ಆಲಮಟ್ಟಿ: ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಆರಂಭ

ಜುಲೈ 11ರ ರಾತ್ರಿಯಿಂದ ಒಳ ಹರಿವು ಆರಂಭಗೊಂಡಂತಾಗಿದೆ.

Team Udayavani, Jul 13, 2023, 6:16 PM IST

ಆಲಮಟ್ಟಿ: ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಆರಂಭ

ಆಲಮಟ್ಟಿ: ಕೈ ಕೊಟ್ಟ ಮುಂಗಾರು ಹಂಗಾಮಿನ ಮಳೆಗಳಿಂದ ಜನ-ಜಾನುವಾರುಗಳ ಕುಡಿಯುವ  ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗುವ ವೇಳೆ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ರೈತರ ಕನಸು ಚಿಗುರೊಡೆಯುವಂತಾಗಿದೆ.

ಪ್ರತಿ ವರ್ಷವೂ ರೋಹಿಣಿ, ಮೃಗಶಿರಾ ಮಳೆಗಳು ಸುರಿದು ಭೂಮಿಯನ್ನು ಹದವಾಗಿರಿಸಿಕೊಂಡಿದ್ದರೈತರು ಬಿತ್ತನೆ ಮಾಡುತ್ತಿದ್ದರು. ಆದರೆ ಈ ಬಾರಿ ಮುಂಗಾರು ಹಂಗಾಮಿನ ಮಳೆಗಳು ಸಮರ್ಪಕವಾಗಿ ಸುರಿಯದಿರುವುದರಿಂದ ಬಿತ್ತನೆ ಮಾಡಲು ರೈತರು ಭೂಮಿಯನ್ನು ಹದವಾಗಿರಿಸಿಕೊಂಡಿದ್ದರೂ ಬಿತ್ತನೆ ಮಾಡದೇ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.

ಮುಂಗಾರು ಬಿತ್ತನೆಗಾಗಿ ಹುರುಳಿ, ಅಲಸಂದಿ, ಮಡಿಕೆಕಾಳು, ಹೆಸರು, ಉದ್ದು, ಸಜ್ಜೆ, ನವಣೆ, ಮೆಕ್ಕೆಜೋಳ, ಹೈಬ್ರಿಡ್‌ ಜೋಳ, ಉದ್ದು, ಹತ್ತಿ, ಉಳ್ಳಾಗಡ್ಡಿ ಹೀಗೆ ಹಲವಾರು ಬೆಳೆಗಳನ್ನು ಬಿತ್ತನೆ ಮಾಡಲು ರೈತರು ಬೀಜ ಗೊಬ್ಬರ ಕೊಂಡು ಬಿತ್ತನೆ ತಯಾರಿಯಲ್ಲಿದ್ದರು. ಸಮರ್ಪಕವಾಗಿ ಮಳೆ ಸುರಿಯದಿರುವುದರಿಂದ ಮುಂಗಾರು ಬೆಳೆಗಳನ್ನು ಬಿತ್ತಲಾಗದೇ ರೈತರು ಪ್ರತಿ ದಿನ ಆಕಾಶದತ್ತ ಮುಖ ಮಾಡಿ ಮಳೆರಾಯ ಧರೆಗಿಳಿಯುವನೇ ಎಂದು ಕಾದು ನೋಡುವಂತಾಗಿತ್ತು.

ಇನ್ನು ಕೃಷ್ಣೆಯ ಉಗಮ ಸ್ಥಾನ ಮತ್ತು ಕೃಷ್ಣೆಯ ಉಪ ನದಿಗಳ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಮಂಗಳವಾರ ರಾತ್ರಿಯಿಂದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ನದಿ ತೀರದ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಯ ಫಲಾನುಭವಿ ರೈತರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

ಕಳೆದ ಬಾರಿ ವಾಡಿಕೆಗಿಂತಲೂ ಮುಂಚಿತವಾಗಿ ಮೇ 21ರಂದು ಜಲಾಶಯಕ್ಕೆ ಒಳ ಹರಿವು ಆರಂಭವಾಗಿತ್ತು. ಇದರಿಂದ ಕೃಷ್ಣೆಯ ತೀರದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇದ್ದರೂ ರೈತರು ಮುಂಗಾರು ಹಾಗೂ ಹಿಂಗಾರು ಬಿತ್ತನೆ ಮಾಡಿದ್ದರು. ಈ ಬಾರಿ ಸುಮಾರು ಎರಡು ತಿಂಗಳ ನಂತರ ಜುಲೈ 11ರ ರಾತ್ರಿಯಿಂದ ಒಳ ಹರಿವು ಆರಂಭಗೊಂಡಂತಾಗಿದೆ.

ಮುಂಗಾರು ಹಂಗಾಮಿನ ಮಳೆಯಾಗದಿರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಈ ಸಂದರ್ಭದಲ್ಲಿ ಸರ್ಕಾರ
ರೈತರ ನೆರವಿಗೆ ಬಂದು ಆತ್ಮಸ್ಥೈರ್ಯ ತುಂಬಬೇಕು ಎನ್ನುತ್ತಾರೆ ತಾಪಂ ಮಾಜಿ ಸದಸ್ಯ ಮಲ್ಲೇಶ ರಾಠೊಡ.

ಗರಿಷ್ಠ 519.6 ಮೀ. ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಲ್ಲಿ ಬುಧವಾರದ ಬೆಳಗಿನ ಮಾಹಿತಿಯಂತೆ 507.76 ಮೀ. ಎತ್ತರದಲ್ಲಿ 20.547 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಇದರಲ್ಲಿ 17.620 ಟಿಎಂಸಿ ಅಡಿ ಜಲಚರಗಳಿಗೆ ಮೀಸಲಿದ್ದು ಇನ್ನುಳಿದ 2.927 ಟಿಎಂಸಿ ಅಡಿ ನೀರು ಬಳಸಿಕೊಳ್ಳಬಹುದಾಗಿದೆ.

ಜಲಾಶಯಕ್ಕೆ ಒಳ ಹರಿವು 19,172 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಿಂದ ವಿವಿಧ ಕುಡಿಯುವ ನೀರಿನ ಘಟಕಗಳಿಗೆ ಮತ್ತು ಭಾಷ್ಪೀಭವನ ಸೇರಿ ಒಟ್ಟು 561 ಕ್ಯೂಸೆಕ್‌ ನೀರು ಹೊರ ಹರಿವಿದೆ. ಕಳೆದ 22 ವರ್ಷಗಳಲ್ಲಿ 2021ನೇ ಸಾಲಿನಲ್ಲಿ ಮೇ 23ಕ್ಕೆ ಒಳ ಹರಿವು ಆರಂಭವಾಗಿ ಅಕ್ಟೋಬರ್‌ 22ರಂದು ಒಳ ಹರಿವು ಸ್ಥಗಿತಗೊಂಡಿತ್ತು. ನಂತರ ಮತ್ತೆ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಮಳೆ ಆರಂಭವಾಗಿದ್ದರ ಪರಿಣಾಮವಾಗಿ ಮತ್ತೆ ನವೆಂಬರ್‌ 20ರಿಂದ ಒಳ ಹರಿವು ಆರಂಭಗೊಂಡು ಡಿಸೆಂಬರ್‌ 29ರಂದು ಸ್ಥಗಿತಗೊಂಡಿತ್ತು.

ಮಳಿ ಆಗಲಾರ್ದಕ ಬಿತ್ತುದ ಬಿಟ್ಟ ಬೀಜ ಗೊಬ್ಬರ ಹಂಗ ಮನ್ಯಾಗ ಇಟ್ಕೊಂಡ ಕುಂತೀವ್ರಿ. ಮ್ಯಾಲಕ ಅರ ಮಳಿ ಆಗಿದ್ರ ಆಲಮಟ್ಟಿ ಡ್ಯಾಮಿಗಿ ನೀರ ಬಂದ್ರ ಕೆನಾಲಕ ನೀರ ಬಿಡತಿದ್ರ. ಆ ನೀರರ ಹೊಲಕ ಉಣ್ಣಸಿತ್ತೀದ್ದೀವ್ರಿ, ಈ ಸಲಾ ಅದೂ ಇಲ್ಲ ನಮ್ಮ ಗತಿ ಹೆಂಗ ಅನ್ನುವಂಗ ಆಗೇತ್ರಿ.
ಖಾಜೇಸಾಬ ಗಂಜ್ಯಾಳ, ಬೇನಾಳ

ಪ್ರತಿ ಸಲ ಮಳೆಯಾಗುತ್ತಿದ್ದರಿಂದ ಅಕಡಿ ಕಾಳುಗಳನ್ನು ಚೆಲೋ ಬೆಳೀತ್ತಿದ್ದೀವ್ರಿ. ಆದ್ರ ಈ ಸಲಾ ಮಳಿ ಆಗಲಿಲ್ಲ, ಒಣ ನೆಲಾ ಹಂಗ ಇಟ್ಟೇವ್ರಿ.
ಮಲ್ಲಿಕಾರ್ಜುನ ಗುಳೇದ, ಕಾರಜೋಳ

ಶಂಕರ ಜಲ್ಲಿ

ಟಾಪ್ ನ್ಯೂಸ್

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.