ಯುದ್ಧ ಸ್ಮಾರಕ ನಿರ್ಮಾಣಕ್ಕೆ ಕ್ರಮ


Team Udayavani, Nov 13, 2019, 10:59 AM IST

bk-tdy-2

ಬಾಗಲಕೋಟೆ: ಸೈನಿಕರನ್ನು ಗೌರವಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಜನರಲ್‌ ಜಿ.ಜಿ. ಬೇವೂರ ಸ್ಮರಣಾರ್ಥ ಯುದ್ಧ ಸ್ಮಾರಕ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ನವನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಸೈನಿಕ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುದ್ಧ ಸ್ಮಾರಕ ನಿರ್ಮಾಣ ಸೇರಿದಂತೆ ಯೋಗ್ಯ ಮಾಜಿಸೈನಿಕರನ್ನು ಸನ್ಮಾನಿಸುವುದು ಮತ್ತು ಜಿಲ್ಲೆಯಲ್ಲಿ ಇಸಿಎಚ್‌ಎಸ್‌ ಪಾಲಿಕ್ಲಿನಿಕ್‌ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

ಮಾಜಿ ಸೈನಿಕರಿಗೆ ವಿಧಿಸುತ್ತಿರುವ ಸೇವಾ ಶುಲ್ಕ, ಅನುಕಂಪ ಆಧಾರದ ನೇಮಕಾತಿ, ಗ್ರಾಮ ಪಂಚಾಯತಿಗಳಲ್ಲಿ ವಿಧಿಸುತ್ತಿರುವ ಮನೆ ಕರದ ಶೇ. 50 ಶುಲ್ಕ ರಿಯಾಯಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ಸಿಬ್ಬಂದಿಗಳ ನೇಮಕಾತಿ ಕೇಂದ್ರ ಕಚೇರಿಯ ಗಮನಕ್ಕೆ ತಂದು ಬಗೆಹರಿಸಿಕೊಳ್ಳಲು ಸೂಚಿಸಿದರು.

ಮಾಜಿ ಸೈನಿಕರಿಗೆ ಆದಾಯ ಮಿತಿಯನ್ನು 5 ಲಕ್ಷಕ್ಕೆ ಏರಿಸುವುದು, ನೀಡುತ್ತಿರುವ ಆಶ್ರಯ ಮನೆಗಳ ಹಂಚಿಕೆ ಮತ್ತು ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ನೀಡುತ್ತಿರುವ ಸೀಟು ಕಾಯ್ದಿರಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸೈನಿಕ ಮಂಡಳಿ ಸಭೆಯಲ್ಲಿ ಮಂಡಿಸುವಂತೆ ಜಿಲ್ಲೆಯ ಮಾಜಿ ಸೈನಿಕ ಸಂಘದ ಅಧ್ಯಕ್ಷರಿಗೆ ತಿಳಿಸಿದರು.

ಸೈನಿಕ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ|ರಮೇಶ ಜಗಾಪುರ ಕುಂದು ಕೊರತೆಗಳಿಗೆ ಬಗ್ಗೆ ಕೈಗೊಂಡ ಕ್ರಮಗಳ ಬಗ್ಗೆ ಸಭೆಗೆ ವಿವರಿಸಿದರು. ಮಾಜಿ ಸೈನಿಕ ಸಂಘದ ಅಧ್ಯಕ್ಷ ರಾಮಪ್ಪ ಯಡಹಳ್ಳಿ, ಮಾಜಿ ಅಧ್ಯಕ್ಷ ಕಾಂಬಳೆ, ಕಾರ್ಯದರ್ಶಿ ಎಚ್‌.ಆರ್‌. ಕುಲಕರ್ಣಿ ಹಾಗೂ ಪದಾಧಿಕಾರಿಗಳು, ಮಾಜಿ ಸೈನಿಕರ ಸಮಸ್ಯೆ ವಿವರಿಸಿದರು.

ಪ್ರೊಬೇಷನರಿ ಐಎಎಸ್‌ ಅಧಿಕಾರಿ ಗರಿಮಾ ಪನ್ವಾರ, ಜಿಲ್ಲಾ ಸೈನಿಕ ಮಂಡಳಿ ಉಪಾಧ್ಯಕ್ಷ ಮೇಜರ ಅಪ್ಪಾಸಾಹೇಬ ನಿಂಬಾಳಕರ, ಸದಸ್ಯರಾದ ಅಹ್ಮದ ರಸೂಲ್‌ ದಾಂಡಿಯಾ, ಕ್ಯಾಪ್ಟನ್‌ ಅರ್ಜುನ ಕೋರಿ, ಎಸ್‌.ಬಿ. ಕರಣಿ, ವಿಠಲ ಗೋವಿಂದಪ್ಪನವರ, ಸೈನಿಕ ಇಲಾಖೆ ಎಂ.ಎಸ್‌. ಬಬಲಾದಿಮಠ, ಪಾಂಡುರಂಗ ಬ್ಯಾಳಿ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.