ತಡೆಗೋಡೆ ಹೆಸರಲ್ಲಿ ಹಣ ದುರ್ಬಳಕೆ-ಆರೋಪ


Team Udayavani, Sep 13, 2019, 10:53 AM IST

bk-tdy-2

ಬೀಳಗಿ: ಸೊನ್ನ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಸೇವಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಹಣ ದುರ್ಬಳಕೆ ತನಿಖೆ ನಡೆಸುವಂತೆ ಆಗ್ರಹಿಸಿದರು

ಬೀಳಗಿ: ತಾಲೂಕು ಪಂಚಾಯತ ಅನಿರ್ಬಂದಿತ ಅನುದಾನದಡಿಯಲ್ಲಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಡೆಗೋಡೆ ನಿರ್ಮಿಸದೆ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ಸಂಬಂಧಿಸಿದ ಮೇಲಧಿಕಾರಿಗಳು ತನಿಖೆ ಕೈಗೊಳ್ಳುವ ಮೂಲಕ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಸೊನ್ನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಸೊನ್ನ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಸೇವಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಮಾತನಾಡಿ, 2017-18ನೇ ಸಾಲಿನ ತಾಪಂ ಅನಿರ್ಬಂದಿತ ಎರಡು ಲಕ್ಷ ಅನುದಾನದಲ್ಲಿ ಮಲ್ಲಿಕಾರ್ಜುನ ದೇವಸ್ಥಾನದ ಹತ್ತಿರ ತಡೆಗೋಡೆ ನಿರ್ಮಾಣ ಮಾಡಲಾಗಿದೆ ಎನ್ನುವ ಕುರಿತು ಇಲಾಖೆ ದಾಖಲಾತಿಗಳು ಹೇಳುತ್ತವೆ. ಆದರೆ, ಸದರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ತಡೆಗೋಡೆ ನಿರ್ಮಿಸಿಲ್ಲ. ಹಾಗಾದರೆ 2 ಲಕ್ಷ ಅನುದಾನ ಯಾರಿಗೆ ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಂಧಿಸಿದವರನ್ನು ಕೇಳಿದರೆ, ಈ ಅನುದಾನವನ್ನು ದೇವಸ್ಥಾನದ ಹತ್ತಿರದ ಪಿಕೆಪಿಎಸ್‌ ತಡೆಗೋಡೆ ನಿರ್ಮಾಣಕ್ಕೆ ಬಳಕೆ ಮಾಡಲಾಗಿದೆ ಎಂದು ಹೇಳುವ ಮೂಲಕ ಜಾರಿಕೊಳ್ಳಲು ಯತ್ನಿಸುತ್ತಿದ್ದಾರೆ. ಪಿಕೆಪಿಎಸ್‌ಗೆ ಅನುದಾನ ಹೇಗೆ ಬಳಕೆ ಮಾಡಲು ಸಾಧ್ಯ. ಒಂದು ವರ್ಷದ ಹಿಂದೆ ಪಿಕೆಪಿಎಸ್‌ ನೂತನ ಕಟ್ಟಡ ನಿರ್ಮಾಣದ ವೇಳೆ ಅದರ ಕಾಪೌಂಡ್‌ ಕೂಡ ನಿರ್ಮಿಸಲಾಗಿದೆ. ಸಂಬಂಧಿಸಿದ ಅಕಾರಿಗಳು, ಗುತ್ತಿಗೆದಾರರು ಶಾಮೀಲಾಗಿ ಪಿಕೆಪಿಎಸ್‌ಗೆ ನಿರ್ಮಿಸಿದ ತಡೆಗೋಡೆ ಪೋಟೋಗಳನ್ನೇ ಬಳಸಿಕೊಂಡು ಬಿಲ್ ತೆಗೆಯಲಾಗಿದೆ ಎಂದು ಆರೋಪಿಸಿದರು.

ದೇವಸ್ಥಾನದ ಕಮೀಟಿಯವರಿಗೆ ದೇವಸ್ಥಾನದ ತಡೆಗೋಡೆ ನಿರ್ಮಿಸುವ ಕುರಿತು ಯಾವುದೇ ಮಾಹಿತಿಯಿಲ್ಲ. ಹಾಗಿದ್ದಲ್ಲಿ ದೇವಸ್ಥಾನದ ಹೆಸರಲ್ಲಿ ಅನುದಾನ ಹೇಗೆ ಬಳಕೆ ಮಾಡಲಾಯಿತು ಎಂದು ಪ್ರಶ್ನಿಸಿದ ಗ್ರಾಮಸ್ಥರು, ಹಿರಿಯ ಅಧಿಕಾರಿಗಳು ತನಿಖೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ತಾಪಂ ಇಒ ಅವರನ್ನು ಪ್ರಶ್ನಿಸಿದರೆ ಸ್ಪಷ್ಟ ಮಾಹಿತಿ ನೀಡದೆ ನುಣುಚಿಕೊಂಡರು. ಗ್ರಾಮದ ಎಸ್‌.ಎಸ್‌.ಸಾರವಾಡ, ಮಳಿಯಪ್ಪ ಬಳೂಲದ, ಎಸ್‌.ಸಿ.ಮಲಕಗೊಂಡ, ಆರ್‌.ಎಸ್‌.ಸಾರವಾಡ, ಪರಪ್ಪ ಚಿಮ್ಮಡದ, ರಾಮಪ್ಪ ಸಾರವಾಡ, ಬಾಬು ಚಿಮ್ಮಡ, ಬಿ.ಸಿ.ಚಿಗರನ್ನವರ ಇತರರು ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.