ಸಮಸ್ಯೆಗಳ ಪರಿಹಾರಕ್ಕೆ ಕ್ರಮ
Team Udayavani, Jul 7, 2019, 2:25 PM IST
ಕೆರೂರ: ಕೆರೂರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ಅವರನ್ನು ಸನ್ಮಾನಿಸಲಾಯಿತು.
ಕೆರೂರ: ಇಲ್ಲಿನ ಪೊಲೀಸ್ ಸಿಬ್ಬಂದಿ ವಸತಿಗೃಹಗಳ ಸಮಸ್ಯೆ ಮತ್ತು ಠಾಣೆಯಲ್ಲಿ ವ್ಯಾಪ್ತಿಗೆ ತಕ್ಕಂತೆ ಸಿಬ್ಬಂದಿ ಕೊರತೆ ಅಧಿಕಾರಿಗಳ ಮೂಲಕ ಗಮನಕ್ಕೆ ಬಂದಿದ್ದು, ಶೀಘ್ರ ಬಗೆಹರಿಸುವುದಾಗಿ ನೂತನ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಸಾರ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದಲ್ಲಿ ಅಹಿತಕರ ಘಟನೆ ಜರುಗದಂತೆ ಸಮರ್ಪಕ ರೀತಿಯಲ್ಲಿ ಜಾಗೃತಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಕೆರೂರ ಪಿಎಸ್ಐ ಚಂದ್ರಶೇಖರ ಹೆರಕಲ್ ಅವರಿಂದ ಠಾಣೆ ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಮಾಹಿತಿ ಪಡೆದರು. ಡಿವೈಎಸ್ಪಿ ಗಿರೀಶ, ಸಿಪಿಐ ಕೆ.ಎಸ್. ಹಟ್ಟಿ, ಎಎಸ್ಐ ಎಂ.ಎಚ್. ಹೊಸಮನಿ, ಐ.ಎಂ. ಹಿರೇಗೌಡರ, ಎನ್.ಎಸ್.ಸಿಮಾನಿ, ಎಫ್.ವೈ. ತಳವಾರ, ಶಶಿ ಮಸೂತಿ, ಆರ್.ಎಚ್.ಬಿಂಗಿ, ಎಮ್.ಆರ್. ಹೊನ್ನಾನಾಯ್ಕರ, ಎನ್.ಪಿ. ರೇಶ್ಮಿ, ಮಲ್ಲು ಕೂಡಗಿ, ಯಲ್ಲಪ್ಪ ಪೂಜಾರಿ, ವಿ.ಆರ್. ನಡುವಿನಮನಿ, ಗುರು ಒಡೆಯರ, ಎಸ್.ಎಸ್. ಕುಲಕರ್ಣಿ, ಆರತಿ ಸಂಗನಾಳ ಇದ್ದರು.
ಸನ್ಮಾನ: ಇದೇ ಸಂದರ್ಭದಲ್ಲಿ ಎಸ್ಪಿ ಲೋಕೇಶ ಅವರನ್ನು ಭೇಟಿಯಾದ ಸ್ಥಳೀಯ ಭಜಂತ್ರಿ (ಕೊರಮ) ಸಮಾಜದ ಪ್ರಮುಖರು, ತಮ್ಮ ಸಮುದಾಯ ಯುವಕ ಐಪಿಎಸ್ ಅಧಿಕಾರಿಯಾಗಿ ಮಾಡಿದ ಸಾಧನೆಯನ್ನು ಅಭಿನಂದಿಸಿ ಸನ್ಮಾನಿಸಿದರು. ಭಜಂತ್ರಿ ಸಮಾಜದ ಅಧ್ಯಕ್ಷ ವೆಂಕಣ್ಣ ಭಜಂತ್ರಿ, ಶಿವು ಸಣ್ಣಕ್ಕಿ, ನಾಗಪ್ಪ ಭಜಂತ್ರಿ, ದುರಗಪ್ಪ ಭಜಂತ್ರಿ, ಉಮೇಶ ಭಜಂತ್ರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..