ಮಹಾಲಿಂಗಪುರವನ್ನು ತೇರದಾಳ ತಾಲೂಕಿನಲ್ಲಿ ಸೇರಿಸಿದ್ದಕ್ಕೆ ನಮ್ಮ ವಿರೋಧವಿದೆ. ಜಮಖಂಡಿ ತಾಲೂಕಿನಲ್ಲಿ ರಬಕವಿ-ಬನಹಟ್ಟಿ, ತೇರದಾಳ ತಾಲೂಕನ್ನಾಗಿ ಘೋಷಿಸಿರುವುದರಿಂದ ಅದೇ ಮಾದರಿಯಲ್ಲಿ ಮುಧೋಳ ತಾಲೂಕಿನ ಹಲವು ಹಳ್ಳಿಗಳನ್ನು ಸೇರಿಸಿ ಮಹಾಲಿಂಗಪುರವನ್ನು ತಾಲೂಕಾಗಿ ಘೋಷಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದ್ದೇವೆ ಎಂದರು.

ಈಗ ಮತ್ತೆ ನಿಯೋಗದೊಂದಿಗೆ ತೆರಳಿ ಸಿಎಂ ಮತ್ತು ಸಂಬಂಧಿಸಿದ ಇಲಾಖೆಗಳ ಸಚಿವರಿಗೆ ಮನವಿ ಸಲ್ಲಿಸಿ ಮಹಾಲಿಂಗಪುರ ತಾಲೂಕಾ ಕೇಂದ್ರವಾಗುವರೆಗೂ ಪಕ್ಷಾತೀತ ಹೋರಾಟಕ್ಕೆ ನಿರ್ಧರಿಸಲಾಗಿದೆ ಎಂದರು.

ವಿವಿಧ ಪಕ್ಷಗಳ ಮುಖಂಡರಾದ ಎಸ್‌.ಎಂ.ಉಳ್ಳೇಗಡ್ಡಿ, ಚನಬಸು ಹುರಕಡ್ಲಿ, ಧರೆಪ್ಪ ಸಾಂಗಲಿಕರ, ಸೈದಾಪುರ ಗ್ರಾಪಂ ಅಧ್ಯಕ್ಷ ಮಹಾಲಿಂಗಪ್ಪ ಸನದಿ, ಸಿದ್ದು ಶಿರೋಳ, ಜಯರಾಮಶೆಟ್ಟಿ ಮಾತನಾಡಿ, ಮಹಾಲಿಂಗಪುರವನ್ನು ತೇರದಾಳ ತಾಲೂಕಿನಲ್ಲಿ ಸೇರಿಸಿದ್ದರಿಂದಾಗಿ ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಮುಧೋಳ, ರಬಕವಿ-ಬನಹಟ್ಟಿ, ತೇರದಾಳ ಮೂರು ತಾಲೂಕಿಗೆ ಅಲೆದಾಡುವಂತಾಗಿದೆ. ಪಟ್ಟಣವನ್ನು ತಾಲೂಕಾ ಕೇಂದ್ರವನ್ನಾಗಿಸಲು 26 ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸಹ ಒಗ್ಗಟ್ಟು ಮತ್ತು ಇಚ್ಛಾಶಕ್ತಿಯ ಕೊರತೆಯಿಂದ ಹಿನ್ನಡೆಯಾಗಿದೆ. ಈ ಬಾರಿ ಮಾತ್ರ ತಾಲೂಕಾ ಕೇಂದ್ರ ಆಗುವರೆಗೂ ಹೋರಾಟ ನಿರಂತರವಾಗಿ ಮತ್ತು ಪಕ್ಷಾತೀತವಾಗಿ ಮಾಡೋಣ. ಇದಕ್ಕೆ ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ 9 ಗ್ರಾಮಗಳ ಜನರು ಒಗ್ಗಟ್ಟಾಗಿ ಹೋರಾಟಕ್ಕೆ ಸಹಕಾರ ನೀಡಬೇಕು ಎಂದರು.

ಬಿಜೆಪಿ ಗ್ರಾಮೀಣ ಘಟಕದ ಅದ್ಯಕ್ಷ ಬಸನಗೌಡ ಪಾಟೀಲ, ಜೆಡಿಎಸ್‌ ತೇರದಾಳ ಮತಕ್ಷೇತ್ರದ ಅಧ್ಯಕ್ಷ ನಿಂಗಪ್ಪ ಬಾಳಿಕಾಯಿ, ಲಯನ್ಸ ಕ್ಲಬ್‌ ಅಧ್ಯಕ್ಷ ಗೋವಿಂದಪ್ಪ ನಿಂಗಸಾನಿ, ದಲಾಲ ವರ್ತಕರಾದ ಚಂದ್ರು ಗೊಂದಿ, ಮಹಾಲಿಂಗಪ್ಪ ನುಚ್ಚಿ, ಗುರುಲಿಂಗಪ್ಪ ಹುಬ್ಬಳ್ಳಿ, ವಿನೋದ ಚಮಕೇರಿ, ವಿಜಯ ಬಾಡನವರ, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ ಅರಳಿಕಟ್ಟಿ ಇದ್ದರು.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.