ಮಾ.8ರಂದು ರಾಜಕಾರಣಿಗಳ ಹೊಸ ಗುಟ್ಟು ಬಹಿರಂಗಪಡಿಸುತ್ತೇನೆ: ಮತ್ತೊಂದು ಬಾಂಬ್ ಸಿಡಿಸಿದ ಮಲಾಲಿ
ಸಿಡಿ ತಂತ್ರಗಾರಿಕೆಗೆ ಉತ್ತರ ಕರ್ನಾಟಕದ ಶೇ.75ರಷ್ಟು ಜನಪ್ರತಿನಿಧಿಗಳು ಬಲಿ !
Team Udayavani, Mar 7, 2021, 3:03 PM IST
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದ ಸಿಡಿ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬೆಳಗಾವಿ ರಾಜಕೀಯಕ್ಕೆ ಸಂಬಂಧಿಸಿದ ಸಿಡಿ ಪ್ರಕರಣದ ಕುರಿತು ಮತ್ತೊಂದು ಬಾಂಬ್ ಸಿಡಿಸಿರುವ ಬಳ್ಳಾರಿಯ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮಲಾಲಿ, ಮಾ.8ರಂದು ರಾಜಕಾರಣಿಗಳ ಹೊಸ ಗುಟ್ಟು ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.
ರವಿವಾರ ಮಧ್ಯಾಹ್ನ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಶೇ.75ರಷ್ಟು ಸಿಡಿ ತಂತ್ರಗಾರಿಕೆಗೆ ಬಲಿಯಾಗಿದ್ದಾರೆ. ಈ ವಿಷಯದಲ್ಲಿ ಅವರೆಲ್ಲ ಮುಗ್ಧರು ಎಂದರು.
ಉತ್ತರ ಕರ್ನಾಟಕದ ರಾಜಕಾರಣಿಗಳಲ್ಲಿ ಶೇ.75ರಷ್ಟು ಜನ ಸಿಡಿ ರಾಜಕಾರಣಕ್ಕೆ ಬಲಿಯಾಗಿದ್ದಾರೆ. ಇದು ಎಲ್ಲಿ ನಡೆಯಿತು. ಹೇಗೆ ನಡೆಯಿತು ಎಂಬುದರ ಕುರಿತು ಸೋಮವಾರ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಸಿದ್ದು- ಡಿಕೆಶಿ ಜೋಡೆತ್ತುಗಳಲ್ಲ, ಅಧಿಕಾರಕ್ಕೆ ಬಡಿದಾಡುವ ಹೋರಿಗಳು: ಶ್ರೀರಾಮುಲು ಟೀಕೆ
ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೋಳಿ ಅವರದು ಎನ್ನಲಾದ ಸಿಡಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಮಾನವ ಹಕ್ಕುಗಳ ಹೋರಾಟಗಾರರು ಎನ್ನಲಾದ ಇಂದಿರಾ ಎಂಬುವವರು ನನ್ನ ವಿರುದ್ಧ ದೂರು ಕೊಟ್ಟಿದ್ದಾರೆ. ಈ ಕುರಿತು ನನಗೂ ನೋಟಿಸ್ ಬಂದಿದ್ದು, ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ನಮ್ಮ ವಕೀಲರು ವಿಚಾರಣೆಗೆ ಹಾಜರಾಗುತ್ತಾರೆ. ಖುದ್ದಾಗಿ ನಾನೇ ಹಾಜರಾಗಬೇಕು ಎಂದು ಹೇಳಿದರೆ, ಯಾವ ದಿನದಿಂದ ಹಾಜರಾಗಬೇಕು ಎಂಬುದರ ಕುರಿತು ಬಳಿಕ ತಿಳಿಸುವೆ ಎಂದರು.
ಇದನ್ನೂ ಓದಿ: ಐಪಿಎಲ್ 2021ಕ್ಕೆ ಮುಹೂರ್ತ ನಿಗದಿ: 6 ನಗರದಲ್ಲಿ ನಡೆಯಲಿದೆ ಕೂಟ, ಸಂಪೂರ್ಣ ವೇಳಾಪಟ್ಟಿ
ಎಚ್ಡಿಕೆ ಎಚ್ಚರಿಕೆಯಿಂದ ಮಾತನಾಡಲಿ: ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿಗಳು ಏಳು ಜನ ಇದ್ದಾರೆ. ಅದರಲ್ಲಿ ಒಬ್ಬರು ಪದೇ ಪದೇ ವಯಾನಾಡಿಗೆ ಹೋಗುತ್ತಾರೆ ಎಂದು ನಾನು ಹೇಳಿದ್ದು ನಿಜ. ಆದರೆ, ಕುಂಬಳಕಾಯಿ ಕಳ್ಳ ಅಂದರೆ ಕುಮಾರಸ್ವಾಮಿ ಯಾಕೆ, ಹೆಗಲು ಮುಟ್ಟಿಕೊಳ್ಳಬೇಕು. ಇನ್ನೂ ಆರು ಜನ ಸಿಎಂಗಳು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಕುಮಾರಸ್ವಾಮಿ ಮಾತ್ರ ಅತ್ಯಂತ ಹಗುರವಾಗಿ ಮಾತನಾಡಿದ್ದಾರೆ. ಹೋರಾಟಗಾರರು ಎಂದರೆ ಕೇವಲವಾಗಿ ಕಾಣಬೇಡಿ. ಗೌರವದಿಂದ ಮಾತನಾಡಬೇಕು. ನಾನು ಮಾಜಿ ಮುಖ್ಯಮಂತ್ರಿಗಳು ಎಂದು ಗೌರವದಿಂದ ಕರೆದಿದ್ದೇನೆ. ಆದರೆ, ಕುಮಾರಸ್ವಾಮಿ, ಬಂಧಿಸಬೇಕು, ಎರೋಪ್ಲೇನ್ ಹತ್ತಿಸಬೇಕೆಂದು ಹೇಳಿದ್ದಾರೆ. ನಾವೇನು ಚಿತ್ರ ನಟಿಯನ್ನು ಮದುವೆಯಾಗಿಲ್ಲ. ಬಳಿಕ ನಟಿಯನ್ನು ಕೈಬಿಟ್ಟು ಬೇರೊಬ್ಬರನ್ನು ಮದುವೆಯಾಗಿಲ್ಲ. ಹೋರಾಟಗಾರರೆಂದರೆ ಏನು ಎಂದು ತೋರಿಸುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ