ತೇರದಾಳ ತಾಲೂಕಿಗೆ 8 ಹಳ್ಳಿ ಸೇರ್ಪಡೆ-ಅಧಿಸೂಚನೆ ಪ್ರಕಟ
ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇಲ್ಲದ್ದಕ್ಕೆ ಹೋರಾಟ ಸಮಿತಿ ಆಕ್ರೋಶ
Team Udayavani, Jul 31, 2022, 2:54 PM IST
ತೇರದಾಳ: ನೂತನ ತಾಲೂಕು ಎಂದು ಘೋಷಣೆಗೊಂಡಿರುವ ತೇರದಾಳ ತಾಲೂಕಿಗೆ ತೇರದಾಳ ಪಟ್ಟಣ ಸೇರಿ ಸಸಾಲಟ್ಟಿ ಜಿಪಂ ವ್ಯಾಪ್ತಿಯ ಎಂಟು ಹಳ್ಳಿಗಳನ್ನು ಸೇರ್ಪಡೆಗೊಳಿಸಿ ಸರಕಾರ ಅಧಿಸೂಚನೆ ಆದೇಶ ಹೊರಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ನಗರ ಘಟಕ ಅಧ್ಯಕ್ಷ ಮಹಾವೀರ ಕೊಟಕನೂರ, ಈಗ ಸರಕಾರ ತೇರದಾಳ ತಾಲೂಕಿಗೆ ಕಲ್ಲಟ್ಟಿ, ಗೋಲಭಾವಿ, ಕಾಲತಿಪ್ಪಿ, ಸಸಾಲಟ್ಟಿ, ತಮದಡ್ಡಿ, ಹಳಿಂಗಳಿ, ಹನಗಂಡಿ ಹಾಗೂ ಯರಗಟ್ಟಿ ಹಳ್ಳಿಗಳನ್ನು ಸೇರ್ಪಡೆಗೊಳಿಸಿ ಭೌಗೋಳಿಕ ಕ್ಷೇತ್ರವನ್ನು ಕೂಡ ವಿಂಗಡನೆ ಮಾಡಿ ಆದೇಶ ಹೊರಡಿಸಿದೆ. ತೇರದಾಳ ತಾಲೂಕಿಗೆ ಕಡಿಮೆ ಹಳ್ಳಿಗಳನ್ನು ವಿಂಗಡಿಸಿದ್ದರೂ ಸಹ ಅಭಿವೃದ್ಧಿಗೆ ಹಾಗೂ ಸರಕಾರಿ ಕಚೇರಿಗಳಿಗೆ ತೊಂದರೆ ಆಗುವುದಿಲ್ಲ. ತಾಲೂಕಿಗೆ ಇರಬೇಕಾದ ಎಲ್ಲ ಸೌಲಭ್ಯಗಳನ್ನು ಸರಕಾರ ಒದಗಿಸಲಿದೆ. ಆ ನಿಟ್ಟಿನಲ್ಲಿ ಶಾಸಕರು ಕೂಡ ತೇರದಾಳ ತಾಲೂಕಿನ ಅಭಿವೃದ್ಧಿಗೆ ಬದ್ಧ ಇದ್ದಾರೆ ಎಂದು ಕೊಕಟನೂರ ತಿಳಿಸಿದ್ದಾರೆ.
ಪಟ್ಟಣದಲ್ಲಿರುವ ಸರಕಾರಿ ಕಚೇರಿಗಳ ಜತೆಗೆ ಇತರೇ ಕಚೇರಿಗಳು ಶೀಘ್ರ ಆರಂಭಗೊಳ್ಳಲಿವೆ. ಆ ನಿಟ್ಟಿನಲ್ಲಿ ಶಾಸಕರ ಮೇಲೆ ಒತ್ತಡ ಕೂಡ ಹೇರಲಾಗಿದೆ. ತೇರದಾಳ ತಾಲೂಕಿಗೆ ಪಕ್ಷಾತೀತ, ಜಾತ್ಯತೀತವಾಗಿ ನಡೆದ ಹೋರಾಟ ಹೆಮ್ಮೆ ಪಡುವಂತಾಗಿದ್ದು, ತೇರದಾಳ ಜನತೆಯ ತಾಲೂಕಿನ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ. ತೇರದಾಳ ತಾಲೂಕು ರಚನೆ ಹಾಗೂ ಹಳ್ಳಿಗಳ ವಿಂಗಡನೆಗೆ ಕೈ ಜೋಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ, ಕಂದಾಯ ಸಚಿವ ಆರ್. ಅಶೋಕ ಹಾಗೂ ಶಾಸಕ ಸಿದ್ದು ಸವದಿ ಅವರಿಗೆ ಧನ್ಯವಾದ ತಿಳಿಸಿದರು. ರಾಮಣ್ಣ ಹಿಡಕಲ್, ಪ್ರಭಾಕರ ಬಾಗಿ, ಅಪ್ಪು ಮಂಗಸೂಳಿ, ಅಲ್ಲಪ್ಪ ಬಾಬಗೊಂಡ, ಸಿದ್ದು ಅಮ್ಮಣಗಿ, ಪ್ರಕಾಶ ಹೊಸಮನಿ, ಸಂತೋಷ ಜಮಖಂಡಿ, ಸದಾಶಿವ ಹೊಸಮನಿ ಇನ್ನಿತರಿದ್ದರು.
ತೇರದಾಳ ತಾಲೂಕಿಗೆ ಹಳ್ಳಿಗಳ ವಿಂಗಡನೆ ಮಾಡಿ ಆದೇಶ ಹೊರಡಿಸುವ ಮೂಲಕ ಸರಕಾರ ತೇರದಾಳ ಜನತೆಯ ಹೋರಾಟಕ್ಕೆ ಬೆಲೆ ನೀಡಿದೆ. ತೇರದಾಳ ತಾಲೂಕಿಗೆ ಮಠಾಧಿಧೀಶರು ಸೇರಿ ಹೋರಾಟ ಸಮಿತಿ ನಡೆಸಿದ ಹೋರಾಟ ಶ್ಲಾಘನೀಯ. ಬರುವ ದಿನಗಳಲ್ಲಿ ಎಲ್ಲ ಸರಕಾರಿ ಕಚೇರಿ ಆರಂಭಗೊಂಡು ಹೊಸ ತಾಲೂಕು ಅಭಿವೃದ್ಧಿ ಹೊಂದುವಂತಾಗಲಿ. –ಕುಸುಮಾಂಡಿನಿ ಅಲ್ಲಪ್ಪ ಬಾಬಗೊಂಡ, ಅಧ್ಯಕ್ಷರು ತೇರದಾಳ, ಪುರಸಭೆ
ತಾಲೂಕಿಗೆ ಸರಕಾರ ಹಳ್ಳಿಗಳನ್ನು ವಿಂಗಡಿಸಿ ಆದೇಶ ಹೊರಡಿಸಿರುವುದು ನಿಯಮಾನುಸಾರ ಇಲ್ಲ. ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಆಗುವಂತೆ ಹಳ್ಳಿಗಳನ್ನು ವಿಂಗಡನೆ ಮಾಡಿ ಎಂದು ಸಾಕಷ್ಟು ಬಾರಿ ಹೇಳಿದ್ದೇವೆ. ಆದರೆ, ಕೆಲ ಜನಪ್ರತಿನಿಧಿಗಳು ಸರಕಾರದ ಜತೆಗೆ ಅಧಿಕಾರಿಗಳ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಈ ವಿಂಗಡನೆ ಮಾಡಿರುವ ಹಳ್ಳಿಗಳನ್ನು ನಾವು ಒಪ್ಪುವುದಿಲ್ಲ. ಆದ್ದರಿಂದ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಮಾಡಿ ಹಳ್ಳಿಗಳನ್ನು ವಿಂಗಡನೆ ಮಾಡಬೇಕು. ಇಲ್ಲದಿದ್ದರೆ ಸದ್ಯದರಲ್ಲೆ ಸಾರ್ವಜನಿಕ ಸಭೆ ಕರೆದು ಹೋರಾಟದ ಬಗ್ಗೆ ಚರ್ಚಿಸಲಾಗುವುದು. ಅಗತ್ಯ ಬಿದ್ದರೆ ಮುಖ್ಯಮಂತ್ರಿ, ಕಂದಾಯ ಸಚಿವರು, ಜಿಲ್ಲಾಡಳಿತ ಸರಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. –ಬಸವರಾಜ ಬಾಳಿಕಾಯಿ, ತಾಲೂಕು ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?