ಗೋವಿನ ಜೋಳದ ಬೆಳೆಗೆ ಸೈನಿಕ ಹುಳುವಿನ ಬಾಧೆ

ಎಲೆಗಳನ್ನು ತಿಂದು ಗಟ್ಟಿಯಾದ ಹಿಕ್ಕೆಗಳನ್ನು ಎಲೆಗಳ ಮೇಲೆ ಮತ್ತು ಸುಳಿಯಲ್ಲಿ ಕಾಣಬಹುದು

Team Udayavani, Aug 3, 2021, 6:24 PM IST

Hula

ಬಾಗಲಕೋಟೆ: ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಗೋವಿನ ಜೊಳದ ಬೆಳೆಯಲ್ಲಿ ಪರಕೀಯ ಹಾಗೂ ಆಕ್ರಮಣಕಾರಿ ಕೀಟ ನ್ಪೋಡಾಪ್ಟೀರಾ ಫ್ರೂಜಿಫೆರಡಾ ಹಾವಳಿ ಕಂಡುಬಂದಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ.

ಈ ಕೀಟವು ಬೆಳೆಯ ಸುಳಿಯಲ್ಲಿ ಇದ್ದು, ಹಗಲು ರಾತ್ರಿ ಇಡೀ ಚಟುವಟಿಕೆಯಿಂದ ಕೂಡಿದ್ದು ಎಲೆ ತಿನ್ನುತ್ತಾ ಹಾನಿ ಮಾಡುತ್ತಿದೆ. ಈ ಕೀಟವು ಲೆಪಿಡಾಪ್ಟೀರಾ ಗುಂಪಿಗೆ ಸೇರಿದ್ದು ಅಂತಾರಾಷ್ಟೀಯವಾಗಿ ಕೀಟ ತಜ್ಞರು ಇದನ್ನು ಫಾಲ್‌ ಆರ್ಮಿವರ್ಮ ಎಂದು ಗುರುತಿಸುತ್ತಾರೆ. ಈ ಕೀಟವು ವಿಶೇಷವಾಗಿ ಆಹಾರ ಧಾನ್ಯಗಳ ಬೆಳೆಗಳಾದ ಗೋವಿನ ಜೋಳ, ಜೋಳ ಹಾಗೂ ಇತರ ಬೆಳೆಗಳನ್ನು ಬಾಧಿಸುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಮೋಡ ಕವಿದ ಹಾಗೂ ತುಂತುರ ಮಳೆಯಿಂದ ಕೂಡಿದ ವಾತಾವರಣ ಇರುವುದರಿಂದ ಈ ಕೀಟದ ಪಸರಿಸಿರುವಿಕೆ ಇನ್ನೂ ಹೆಚ್ಚಾಗಿರುತ್ತದೆ. ಈ ಕೀಟವು ತನ್ನ ಜೀವನ ಚಕ್ರವನ್ನು 30-40 ದಿವಸಗಳಲ್ಲಿ ಪೂರ್ಣಗೊಳಿಸಬಲ್ಲದಾಗಿದ್ದು ಪ್ರೌಢ ಪತಂಗವು ಒಂದು ರಾತ್ರಿಯಲ್ಲಿ ಕನಿಷ್ಠ 100 ಕಿ.ಮೀ ದೂರವನ್ನು ಕ್ರಮಿಸಬಲ್ಲದು ಎಂದು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ| ಅರ್ಜುನ ಸೂಲಗಿತ್ತಿ ತಿಳಿಸಿದ್ದಾರೆ.

ಬಾಧೆಯ ಲಕ್ಷಣಗಳು: ತತ್ತಿಯಿಂದ ಹೊರಬಂದ ಮರಿಹುಳುಗಳು ಸಮೂಹವಾಸಿಯಾಗಿದ್ದು ಮೊದಲು ಮೊಟ್ಟೆಯ, ತತ್ತಿಯ ಸಿಪ್ಪೆಯನ್ನೆ ತಿಂದು ಬದುಕುತ್ತವೆ. ತದನಂತರ ಗೋವಿನ ಜೋಳದ ಸುಳಿಯಲ್ಲಿ ಉಳಿದುಕೊಂಡು ಸಸ್ಯಗಳ ಹರಿತ್ತನ್ನು ಕೆರೆದು ತಿಂದು ಬದುಕುತ್ತವೆ. ಇಂತಹ ಎಲೆಗಳು ಜಾಳು ಜಾಳಾಗಿದ್ದು ಅಸ್ಥಿಪಂಜರದಂತೆ ಗೋಚರಿಸಿ ಎಲೆಗಳಲ್ಲಿ ದೊಡ್ಡ ದೊಡ್ಡ ಹಾಗೂ ಸಾಲಿನಲ್ಲಿರುವ ಕಿಡಕಿಗಳನ್ನು ಅಥವಾ ರಂಧ್ರಗಳನ್ನು ಕೊರೆಯುತ್ತದೆ. ನಂತರದ ದಿನಗಳಲ್ಲಿ ಮರಿಗಳು ದೊಡ್ಡವಾದಾಗ ಸುಳಿ ಮತ್ತು ಎಲೆಗಳನ್ನು ತಿಂದು ಗಟ್ಟಿಯಾದ ಹಿಕ್ಕೆಗಳನ್ನು ಎಲೆಗಳ ಮೇಲೆ ಮತ್ತು ಸುಳಿಯಲ್ಲಿ ಕಾಣಬಹುದು.

ಸಮಗ್ರ ಕೀಟ ನಿರ್ವಹರ್ಣಾ ಕ್ರಮಗಳು: ಬೆಳೆ ಕಟಾವಾದ ನಂತರ ಮಾಗಿ ಉಳುಮೆ ಮಾಡುವುದರಿಂದ ಕೋಶಗಳನ್ನು ಮಣ್ಣಿನ ಮೇಲ್ಪದರಕ್ಕೆ ತಂದು ಹಕ್ಕಿಗಳಿಗೆ ಹಾಗೂ ಬಿಸಿಲಿನ ಪ್ರಖರತೆಗೆ ಒಡ್ಡಿ ನಿಯಂತ್ರಿಸಬಹುದು. ಶಿಫಾರಸು ಮಾಡಿದ ಅವಧಿಯಲ್ಲಿ ಬಿತ್ತನೆ ಕಾರ್ಯಕ್ರಮ ಪೂರ್ಣಗೊಳಿಸುವುದು. ಹಂತ ಹಂತವಾಗಿ ಬಿತ್ತನೆಯಾದಲ್ಲಿ  ಕೀಟಕ್ಕೆ ನಿರಂತರವಾಗಿ ಆಹಾರ ಲಭ್ಯವಾಗಲಿದ್ದು, ಹಲವಾರು ಸಂತತಿಗಳನ್ನು ಬೆಳೆಯ ಹಂತದಲ್ಲಿ ಕಾಣಬಹುದು, ಇದರಿಂದ ನಷ್ಟದ ಪ್ರಮಾಣ ಹೆಚ್ಚಾಗುವುದು. ಮೋಹಕ ಬಲೆಗಳನ್ನು ಪ್ರತಿ ಎಕರೆಗೆ 10-12ರಂತೆ ಹಾಕಿ ಚಿಟ್ಟೆಗಳನ್ನು ಆಕರ್ಷಿಸಿ ನಾಶಪಡಿಸಬೇಕು ಮತ್ತು ಪೀಡೆ ಸಮೀಕ್ಷೆ ಕೈಗೊಂಡು ಕೀಟದ ಉಪಸ್ಥಿ ಮತ್ತು ಹರಡುವಿಕೆ ಬಗ್ಗೆ ನಿಗಾ ವಹಿಸುವುದು.

ಕೀಟಬಾಧೆ ತಿವ್ರತೆ ಕಡಿಮೆ ಇದ್ದಾಗ ಅಥವಾ ಮರಿಹುಳುಗಳ ನಿರ್ವಹಣೆಗೆ ಜೈವಿಕ ಕೀಟನಾಶಕವಾದ ನೊಮೊರಿಯಾ ರಿಲೈಯೆ, ಶಿಲೀಂಧ್ರವನ್ನು 2 ಗ್ರಾಂ ಅಥವಾ
ಬ್ಯಾಸಿಲಸ್‌ ಥುರಿಂಜಿಯಸ್‌ 2 ಗ್ರಾಂ ಅಥವಾ ಶೇ 5 ರ ಬೇವಿನ ಬೀಜದ ಕಷಾಯ, ಅಜಾಡಿರೆಕ್ಟಿನ 1500 ಪಿಪಿಎಮ್‌ 5ಮಿ.ಲೀ ಪ್ರತಿ ಲೀಟರ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸಬೇಕು. ಕೀಟದ ಬಾಧೆ ಶೇ 10 ಕಿಂತ ಹೆಚ್ಚಿಗೆ ಇರುವಾಗ 0.25 ಗ್ರಾಂ ಇಮಾಮೆಕ್ಟಿನ್‌ ಬೆಂಜೋಯೇಟ್‌ 5% ಎಸ್‌.ಜಿ. ಅಥವಾ ಕೋರ್‍ಯಾಂಟ್ರಿನಿಲಿಪೊಲ್‌ 18.5 ಎಸ್‌.ಸಿ 0.2 ಮಿ.ಲೀ ಆಥವಾ ಸ್ಪಿನೋಟೊರಮ 11.7 ಎಸ್‌.ಸಿ 0.5 ಮಿ.ಲೀ ಪ್ರತಿ ಲೀಟರ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.