ಕಾಲುವೆ ಕೊನೆಯಂಚಿನ ಜಮೀನಿಗೆ ನೀರು ಹರಿಯಲಿ


Team Udayavani, Jun 28, 2021, 4:56 PM IST

27 bnt 2

ಆಲಮಟ್ಟಿ: ಮಳೆಗಾಲದಲ್ಲಿ ಕ್ಲೋಸರ್‌ ಕಾಮಗಾರಿಗಳು ಗುಣಮಟ್ಟದ್ದಾಗಲು ಸಾಧ್ಯವಿಲ್ಲ. ಆದ್ದರಿಂದ ಅತಿ ಅವಶ್ಯವಿರುವಲ್ಲಿ ಇಲಾಖೆ ವತಿಯಿಂದ ಕಾಮಗಾರಿ ನಿರ್ವಹಿಸಿ ಕಾಲುವೆ ಕೊನೆಯಂಚಿನ ರೈತರ ಜಮೀನುಗಳವರೆಗೆ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.

ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿ ಕ್ಲೋಸರ್‌ ಹಾಗೂ ಸ್ಪೇಷಲ್‌ ರಿಪೇರಿ ಕಾಮಗಾರಿಗೆ ಮಳೆಗಾಲದಲ್ಲಿ ಟೆಂಡರ್‌ ಕರೆಯಲಾಗಿದೆ. ರೋಹಿಣಿ ಹಾಗೂ ಮೃಗಶಿರಾ ಮಳೆ ಅಲ್ಪ ಪ್ರಮಾಣದಲ್ಲಿ ಆಗಿದ್ದರಿಂದ ಕಾಲುವೆಗಳಲ್ಲಿ ನೀರು ನಿಂತಿವೆ. ಇನ್ನು ಕಾಮಗಾರಿ ನಿರ್ವಹಿಸಲು ಅಗತ್ಯವಾಗಿ ಬೇಕಾಗಿರುವ ಕಾರ್ಮಿಕರು ಕೃಷಿ ಕೆಲಸದಲ್ಲಿ ತೊಡಗಿದ್ದಾರೆ. ಯಂತ್ರಗಳನ್ನು ಬಳಸಿಕೊಂಡು ಕಾಲುವೆಯಲ್ಲಿನ ಹೂಳು ತೆರವುಗೊಳಿಸುವುದಾದರೆ ಈಗಾಗಲೇ ನೀರು ನಿಂತು ಕಾಲುವೆಯ ಸಿಮೆಂಟ್‌ ಕಾಂಕ್ರೀಟ್‌ ನೀರಿನಿಂದ ಹಸಿಯಾಗಿವೆ. ಹೀಗೆ ಹಲವಾರು ಸಮಸ್ಯೆಗಳಿರುವುದರಿಂದ ಕಾಮಗಾರಿಗಳು ಗುಣಮಟ್ಟದ್ದಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಕೆಲ ಕಾಲುವೆಗಳಿಗೆ ತೆರಳಿ ಪರಿಶೀಲಿಸಿದಾಗ ಕಾಲುವೆಯಲ್ಲಿನ ಹೂಳು ಹಾಗೆಯೇ ಇದೆ. ಕೆಲ ಕಡೆಗಳಲ್ಲಿ ನೀರಿನಲ್ಲಿ ಯಂತ್ರಗಳಿಂದ ಹೂಳು ತೆಗೆಯಲು ಪ್ರಯತ್ನಿಸಿದ್ದಾರೆ. ಇದರಿಂದ ಕಾಲುವೆಯ ನೀರಿನಲ್ಲಿ ಯಂತ್ರಗಳು ಸಿಲುಕಿಕೊಂಡು ಕಾಂಕ್ರೀಟ್‌ ಕಿತ್ತಿವೆ. ಕಾಲುವೆ ಪಕ್ಕದಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸುತ್ತಿರುವುದು ಕಂಡು ಬಂದಿದೆ.

ಅಧಿ ಕಾರಿಗಳು ಅವಶ್ಯವಿದ್ದಲ್ಲಿ ಕಾಮಗಾರಿ ಪಡೆದು ಇನ್ನುಳಿದವುಗಳನ್ನು ರದ್ದುಗೊಳಿಸಿ ಕೊರೊನಾ ನಿರ್ಮೂಲನೆಗಾಗಿ ಖರ್ಚು ಮಾಡಬಹುದಾಗಿತ್ತು. ಆದರೆ ಸರ್ಕಾರದ ಹಣ ಒಟ್ಟಾರೆ ಖರ್ಚು ಮಾಡಲು ಅಧಿ ಕಾರಿಗಳು ಹಠಮಾರಿ ಧೋರಣೆ ಅನುಸರಿಸುತ್ತಿರುವುದೇಕೆ? ಇದರಿಂದ ಕೇವಲ ಹಣ ಖರ್ಚು ಮಾಡಲು ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆಯೇ ಹೇಗೆ? ಸರ್ಕಾರದ ಹಣ ಸದುಪಯೋಗಕ್ಕಿಂತಲೂ ದುರುಪಯೋಗವಾಗುವ ಸಂಭವವೇ ಹೆಚ್ಚು. ಆದ್ದರಿಂದ ಸರ್ಕಾರದ ತನಿಖಾ ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.