3ನೇ ಹಂತದ ಮುಳುಗಡೆ ಪ್ರಕ್ರಿಯೆ

ಶುರು 10 ಕೋಟಿ ಮೊತ್ತದ ಮೊದಲ ಆರಂಭಿಕ ಕಾಮಗಾರಿಗೆ ಅನುಮೋದನೆ | 5801 ಎಕರೆ ಭೂ ಸ್ವಾಧೀನ ­

Team Udayavani, Apr 20, 2021, 7:40 PM IST

hdfhhr

ವರದಿ : ಶ್ರೀಶೈಲ ಕೆ. ಬಿರಾದಾರ

ಬಾಗಲಕೋಟೆ: ಆಲಮಟ್ಟಿ ಜಲಾಶಯದ ಹಿನ್ನೀರ ವ್ಯಾಪ್ತಿಯಲ್ಲಿ ಮುಳುಗಡೆಯಾಗಲಿರುವ ಬಾಗಲಕೋಟೆ ನಗರದ ಸಂತ್ರಸ್ತರಿಗೆ ಪುನರ್‌ವಸತಿ, ಪುನರ್‌ ನಿರ್ಮಾಣ ಕಲ್ಪಿಸುವ ಬಹು ಮಹತ್ವದ ಕಾರ್ಯಕ್ಕೆ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. 3ನೇ ಯೂನಿಟ್‌ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಿದೆ.

ಹೌದು, ಆಲಮಟ್ಟಿ ಜಲಾಶಯದ ಹಿನ್ನೀರ ವ್ಯಾಪ್ತಿಯ 523 ಮೀಟರ್‌ದಿಂದ 525 ಮೀಟರ್‌ ವ್ಯಾಪ್ತಿಯಲ್ಲಿ ಬರುವ ಸಂತ್ರಸ್ತರು, ಬಾಡಿಗೆದಾರರಿಗೆ ಪುನರ್‌ ವಸತಿ ಕಲ್ಪಿಸಲು ನಗರದ ದಡ್ಡೇನವರ ಕ್ರಾಸ್‌ನಿಂದ ಮುಚಖಂಡಿ ಹಾಗೂ ಶಿಗಿಕೇರಿ ವ್ಯಾಪ್ತಿಯ 1640 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಭೂಮಿಯಲ್ಲಿ ಒಟ್ಟು 5 ಬ್ಲಾಕ್‌ ಮಾದರಿಯ ಸೆಕ್ಟರ್‌ಗಳನ್ನು ನಿರ್ಮಿಸಿ, ನಗರದ 3ನೇ ಹಂತದ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.

5801 ಎಕರೆ ಭೂ ಸ್ವಾಧೀನ:

ಆಲಮಟ್ಟಿ ಜಲಾಶಯದ ಹಿನ್ನೀರ ವ್ಯಾಪ್ತಿಯಲ್ಲಿ ಮುಳುಗಡೆಯಾದ ಬಾಗಲಕೋಟೆಯ ಸಂತ್ರಸ್ತರಿಗೆ ಪುನರ್‌ವಸತಿ ಕಲ್ಪಿಸಲು 1987-89ರಲ್ಲಿ 4544 ಎಕರೆ ಸ್ವಾಧೀನ ಪಡಿಸಿಕೊಂಡರೆ, 2013-14ರಲ್ಲಿ 1257 ಎಕರೆ ಬಿಟಿಡಿಎ ವಶಪಡಿಸಿಕೊಂಡಿದೆ. 3ನೇ ಹಂತದ 1640 ಎಕರೆ ಭೂಮಿ ಅಗತ್ಯವಿದ್ದು, ಅದರಲ್ಲಿ 282 ಎಕರೆ ಭೂಮಿಯ ವ್ಯಾಜ್ಯ ನ್ಯಾಯಾಲಯದಲ್ಲಿದ್ದು, ಅದನ್ನೂ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ನವನಗರ ಯೂನಿಟ್‌ -1ರ ನಿರ್ಮಾಣಕ್ಕೆ 1521 ಎಕರೆ, 2ನೇ ಯೂನಿಟ್‌ ನಿರ್ಮಾಣಕ್ಕೆ 1333 ಎಕರೆ ಬಳಸಿಕೊಂಡಿದ್ದು, ಯೂನಿಟ್‌ -3ರ ನಿರ್ಮಾಣಕ್ಕಾಗಿ 1257 ಎಕರೆ ಬಳಕೆ ಮಾಡಲು ಕ್ರಿಯಾಯೋಜನೆ ರೂಪಿಸಲಾಗಿದೆ. ಇನ್ನುಳಿದ ನೀರು ಸರಬರಾಜು ಯೋಜನೆಗಳಿಗೆ 69 ಎಕರೆ, ತೋಟಗಾರಿಕೆ ವಿವಿಗೆ 300 ಎಕರೆ, ಕೆಐಎಡಿಬಿ ಯೂನಿಟ್‌-1ರ ನಿರ್ಮಾಣಕ್ಕೆ 257 ಎಕರೆ, ಸರ್ಕಾರಿ, ಅರೆಸರಕಾರಿ, ಖಾಸಗಿ ಸಂಸ್ಥೆಗಳಿಗೆ 610.8 ಎಕರೆ ಹಂಚಿಕೆ ಮಾಡಿದ್ದು, ಮುರಮ್‌ ಕ್ವಾರಿ 22 ಎಕರೆ, ಲಿಂಕ್‌ ರಸ್ತೆಗಳಿಗಾಗಿ 117 ಎಕರೆ ಬಳಸಿಕೊಳ್ಳಲಾಗುತ್ತಿದೆ.

4584 ಸಂತ್ರಸ್ತರು: ಯೂನಿಟ್‌-3ರ ವ್ಯಾಪ್ತಿಗೆ (523ರಿಂದ 525 ಮೀಟರ್‌ ವ್ಯಾಪ್ತಿಯಲ್ಲಿ) ಬರುವ ಸಂತ್ರಸ್ತರ ಕುರಿತು ಸಾಮಾಜಿಕ, ಆರ್ಥಿಕ ಸಮೀಕ್ಷೆ ಕೈಗೊಂಡಿದ್ದು, ಇದರ ಅನ್ವಯ 2421 ಜನ ಮೂಲ ಸಂತ್ರಸ್ತರು, 1163 ಬಾಡಿಗೆದಾರರು ಸಂತ್ರಸ್ತರಾಗಲಿದ್ದಾರೆ. ಈ ಸಂತ್ರಸ್ತರಿಗೆ ಯೂನಿಟ್‌-3ರಲ್ಲಿ ಪುನರ್‌ ವಸತಿ ಕಲ್ಪಿಸಲಾಗುತ್ತಿದೆ. ಯೂನಿಟ್‌-3ರನ್ನು ಸುಮಾರು 300ರಿಂದ 500 ಎಕರೆಗೆ 1 ಬ್ಲಾಕ್‌ದಂತೆ ಆಧುನಿಕ ಮಾದರಿಯ 5 ಬ್ಲಾಕ್‌ ರಚಿಸಲು ಉದ್ದೇಶಿಸಲಾಗಿದೆ. ಇಲ್ಲಿ ಎ ಮಾದರಿ ನಿವೇಶನಗಳನ್ನು 8,238, ಬಿ ಮಾದರಿ-3,866, ಸಿ ಮಾದರಿ-2236, ಡಿ ಮಾದರಿ-2262, ಇ ಮಾದರಿ 1337 ಸೇರಿ ಒಟ್ಟು 17,939 ನಿವೇಶನ ರಚಿಸಲಾಗುತ್ತಿದೆ. ಯೂನಿಟ್‌-3ರ ನಕ್ಷೆ ಅನುಮೋದನೆ ದೊರೆತಿದ್ದು, ಬಾಗಲಕೋಟೆ ನಗರದ ಮಹಾ ಯೋಜನೆಗೆ ಸರ್ಕಾರದಿಂದ ಅನುಮೋದನೆ ಕೂಡ ದೊರೆತಿದೆ.

ವಿವಿಧ ಕಾಮಗಾರಿಗೆ ಅನುಮೋದನೆ: ಯುನಿಟ್‌-3ರಲ್ಲಿ ರಸ್ತೆ, ರಸ್ತೆ ಬದಿಯಲ್ಲಿನ ಚರಂಡಿ ಹಾಗೂ ಇತರೆ ಕಾಮಗಾರಿ ಸೇರಿದಂತೆ ಒಟ್ಟು 10.50 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಇದರ ಜತೆ 13 ಕೋಟಿ ರೂ. ಗಳ ಬೇರೆ ಬೇರೆ ಕಾಮಗಾರಿಗಳಿಗೆ ಬಿಟಿಡಿಎ ಬೋರ್ಡ್‌ ಸಭೆಯಲ್ಲಿ ಅನುಮೋದನೆ ನೀಡಿದೆ.

ಟಾಪ್ ನ್ಯೂಸ್

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.