ಅಸಮಾನತೆ ನಿರ್ಮೂಲನೆಗೆ ಕ್ರಮ: ಜಿಲ್ಲಾಧಿಕಾರಿ

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಲು-ಪಟ್ಟಿ ನೀಡಲು ಸೂಚನೆ

Team Udayavani, Jul 20, 2019, 3:30 PM IST

bk-tdy-4

ಬಾಗಲಕೋಟೆ: ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಸಭೆಯಲ್ಲಿ ಮಾತನಾಡಿದರು.

ಬಾಗಲಕೋಟೆ: ವಿಶೇಷ ಹಾಗೂ ಗಿರಿಜನ ಅಭಿವೃದ್ಧಿಗೆ ಮೀಸಲಿರಿಸಲಾದ ಯೋಜನೆಗಳ ಕಾರ್ಯಕ್ರಮ ಸಮರ್ಪಕ ಅನುಷ್ಠಾನಗೊಳಿಸುವ ಮೂಲಕ ಅಸಮಾನತೆ ನಿರ್ಮೂಲನೆಗೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಸಿಪಿ ಹಾಗೂ ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಹಿಂದುಳಿದ ಜನಾಂಗವನ್ನು ಆರ್ಥಿಕ, ಸಾಮಾಜಿಕವಾಗಿ ಮುಂದೆ ಬರುವಂತೆ ಮಾಡಬೇಕು. ತಮಗೆ ಒದಗಿಸಿದ ಕೆಲಸವನ್ನು ಚಾಚು ತಪ್ಪದೇ ನಿರ್ವಹಿಸಬೇಕು. ಅನ್ಯಾಯ, ಅನೀತಿ, ತಾರತಮ್ಯ ಹಾಗೂ ಕಾನೂನು ಬಾಹಿರವಾಗಿ ಯಾವುದೇ ಕಾರ್ಯ ಬೇಡ. ಜಿಲ್ಲೆಯಲ್ಲಿರುವ ಪಂಚಾಯತಿವಾರು ಪರಿಶಿಷ್ಟ ಜಾತಿ ಮತ್ತು ಪಂಗಡದ ವರ್ಗದವರ ಪಟ್ಟಿ ಮಾಡಬೇಕು. ಅದರಲ್ಲಿ ವಿಕಲಚೇತನರ ಮಾಹಿತಿ ಕ್ರೋಢಿಕರಿಸಿ ಸಲ್ಲಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಲಾಗಿತ್ತು. ಆದರೂ ಮಾಹಿತಿ ನೀಡದಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಬೇಗನೇ ಮಾಹಿತಿ ನೀಡಲು ಸೂಚಿಸಿದರು.

ಮಲ ಹೊರುವ ಪದ್ಧತಿಯನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸೆಪ್ಟಿಕ್‌ ಟ್ಯಾಂಕ್‌ ಕ್ಲಿನ್‌ ಮಾಡಲಕ್ಕೆ ಮಶೀನ್‌ ಬಳಕೆ ಮಾಡಬೇಕು. ಸಕ್ಕಿಂಗ್‌, ಜಟ್ಟಿಂಗ್‌ ಮಶೀನ್‌ನಿಂದ ಕ್ಲಿನ್‌ ಮಾಡಲು ಅಂದಾಜು 2-3 ಸಾವಿರ ರೂ. ವರೆಗೆ ಬಾಡಿಗೆ ಪಡೆಯಲಾಗುತ್ತಿದೆ. ಅದನ್ನು ಸಾಂಕೇತಿಕವಾಗಿ ಬಾಡಿಗೆಯಲ್ಲಿ 25 ರೂ. ಕಡಿಮೆ ಮಾಡುವ ಕುರಿತು ಜಿಲ್ಲೆಯಲ್ಲಿರುವ 15 ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಲ್ಲಿಸಿದ ಪ್ರಸ್ತಾವನೆಗ‌ಳಿಗೆ ಜಿಲ್ಲಾಧಿಕಾರಿಳು ಸಭೆಯಲ್ಲಿ ಅನುಮೋದಿಸಿ, ಈ ಕಾರ್ಯವನ್ನು ಲಾಭಕ್ಕಾಗಿ ಮಾಡದೇ ಸೇವೆಯ ರೂಪದಲ್ಲಿ ಮಾಡಲು ತಿಳಿಸಿದರು.

ಈ ಕುರಿತು ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಬೋರ್ಡ್‌ ಗಳನ್ನು ಹಾಕಬೇಕು. ಜನರಲ್ಲಿ ಈ ಬಗ್ಗೆ ಅರಿವು ಮೂಡಿಸಿ, ಸ್ವಚ್ಛತೆಗೆ ಹೆಚ್ಚು ಗಮನ ಹರಿಸಲು ಸೂಚಿಸಿದ ಅವರು, ಪೌರ ಕಾರ್ಮಿಕರು ಗ್ಲೌಸ್‌ ಮತ್ತು ಗಂಬೂಟ್ಸ್‌ ಹಾಗೂ ಸ್ವಚ್ಛತಾ ಪರಿಕರಣಗಳನ್ನು ಕಡ್ಡಾಯವಾಗಿ ಒದಗಿಸಲು ಸೂಚಿಸಿದರು. ಜವಳಿ ಇಲಾಖೆಯಿಂದ ಸ್ಯಾನಿಟರಿ ನ್ಯಾಪ್‌ ಕಿನ್ಸ್‌ಗಳ ಘಟಕ ಸ್ಥಾಪಿಸುವ ನಿಟ್ಟಿನಲ್ಲಿ ತಾಲೂಕಿಗೆ ಒಂದರಂತೆ ಪ್ರಾರಂಭಿಸಲು ಕ್ರಮಕೈಗೊಳ್ಳಲು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬೀದರಿಮಠ ಅವರಿಗೆ ತಿಳಿಸಿದರು.

ಘಟಕ ಸ್ಥಾಪನೆಗೆ ಮುತೂವರ್ಜಿ ವಹಿಸಿ ಕ್ರಮಕೈಗೊಳ್ಳಲು ಸೂಚಿಸಿದರು. ಪ್ರಸಕ್ತ ಸಾಲಿನ ತ್ತೈಮಾಸಿಕ ಅವಧಿಯಲ್ಲಿ ಎಸ್‌ಸಿಪಿಯಲ್ಲಿ ಶೇ.37.69 ಪ್ರಗತಿ ಸಾಧಿಸಿದರೆ ಟಿಎಸ್‌ಪಿಯಲ್ಲಿ ಶೇ.30.93ರಷ್ಟು ಪ್ರಗತಿ ಸಾಧಿಸಿರುವ ಬಗ್ಗೆ ಸಭೆಗೆ ತಿಳಿಸಿದಾಗ ಗುರಿ ಸಾಧನೆಗೆ ಕಡಿಮೆಯಾಗಿದ್ದು, ಎಲ್ಲ ಇಲಾಖೆಗಳು ಮುಂದಿನ ಸಭೆಯಲ್ಲಿ ಪ್ರಗತಿ ಸಾಧಿಸಬೇಕು. ಹಿಂದಿನ ಸಭೆಯ ಅನುಪಾಲನಾ ವರದಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಸಭೆಗೆ ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಿಲ್ಲಾ ಜಂಟಿ ನಿರ್ದೇಶಕ ರಾಜಶೇಖರ ವಿಜಾಪುರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರಭುರಾಜ ಹಿರೇಮಠ, ಉಪಅರಣ್ಯ ಸಂರಕ್ಷಣಾಧಿಕಾರಿ ಬಸವರಾಜಯ್ಯ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.