ಚುರುಕುಗೊಂಡ ವಿದ್ಯುತ್‌ ದುರಸ್ತಿ ಕಾರ್ಯ


Team Udayavani, Aug 31, 2019, 10:33 AM IST

bk-tdy-2

ಬಾಗಲಕೋಟೆ: ವಿದ್ಯುತ್‌ ದುರಸ್ತಿ ಕಾರ್ಯದಲ್ಲಿ ತೊಡಗಿರುವ ಹೆಸ್ಕಾಂ ಸಿಬ್ಬಂದಿ.

ಬಾಗಲಕೋಟೆ: ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಿಂದ ಒಟ್ಟು 195 ಗ್ರಾಮಗಳು ತುತ್ತಾಗಿದ್ದು, ಈ ಗ್ರಾಮಗಳ ಪ್ರದೇಶಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕಗಳ ದುರಸ್ತಿ ಕಾರ್ಯಕ್ಕೆ ಬೆಸ್ಕಾಂ ಕಚೇರಿಯಿಂದ ಹೆಚ್ಚುವರಿ ಸಿಬ್ಬಂದಿಗಳನ್ನು ಬಾಗಲಕೋಟೆಗೆ ನಿಯೋಜಿಸಲಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ತಿಳಿಸಿದ್ದಾರೆ.

ಜಿಲ್ಲೆಯಲ್ಲಾದ ಪ್ರವಾಹದಿಂದ ವಿದ್ಯುತ್‌ ಕಂಬಗಳು ಸಾಕಷ್ಟು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ತುರ್ತಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಬೆಸ್ಕಾಂನಿಂದ 50 ಸಿಬ್ಬಂದಿಗಳನ್ನೊಳಗೊಂಡ ಒಂದು ತಂಡವನ್ನು ಬಾಗಲಕೋಟೆ ಜಿಲ್ಲೆಗೆ ಕಳುಹಿಸಲಾಗಿದೆ. ಕಳುಹಿಸಲಾದ ತಂಡದ ಸಿಬ್ಬಂದಿಗಳನ್ನು ಬಾಗಲಕೋಟೆಗೆ 20, ಜಮಖಂಡಿಗೆ 20 ಹಾಗೂ ಮುಧೋಳ ಪ್ರದೇಶಗಳಿಗೆ 10 ಸಿಬ್ಬಂದಿಗಳನ್ನು ದುರಸ್ತಿ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದರು.

ಬೆಸ್ಕಾಂ ತಂಡದಿಂದ ದುರಸ್ತಿ ಕಾರ್ಯ ಚುರುಕೊಂಡಿದ್ದು, ಹುನಗುಂದ ತಾಲೂಕಿನ ಹುನಗುಂದ ಕೂಡಲಸಂಗಮ, ಅಮೀನಗಡ ಹಾಗೂ ಕಮತಗಿ ಹಾಗೂ ಬಾದಾಮಿ ತಾಲೂಕಿನ ನಂದಿಕೇಶ್ವರ, ಬೆಲೂರ ಹಾಗೂ ಕುಳಗೇರಿ ಪ್ರದೇಶಗಳ ವಿದ್ಯುತ್‌ ದುರಸ್ತಿ ಕೈಗೊಂಡಿದ್ದಾರೆ. ದುರಸ್ತಿ ತಂಡದಲ್ಲಿ ಮೀಟರ್‌ ತಪಾಸಣಾ ವಿಭಾಗದ ಸಿಬ್ಬಂದಿಗಳು ಇದ್ದು, ಪ್ರವಾಹದಿಂದ ಹಾಳಾದ ಟಿಸಿಗಳನ್ನು ಪರೀಕ್ಷಿಸಿ ಸರಿಯಾಗಿದ್ದಲ್ಲಿ ಪುನಃ ಅದೇ ಟಿಸಿ ಅಳವಡಿಸಲಾಗುತ್ತಿದೆ. ಪೂರ್ತಿ ಹಾಳಾಗಿದ್ದಲ್ಲಿ ಅದನ್ನು ಕಳುಹಿಸಿ ಹೊಸ ಟಿಸಿ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ನೆಲಕ್ಕೆ ಬಿದ್ದ ಕಂಬ ಪುನಃ ನಿಲ್ಲುಸುವ ಕಾರ್ಯ ಹಾಗೂ ಹೊಸ ಕಂಬ ನೆಡುವ ಕಾರ್ಯ ಮಾಡಲಾಗುತ್ತಿದೆ. ಇದರ ಜೊತೆಗೆ ವಿದ್ಯುತ್‌ ತಂತಿ ಸಹ ಬದಲಾಗಿಸುತ್ತಿದೆ. ಪ್ರವಾಹದಿಂದ 4466 ಕಿ.ಮೀ. ಕಂಡಕ್ಟರ (ವಿದ್ಯುತ್‌ ತಂತಿ) ಹಾಳಾಗಿದ್ದು, ಈಗಾಗಲೇ 37.8 ಕಿ.ಮೀ. ವಿದ್ಯುತ್‌ ತಂತಿ ಅಳವಡಿಸಲಾಗಿದೆ. ಜಮಖಂಡಿ ಭಾಗದಲ್ಲಿ ಕಡಕೋಳ, ಜಂಬಗಿ ಬಿ.ಕೆ ಮತ್ತು ಮುತ್ತೂರ, ಮುಧೋಳ ಭಾಗದಲ್ಲಿ ಗುಳಬಾಳ ಜಂಬಗಿಯಲ್ಲಿ ದುರಸ್ತಿ ಕಾರ್ಯ ಮಾಡಲಾಗಿದೆ ಎಂದರು.

ಪ್ರವಾಹಕ್ಕೆ ಒಟ್ಟು 29,766 ಐಪಿ ಸೆಟ್ (ನೀರಾವರಿ ಪಂಪ್‌ಸೆಟ್)ಗಳು ಹಾಳಾಗಿದ್ದು, ಈ ಪೈಕಿ 4,870 ರಿಪ್ಲೇಸ್‌ ಮಾಡಲಾಗಿದೆ. ಜಿಲ್ಲೆಯಲ್ಲಿ ವಿದ್ಯುತ್‌ ದುರಸ್ತಿ ಕಾರ್ಯ ಯುದ್ಧೋಪಾದಿಯಲ್ಲಿ ನಡೆದಿದ್ದು, ಬಾಗಲಕೋಟೆಯ ಹೆಸ್ಕಾಂ ಸಿಬ್ಬಂದಿ ಜೊತೆಗೆ ಕಾಂಟ್ರಾಕ್ಟರ್‌ಗಳ ವತಿಯಿಂದ ಸಿಬ್ಬಂದಿ ಪಡೆದು ಕೆಲವೊಂದು ಪ್ರದೇಶಗಳಲ್ಲಿ ಹೆಸ್ಕಾಂದಿಂದ ಸಲಕರಣ ಕೊಟ್ಟು ದುರಸ್ತಿ ಕಾರ್ಯ ಮಾಡಿಸಲಾಗುತ್ತಿದೆ ಎಂದು ಕಾಶಿನಾಥ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.