ಮದ್ಯ ನಿಷೇಧ; ನಾಳೆಯಿಂದ ಹೋರಾಟ


Team Udayavani, Jan 26, 2020, 12:31 PM IST

bk-tdy-1

ಬಾಗಲಕೋಟೆ: ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಜಿಲ್ಲೆಯ ಕೂಡಲಸಂಗಮದಲ್ಲಿ ಜ. 27ರಿಂದ ವಿವಿಧ ಹಂತದ ಹೋರಾಟ ನಡೆಸಲಾಗುವುದು ಎಂದು ಮದ್ಯ ನಿಷೇಧ ಆಂದೋಲನ ಕರ್ನಾಟಕದ ಕಾರ್ಯಕರ್ತೆ ಮುತ್ತಮ್ಮ ಬಂಗಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಸೇವನೆಯಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ. ಇದಕ್ಕಾಗಿ ಕಳೆದ ಐದು ವರ್ಷಗಳಿಂದ ಹೋರಾಟ ನಿರಂತರವಾಗಿ ನಡೆದಿದ್ದು, ಕಳೆದ ವರ್ಷ ಚಿತ್ರದುರ್ಗದಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಕೂಡ ಮಾಡಿದ್ದೇವು. ಆಗ ರೇಣುಕಮ್ಮ ಎಂಬ ಮಹಿಳೆ ಮೃತಪಟ್ಟಿದ್ದರು. ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಆಗ ಡಿಸಿಎಂ ಅಶ್ವತ್ಥನಾರಾಯಣ ನೀಡಿದ್ದ ಭರವಸೆ ಈವರೆಗೂ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜ. 27ರಂದು ಕೂಡಲಸಂಗಮದಲ್ಲಿ 10 ಜನ ಮಹಿಳೆಯರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ. ಜ. 28 ಮತ್ತು 29ರಂದು ರಾಜ್ಯದ 30 ಜಿಲ್ಲೆಗಳ ಮಹಿಳೆಯರು ಕೂಡಲಸಂಗಮಕ್ಕೆ ಆಗಮಿಸಲಿದ್ದು, ಅಂದು ಜಲ ಧರಣಿ ನಡೆಸುವರು. ಇಡೀ ದಿನ ನೀರಿನಲ್ಲಿ ನಿಂತು, ಮದ್ಯ ನಿಷೇಧಕ್ಕಾಗಿಒತ್ತಾಯಿಸುತ್ತೇವೆ. ಜ. 30ರಂದು ನಾಡಿನ ವಿವಿಧ ಮಠಾಧೀಶರು, 54 ಪ್ರಗತಿಪರ ಸಂಘಟನೆಗಳಕಾರ್ಯಕರ್ತರು, ಸಾವಿರಾರು ಮಹಿಳೆಯರು ಆಗಮಿಸಲಿದ್ದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿ ಸಮಾವೇಶ ನಡೆಸಲಾಗುವುದು. ಜ.30ರೊಳಗಾಗಿ ಸರ್ಕಾರ ಸ್ಪಂದಿಸದಿದ್ದರೆ, ಮುಂದಿನ ಹೋರಾಟದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

10 ಜನ ಮಹಿಳೆಯರು ಜ.27ರಿಂದ 30ರವರೆಗೆ ನಿರಂತರ ಉಪವಾಸ ಕೈಗೊಳ್ಳಲಿದ್ದಾರೆ. ಉಪವಾಸ, ಜಲಧರಣಿ, ಸಮಾವೇಶದ ಮೂಲಕ ಮದ್ಯ ನಿಷೇಧಕ್ಕೆ ಒತ್ತಾಯಿಸುತ್ತೇವೆ. ಸರ್ಕಾರ ಸ್ಪಂದಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆಯ ರಾಜ್ಯ ಸಂಚಾಲಕ ಅಭಯ ಮಾತನಾಡಿ, ಮದ್ಯ ನಿಷೇಧಕ್ಕಾಗಿ ಸರ್ಕಾರದ ಎದುರು ನಾಲ್ಕು ಪ್ರಮುಖ ಬೇಡಿಕೆ ಇಡುತ್ತೇವೆ. ಸಂವಿಧಾನದ ಕಲಂ 47ರ ಪ್ರಕಾರ ಮದ್ಯ ಸೇವನೆ ಕಡಿಮೆ ಮಾಡಲು ಸರ್ಕಾರ ನಿಗದಿತ ನೀತಿ ರೂಪಿಸಬೇಕು. ಕಲಂ 73ರ ಪ್ರಕಾರ, ಆಯಾ ಗ್ರಾಮ, ನಗರ ಪಟ್ಟಣಗಳಲ್ಲಿ ಮದ್ಯದ ಅಂಗಡಿ ಬೇಡ ಎಂದು ಗ್ರಾಮಸಭೆಗಳಲ್ಲಿ ನಿರ್ಣಯ ಕೈಗೊಂಡರೆ, ಅಲ್ಲಿ ಮದ್ಯದ ಅಂಗಡಿಗೆ ಪರವಾನಗಿ ಕೊಡಬಾರದು. ಕುಡಿತದಿಂದ ಮೃತಪಟ್ಟವರ ಕುಟುಂಬದ ಜವಾಬ್ದಾರಿ ಸರ್ಕಾರ ಪಡೆಯಬೇಕು. ಎಲ್ಲೆಡೆ ಮದ್ಯ ಸೇವನೆ ಕಡಿಮೆ ಮಾಡಲು ಮಹಿಳೆಯರು ಒಳಗೊಂಡ ಸಮಿತಿ ರಚಿಸಬೇಕು. ಈ ಪ್ರಮುಖ ಬೇಡಿಕೆಗಳೊಂದಿಗೆ ನಮ್ಮ ಹೋರಾಟ ನಡೆಯಲಿದೆ. 30 ಜಿಲ್ಲೆಗಳ ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಲಿದ್ದು, 54 ವಿವಿಧ ಸಂಘಟನೆಗಳ ಪ್ರಮುಖರು ಬೆಂಬಲಿಸಿ, ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಯಮನಮ್ಮ ಪೂಜಾರಿ, ಮಹಾದೇವಿ ಹಡಪದ, ಗಂಗಮ್ಮ ಕಾರಿಕಂಠಿ, ಶಾಂತಾ ಗೌಡರ, ಶಂಕರ ಹೂಗಾರ, ಮಹಾಂತೇಶ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.