ಮುಂಗಾರು ಹಂಗಾಮಿಗೆ ಕೃಷಿ ಇಲಾಖೆ ಸಜ್ಜು
•ರಿಯಾಯಿತಿ ದರದಲ್ಲಿ ಬೀಜ ವಿತರಣೆಗೆ ಸಿದ್ಧತೆ•ಬಿತ್ತನೆಗೆ ಅಣಿಯಾದ ಅನ್ನದಾತರು
Team Udayavani, Jun 15, 2019, 2:10 PM IST
ಜಮಖಂಡಿ: ಮುಧೋಳ, ಬೀಳಗಿ ಮತ್ತು ಜಮಖಂಡಿ ತಾಲೂಕಿನಲ್ಲಿ ಮುಂಗಾರು ಬಿತ್ತನೆಗೆ ಚಾಲನೆ ನೀಡಿರುವ ರೈತ ಸಮೂಹ.
ಜಮಖಂಡಿ: ಸತತ ಸುರಿಯುತ್ತಿರುವ ಮಳೆಯಿಂದ ಮುಂಗಾರು ಬಿತ್ತನೆಗೆ ರೈತರು ಅಣಿಯಾಗಿದ್ದು, ಭೂಮಿ ಹದಗೊಳಿಸಿ ಬಿತ್ತನೆಗೆ ಸಜ್ಜಾಗುತ್ತಿದ್ದಾರೆ. ರೈತರ ಅಗತ್ಯಗನುಗುಣವಾಗಿ ಕೃಷಿ ಇಲಾಖೆ ಅಗತ್ಯ ಬೀಜ, ರಸಗೊಬ್ಬರ ವಿತರಣೆ ಸಿದ್ಧತೆ ನಡೆಸಿದೆ.
ಪ್ರಸಕ್ತ ಹಂಗಾಮಿನಲ್ಲಿ ಕೃಷಿ ಇಲಾಖೆ ರಿಯಾಯಿತಿ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜ ವಿತರಣೆಗೆ ಸಿದ್ಧಗೊಂಡಿದ್ದು, ಸಜ್ಜೆ, ಜೋಳ, ಮೆಕ್ಕೆಜೋಳ, ನವಣೆ, ಸಾಮೆ, ತೊಗರಿ, ಹೆಸರು, ಉದ್ದು, ಶೇಂಗಾ ಮತ್ತು ಸೂರ್ಯಕಾಂತಿ ಬೀಜಗಳನ್ನು ವಿತರಿಸಲಿದೆ. ಎಲ್ಲ ವರ್ಗದ ರೈತರಿಗೆ ಗರಿಷ್ಠ 2 ಹೆಕ್ಟೆರ್ ಅಥವಾ ಅವರ ಹಿಡುವಳಿ ವಿಸ್ತೀರ್ಣಕ್ಕೆ ಸೀಮಿತಗೊಳಿಸಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಸಾಮಾನ್ಯ ರೈತರಿಗೆ ಶೇ. 50ರಷ್ಟು ಸಹಾಯಧನದಲ್ಲಿ ವಿತರಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ರೈತರಿಗೆ ಶೇ. 75ರ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ ನಡೆಯುತ್ತಿದೆ.
ಜಮಖಂಡಿ, ತೇರದಾಳ ಮತ್ತು ಸಾವಳಗಿ ರೈತ ಸಂಪರ್ಕ ಕೇಂದ್ರಗಳಲ್ಲದೆ, ಹೆಚ್ಚುವರಿ ಬೀಜ ಮಾರಾಟ ಕೇಂದ್ರಗಳಾದ ತೇರದಾಳ ರೈತ ಸಂಪರ್ಕ ಕೇಂದ್ರದ ಹೆಚ್ಚುವರಿ ಶಾಖೆಗಳಾದ ಜಮಖಂಡಿ, ಚಿಕ್ಕಲಕಿಕ್ರಾಸ್, ಗೋಠೆ ಕೇಂದ್ರಗಳಲ್ಲಿ ಬೀಜ ವಿತರಣೆ ವ್ಯವಸ್ಥೆ ಮಾಡಲಾಗಿದೆ. ಮುಧೋಳ ತಾಲೂಕಿನಲ್ಲಿ ಹೆಚ್ಚುವರಿಯಾಗಿ ಬೆಳಗಲಿ, ಮಹಾಲಿಂಗಪುರ, ಲೋಕಾಪುರ ರೈತ ಸಂಪರ್ಕ ಕೇಂದ್ರದಲ್ಲಿ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಬೀಳಗಿ ತಾಲೂಕಿನ ರೈತ ಸಂಪರ್ಕ ಕೇಂದ್ರ, ಅನಗವಾಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್