ಬಜೆಟ್ ಪೂರ್ವಭಾವಿ ಸಭೆಯಲ್ಲಿ ನಾಗರಿಕರಿಂದ ಸಲಹೆ


Team Udayavani, Jan 6, 2020, 12:13 PM IST

bk-tdy-3

ಗುಳೇದಗುಡ್ಡ: ಪಟ್ಟಣದ ಪುರಸಭೆ ಸಭಾಭವನದಲ್ಲಿ ರವಿವಾರ ನಡೆದ ಪುರಸಭೆ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಕಳೆದ ವರ್ಷ ನೀಡಿದ ಸಲಹೆಗಳನ್ನು ಕಾರ್ಯರೂಪಕ್ಕೆ ತಂದಿರುವ ಬಗ್ಗೆ ಮಾಹಿತಿ ನೀಡುವಂತೆ ನಿವಾಸಿಗಳು ಆಗ್ರಹಿಸಿದರು.

ಪೂರ್ವಭಾವಿ ಸಭೆ ಆರಂಭವಾಗುತ್ತಿದ್ದಂತೆ ಗದ್ದಲದ ವಾತಾವರಣ ಕಂಡುಬಂದಿತು. ಪಟ್ಟಣದಲ್ಲಿ ನೀರು ಬಂದಾಗ ರಸ್ತೆ ಮೇಲೆ ನೀರು ಹರಿಯುತ್ತದೆ. ಕೆಲವು ಮನೆಗಳಿಗೆ ನೀರಿನ ಕರ ವಸೂಲಿಗೆ ನಲ್ಲಿಗಳಿಗೆ ಮೀಟರ್‌ ಅಳವಡಿಸಿದರೆ, ಇನ್ನೂ ಸಾಕಷ್ಟು ಮನೆಗಳಿಗೆ ನಲ್ಲಿಗೆ ಮೀಟರ್‌ ಅಳವಡಿಸಿಲ್ಲ, ಪಟ್ಟಣದಲ್ಲಿ ಕಳೆದ 20 ವರ್ಷಗಳ ಹಿಂದೆ ಪುರಸಭೆ ಮಳಿಗೆಗಳಿಗೆ ಲೀಜ್‌ ನೀಡಿದ್ದು, ಅವುಗಳ ದರ ಹೆಚ್ಚಿಸಿಲ್ಲ ಎಂದು ಪ್ರಶ್ನಿಸಿದರು.

ಸಾರ್ವಜನಿಕ ಮಹಿಳಾ ಶೌಚಾಲಯಗಳು ನಿರ್ವಹಣೆ ಇಲ್ಲದೇ ನಿರುಪಯುಕ್ತವಾಗಿದ್ದರೂ ಅವುಗಳಿಗೆ ಅನುದಾನ ಖರ್ಚು ಮಾಡುವುದಂತೂ ತಪ್ಪಿಲ್ಲ. ಒಳಚರಂಡಿ ಲೈನ್‌ ಗಳು ಕೆಲ ವಾರ್ಡ್‌ಗಳಲ್ಲಿ ಸಮರ್ಪಕವಾಗಿರದ ಕಾರಣ ಚರಂಡಿ ನೀರು ಮನೆಗಳಲ್ಲಿ ಬರುತ್ತಿದೆ. ಹೀಗೆ ಹತ್ತಾರು ಸಮಸ್ಯೆಗಳನ್ನು ನಿವಾಸಿಗಳು ಮುಂದಿಟ್ಟರು.

ಅಭಿಯಂತರ ಕೊಡಕೇರಿ ಪ್ರಸಕ್ತ ಸಾಲಿನಲ್ಲಿ ನೀರಿನ ಕರ, ಮನೆ ಕರ, ವಾಣಿಜ್ಯ ಮಳಿಗೆ ಕರ ಇತ್ಯಾದಿ ಸೇರಿ ಒಟ್ಟು ರೂ. 1.23 ಕೋಟಿ ಅಂದಾಜು ಆದಾಯ ಬರುವ ನಿರೀಕ್ಷೆ ವ್ಯಕ್ತಪಡಿಸಿದರೆ, 1.58 ಕೋಟಿ ನಿರೀಕ್ಷಿತ ಖರ್ಚು ಇರುವುದಾಗಿ ಸಭೆಗೆ ತಿಳಿಸಿದರು.

ಸಲಹೆಗಳು: ತ್ಯಾಜ್ಯದಿಂದ ಮರುಬಳಕೆ ಮಾಡುವುದು, ವಾಣಿಜ್ಯ ಮಳಿಗೆಗಳ ಲೀಜ್‌ ಮರುಪರಿಶೀಲಿಸಿ ದರ ಹೆಚ್ಚಿಸುವುದು, ಕುಡಿಯುವ ನೀರಿನ ನಲ್ಲಿಗಳಿಗೆ ಮೀಟರ್‌ ಅಳವಡಿಕೆ, ಪರವಾನಗಿಯಿಲ್ಲದ ಕಟ್ಟಡಗಳಿಗೆ ಪರವಾನಗಿ ನೀಡುವುದು, ನಿರುಪಯುಕ್ತ ಕೆಲ ಪುರಸಭೆ ಆಸ್ತಿಗಳನ್ನು ಬಾಡಿಗೆಗೆ ನೀಡುವುದು ಸೇರಿದಂತೆ ಇನ್ನೂ ಅನೇಕ ಉಪಯುಕ್ತ ಸಲಹೆಗಳನ್ನು ಪುರಸಭೆ ಸದಸ್ಯರು ಹಾಗೂ ಸಭಿಕರು ಅಧಿಕಾರಿಗಳಿಗೆ ನೀಡಿದರು.

ಆಲಮಟ್ಟಿಯಿಂದ ಗುಳೇದಗುಡ್ಡಕ್ಕೆ ಪೂರೈಕೆಯಾಗುವ ಕುಡಿಯುವ ನೀರಿಗೆ ವಿದ್ಯುತ್‌ ಬಿಲ್‌, ಕಾರ್ಮಿಕರ ವೇತನ, ದುರಸ್ತಿ ಸೇರಿ ವರ್ಷಕ್ಕೆ ಲಕ್ಷಾಂತರ ರೂ. ಖರ್ಚು ಬರುತ್ತದೆ ಎಂದು ಅ ಧಿಕಾರಿಗಳು ಹೇಳುತ್ತಿದ್ದಂತೆ, ಪುರಸಭೆ ಸದಸ್ಯರು ಅ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪುರಸಭೆ ಸದಸ್ಯರಾದ ವಿನೋದ ಮದ್ದಾನಿ, ಉಮೇಶ ಹುನಗುಂದ, ಯಲ್ಲಪ್ಪ ಮನ್ನಿಕಟ್ಟಿ, ಅಮರೇಶ ಕವಡಿಮಟ್ಟಿ, ವಿಠuಲಸಾ ಕಾವಡೆ, ರಫೀಕ್‌ ಅಹಮ್ಮದ ಕಲಬುರ್ಗಿ, ಪ್ರಶಾಂತ ಜವಳಿ, ರಾಜಶೇಖರ ಹೆಬ್ಬಳ್ಳಿ, ಶಾಂ ಸುಂದರ್‌ ಮೇಡಿ, ಮಾಜಿ ಅಧ್ಯಕ್ಷರಾದ ನಾಗಪ್ಪ ಗೌಡ್ರ, ವೈ.ಆರ್‌.ಹೆಬ್ಬಳ್ಳಿ, ಮಾಜಿ ಉಪಾದ್ಯಕ್ಷ ಪ್ರಕಾಶ ಮುರಗೋಡ, ಸ್ಥಾಯಿ ಸಮೀತಿ ಮಾಜಿ ಅಧ್ಯಕ್ಷ ಅಶೋಕ ಹೆಗಡಿ, ಮುಬಾರಕ ಮಂಗಳೂರ ಹಾಜರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.