ಬಿಡುವು ಕೊಟ್ಟ ಮಳೆ: ಕೃಷಿ ಚಟುವಟಿಕೆಗೆ ಕಳೆ

ಚೇತರಿಸಿಕೊಳ್ಳುತ್ತಿರುವ ಬೆಳೆ ; ಅಧಿಕಾರಿಗಳಿಂದ ರೈತರಿಗೆ ಮಾಹಿತಿ ; ಬೆಳೆಗಳಿಗೆ ಮಿತವಾಗಿ ಔಷಧಿ-ಗೊಬ್ಬರ ನೀಡಿ

Team Udayavani, Jul 24, 2022, 3:13 PM IST

13

ಕುಳಗೇರಿ ಕ್ರಾಸ್‌: ಮಲೆನಾಡಿನಂತೆ ಕಳೆದ ಒಂದು ವಾರಕ್ಕೂ ಹೆಚ್ಚು ಕಾಲ ಸುರಿದ ಜಿಟಿ ಜಿಟಿ ಮಳೆಗೆ ರೈತರು ಕಂಗಾಲಾಗಿದ್ದರು. ರೈತ ಬೆಳೆಗಾರರ ನಿದ್ದೆಗೆಡಿಸಿದ್ದ ಮಳೆರಾಯ ಬಿಡುವು ಕೊಟ್ಟಿದ್ದು, ರೈತರ ಕೃಷಿ ಚಟುವಟಿಕೆ ಚುರುಕುಗೊಂಡಿದೆ.

ಬಿಸಿಲಿನ ದರ್ಶನದಿಂದ ಬೆಳೆಗಳು ಚೇತರಿಸಿಕೊಳ್ಳುತ್ತಿವೆ. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ರೈತರು ಸಂಪರ್ಕಿಸಿ ಮಾಹಿತಿ ಪಡೆಯುತ್ತಿದ್ದಾರೆ. ರಸಗೊಬ್ಬರ ಅಂಗಡಿಗಳಿಗೆ ತೆರಳಿ ಔಷಧಿ ಖರೀದಿಗೆ ಮುಂದಾಗಿದ್ದಾರೆ. ಬೆಳೆದ ಬೆಳೆಗಳು ಕೈ ತಪ್ಪಬಾರದು ಎಂಬ ಕಾರಣಕ್ಕೆ ಸಾಲಮಾಡಿ ಔಷಧಿ ಖರೀದಿಸುತ್ತಿದ್ದಾರೆ.

ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡ ಕೆಲವು ರೈತರು ಬೆಳೆನಷ್ಟ ಅನುಭವಿಸುವ ಚಿಂತೆಯಲ್ಲಿದ್ದರೆ, ಇನ್ನು ಕೆಲ ರೈತರು ಔಷಧ ಗೊಬ್ಬರ ಕೊಟ್ಟು ತಮ್ಮ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಎತ್ತುಗಳನ್ನು ಬಳಸಿ ಎಡೆ ಹೊಡೆದು ಕಸ ಕಿತ್ತು ಸ್ವಚ್ಛಗೊಳಿಸುವಲ್ಲಿ ಮಗ್ನರಾಗಿದ್ದಾರೆ.

ಸತತ ಮಳೆಗೆ ಚಿಕ್ಕ ಬೆಳೆಗಳು ಹಾಳಾಗಿವೆ. ಸದ್ಯ ವಾತಾವರಣ ಬದಲಾಗಿದ್ದು ಬಿಸಿಲಿಗೆ ಬೆಳೆಗಳು ಚೇತರಿಸಿಕೊಳ್ಳುತ್ತಿವೆ. ಬೆಳೆಗಳನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಿಸಬೇಕು ಎಂದು ರೈತರು ತಿಳಿಸಿದ್ದಾರೆ. ಸತತ ಮಳೆಗೆ ರೈತರ ಬೆಳೆಗಳು ಹಾಳಾಗುವ ಸ್ಥಿತಿಗೆ ಬಂದಿದ್ದವು. ಈ ಮಳೆಯಿಂದ ಅಲ್ಪ-ಸ್ವಲ್ಪ ರೈತರ ಬೆಳೆಗಳು ಹಾಳಾಗಿದ್ದು ಸದ್ಯ ಎರಡ್ಮೂರು ದಿನಗಳಿಂದ ಬಿಸಿಲಿನ ಕಿರಣಗಳು ಬಿದ್ದಿದ್ದು, ಬೆಳೆಗಳು ಚೇತರಿಸಿಕೊಳ್ಳುತ್ತಿವೆ. ಸಾಕಷ್ಟು ಖರ್ಚು ಮಾಡಿ ಔಷಧಿ ಬಳಸಿ ಬೆಳೆ ಉಳಿಸಿಕೊಳ್ಳುವ ಸತತ ಪ್ರಯತ್ನದಲ್ಲಿದ್ದಾರೆ ರೈತರು. ವಾರ ಬಿಸಿಲು ಇದ್ದರೆ ರೈತರ ಬೆಳೆಗಳು ಉತ್ತಮ ಸ್ಥಿತಿಗೆ ಬದಲಾಗುತ್ತವೆ ಎನ್ನುತ್ತಾರೆ ಕಾಕನೂರ ರೈತ ರವಿ ಹೆರಕಲ್‌.

ಧಾರಾಕಾರ ಮಳೆ: ಕಳೆದ ನಾಲ್ಕೈದು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ಶನಿವಾರ ಸಂಜೆ ಆರ್ಭಟ ತೋರಿಸಿದ್ದಾನೆ. ಗ್ರಾಮದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ರಭಸದಿಂದ ಸುರಿದ ಮಳೆಗೆ ಚರಂಡಿ ಮತ್ತು ರಸ್ತೆ ತುಂಬ ನೀರು ಹರಿದಿದೆ.

ಸದ್ಯ ಮಳೆ ಕಡಿಮೆಯಾಗಿದ್ದು, ರೈತರು ಅವಸರ ಪಡದೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಮಾಹಿತಿ ಪಡೆದು ಬೆಳೆಗಳ ರಕ್ಷಣೆಗೆ ಮುಂದಾಗಬೇಕು. ಅನಾವಶ್ಯಕ ಔಷಧಿ ಬಳಸದೆ ಬೆಳೆಗಳಿಗೆ ಮಿತವಾಗಿ ಔಷಧಿ ಗೊಬ್ಬರ ಕೊಡಬೇಕು. –ಬಸವರಾಜ ಬುದ್ನಿ, ಕುಳಗೇರಿ ಕೃಷಿ ಅಧಿಕಾರಿ

-ಮಹಾಂತಯ್ಯ ಹಿರೇಮಠ

 

 

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.