ಕೈಗೆ ಮೈತ್ರಿ ಬಲ; ಕಮಲಕ್ಕೆ ಮೋದಿ ನೆಲೆ

•ಪತಿಯ ನಡೆ-ನುಡಿ ಮೇಲಿದೆ ವೀಣಾ ಭವಿಷ್ಯ •ಹುನಗುಂದದಲ್ಲಿ ಈ ಬಾರಿ ಭಾರಿ ಪ್ರತಿಷ್ಠೆ

Team Udayavani, Apr 28, 2019, 12:29 PM IST

11..

ಬಾಗಲಕೋಟೆ: ಜಿಲ್ಲೆಯ ಅಷ್ಟೂ ವಿಧಾನಸಭೆ ಕ್ಷೇತ್ರಗಳ ರಾಜಕೀಯಕ್ಕೂ, ಹುನಗುಂದ ಕ್ಷೇತ್ರದಲ್ಲಿನ ವಾತಾವರಣಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಇಲ್ಲಿ ಜಾತಿ, ಪಕ್ಷ ರಾಜಕಾರಣದ ಜತೆಗೆ ಪ್ರತಿಷ್ಠೆ-ವೈಷಮ್ಯದ ರಾಜಕಾರಣವೂ ಪ್ರತಿ ಬಾರಿ ಪ್ರತಿಧ್ವನಿಸುತ್ತದೆ.

ಹೌದು, ಬಾಗಲಕೋಟೆ ಲೋಕಸಭೆ ಕ್ಷೇತ್ರಕ್ಕೆ ಬರೋಬ್ಬರಿ 35 ವರ್ಷಗಳ ಬಳಿಕ ಈ ತಾಲೂಕಿನ ಅಭ್ಯರ್ಥಿಯೊಬ್ಬರಿಗೆ ಅವಕಾಶ ಸಿಕ್ಕ ಪ್ರತಿಷ್ಠೆಯೊಂದಿಗೆ, ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ಮಹಿಳೆಯೊಬ್ಬರಿಗೆ ಟಿಕೆಟ್ ಕೊಟ್ಟ ಖ್ಯಾತಿಯ ಕ್ರೆಡಿಟ್ ಕಾಂಗ್ರೆಸ್‌ ಪಡೆದುಕೊಂಡಿತ್ತು. ವೀಣಾ ಕಾಶಪ್ಪನವರ, ಲೋಕಸಭೆ ಚುನಾವಣೆಯ ಅಭ್ಯರ್ಥಿಯಾಗಿದ್ದೇ ತಡ, ಈ ಕ್ಷೇತ್ರದ ಹಾಲಿ ಶಾಸಕ, ಬಿಜೆಪಿಯ ದೊಡ್ಡನಗೌಡ ಪಾಟೀಲರು, ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು. ಕಳೆದ 2014ರ ಲೋಕಸಭೆ ಚುನಾವಣೆಗಿಂತ, ಈ ಬಾರಿ ಅತಿಹೆಚ್ಚು ಕ್ರಿಯಾಶೀಲರಾಗಿ ದೊಡ್ಡನಗೌಡರು ಚುನಾವಣೆ ಮಾಡಿದ್ದು, ಅವರ ಸ್ಥಳೀಯ ರಾಜಕಾರಣದ ಗುಟ್ಟಲ್ಲದೇ ಬೇರೇನಲ್ಲ.

ಕ್ಷೇತ್ರದಲ್ಲಿ ದೊಡ್ಡನಗೌಡರಿಗೆ ಸ್ವಜಾತಿ ಬಲ ಇಲ್ಲದಿದ್ದರೂ, ಬೇರು ಮಟ್ಟದಲ್ಲಿ ಇರುವ ಬಿಜೆಪಿ ಸಂಘಟನೆ, ಮೋದಿ ಅಲೆ, ಲೋಕಸಭೆ ಅಭ್ಯರ್ಥಿ ಗದ್ದಿಗೌಡರ ಸ್ವಜಾತಿ ಬೆಂಬಲವಿದೆ. ಮುಖ್ಯವಾಗಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತಗಳ ವಿಭಜನೆ, ಆಗ ಹಾಲಿ ಶಾಸಕರಾಗಿದ್ದ ವಿಜಯಾನಂದರ ರೆಬೆಲ್ ನಡವಳಿಕೆ, ತಮ್ಮ ಸ್ವ ಪಕ್ಷದ ಕಾರ್ಯಕರ್ತರಿಗೂ ಬೇಸರ ಮೂಡಿಸಿತ್ತು. ಹೀಗಾಗಿ 2013ರಲ್ಲಿ 15,799 ಮತಗಳ ಅಂತರದಿಂದ ಗೆದ್ದಿದ್ದ ವಿಜಯಾನಂದ, 2018ರ ಚುನಾವಣೆಯಲ್ಲಿ 5,227 ಮತಗಳ ಅಂತರದಿಂದ ಸೋತಿ ದ್ದರು. ಇಲ್ಲಿ ಹಳೆಯ ಸ್ನೇಹಿತನ ದೂರ ಮಾಡಿಕೊಂಡಿದ್ದರಿಂದ ಮುಸ್ಲಿಂ ಮತ ಗಳು ಕೈಕೊಟ್ಟಿದ್ದರೆ, ಜೆಡಿಎಸ್‌ನ ನವಲಿಹಿರೇಮಠರು ಪಡೆದ, ಬಹುಭಾಗ ಮತಗಳು ಕಾಂಗ್ರೆಸ್‌ನದ್ದಾಗಿದ್ದವು. ಅದೆಲ್ಲ ಕಾರಣದಿಂದ ಸೋತ ಬಳಿಕ, ಪಕ್ಷದ ನಾಯಕರ ವಿರುದ್ಧವೇ ಬಹಿರಂಗ ಹೇಳಿಕೆ ಕೊಟ್ಟು, ಕಾಂಗ್ರೆಸ್‌ನಲ್ಲಿ ಒಬ್ಬಂಟಿಯಾಗಿದ್ದರು. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಅದೆಲ್ಲವನ್ನೂ ಸರಿದೂಗಿಸಿ, ಅವರ ಪತ್ನಿ ವೀಣಾಗೆ ಟಿಕೆಟ್ ಕೊಟ್ಟು, ಲಿಂಗಾಯತ ಅಸ್ತ್ರ ಪ್ರಯೋಗಿಸಿದ್ದು ಮಾಜಿ ಸಿಎಂ ಸಿದ್ದರಾಮಯ್ಯ.

ಲೆಕ್ಕಾಚಾರವೇನು: ಈ ಕ್ಷೇತ್ರದಲ್ಲಿ ಈ ಬಾರಿ ಶೇ.67.81ರಷ್ಟು ಮತದಾನವಾಗಿದ್ದು, ಕಳೆದ ಲೋಕಸಭೆ ಚುನಾವಣೆಗಿಂತ ಶೇ.3.55ರಷ್ಟು ಹೆಚ್ಚಾಗಿದೆ. ಸ್ಥಳೀಯ ಅಭ್ಯರ್ಥಿ ಎಂಬ ಪ್ಲಸ್‌ ಜತೆಗೆ ಜೆಡಿಎಸ್‌ನ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗಲಿದೆ ಎಂಬುದು ಮೈತ್ರಿ ಪಕ್ಷಗಳ ಲೆಕ್ಕಾಚಾರ. ಮುಸ್ಲಿಂರ ಮತದಾನವೂ ಇಲ್ಲಿ ಕಡಿಮೆಯಾಗಿದ್ದು, ಇದು ಮೈತ್ರಿ ಅಭ್ಯರ್ಥಿಯ ಲೆಕ್ಕಾಚಾರ ಉಲಾr ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ತಾಲೂಕಿನ ಮಹಿಳೆಯಾಗಿ, ಜಿಪಂ ಅಧ್ಯಕ್ಷೆಯಾಗಿ ಉತ್ತಮ ಕೆಲಸ ಮಾಡಿದ ಖ್ಯಾತಿ, ಈ ಚುನಾವಣೆಯಲ್ಲಿ ಅವರಿಗೆ ಮತಗಳಾಗಿ ಪರಿವರ್ತನೆಯಾಗಿವೆ ಎಂಬ ಚರ್ಚೆಯೂ ಒಂದೆಡೆ ಇದೆ. ಇನ್ನೊಂದೆಡೆ, ಕಳೆದ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌-ಬಿಜೆಪಿ ನೇರ ಪೈಪೋಟಿ ಇತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತಗಳು ವಿಭಜನೆಯಾಗಿದ್ದವು. ಈಗ ಪುನಃ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌-ಜೆಡಿಎಸ್‌ ಒಟ್ಟಾಗಿದ್ದು, ಬಿಜೆಪಿಗೆ ಈ ಕ್ಷೇತ್ರದಲ್ಲಿ ಲೀಡ್‌ ಬರಲ್ಲ ಎಂಬ ವಿಶ್ಲೇಷಣೆ ಒಂದೆಡೆ ನಡೆಯುತ್ತಿದೆ.

ಇನ್ನೊಂದೆಡೆ ಮಾಜಿ ಶಾಸಕರ ನಡೆ, ಮನೆತನಕ ಹೋದರೂ ತಕ್ಷಣ ಕೈಗೆ ಸಿಗಲ್ಲ (ಮನೆಯಲ್ಲಿದ್ದರೂ) ಎಂಬ ಬೇಸರ ಕ್ಷೇತ್ರದ ಹಲವು ಪ್ರಮುಖರು, ಕಾರ್ಯಕರ್ತರು ಹಾಗೂ ಜನರಲ್ಲಿದೆ. ಇದರೊಟ್ಟಿಗೆ ಮೋದಿಯ ಅಲೆ, ಇಡೀ ಕ್ಷೇತ್ರದ ಗ್ರಾಮ ಮಟ್ಟದಲ್ಲಿರುವ ಬಿಜೆಪಿ ಯುವ ಕಾರ್ಯಕರ್ತರ ಸಂಘಟನೆಯ ಬಲದಿಂದ ಪ್ರತಿ ಬೂತ್‌ ಮಟ್ಟದಲ್ಲಿ ಬಿಜೆಪಿ ಹೆಚ್ಚು ಮತ ಪಡೆಯಲಿದೆ ಎಂಬುದು ಅವರ ಲೆಕ್ಕಾಚಾರ.

ಹಿಂದಿನ ಫಲಿತಾಂಶ ಹೇಗಿದ್ದವು: 2013ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 1,91,811 ಮತದಾರರಿದ್ದು, ಅದರಲ್ಲಿ 1,37,024 (ಶೇ.71.45) ಜನರು ಮತ ಹಾಕಿದ್ದರು. ಆಗ ಬಿಜೆಪಿ 56,923 ಮತ ಪಡೆದರೆ, ಕಾಂಗ್ರೆಸ್‌ 72,720 ಮತ ಪಡೆದಿತ್ತು. ಇದಾದ ಬಳಿಕ ನಡೆದ 2014ರ ಲೋಕಸಭೆ ಚುನಾವಣೆಯಲ್ಲಿ 2,01,960 ಒಟ್ಟು ಮತದಾರರಿದ್ದರು. ಅದರಲ್ಲಿ 1,29,780 (ಶೇ.64.26) ಮತದಾರರು ಹಕ್ಕು ಚಲಾಯಿಸಿದ್ದರು. ಆಗ ಬಿಜೆಪಿಯ ಗದ್ದಿಗೌಡರು 63,931 ಮತ ಪಡೆದರೆ, ಕಾಂಗ್ರೆಸ್‌ನ ಸರನಾಯಕ 58,460 ಮತ ಪಡೆದಿದ್ದರು. ಬಿಜೆಪಿ ಈ ಕ್ಷೇತ್ರದಲ್ಲಿ 5,471 ಮತಗಳ ಅಂತರ ಕಾಯ್ದುಕೊಂಡಿತ್ತು. 2013ರ ವಿಧಾನಸಭೆ ಚುನಾವಣೆಗಿಂತ 2014ರ ಲೋಕಸಭೆ ಚುನಾವಣೆ ವೇಲೆ 10,149 ಮತದಾರರು ಹೆಚ್ಚಳವಾಗಿದ್ದರು. ಇನ್ನು 2018ರ ವಿಧಾನಸಭೆ ಚುನಾವಣೆ ವೇಳೆ 2,14,149 ಮತದಾರರಿದ್ದರು. ಅದರಲ್ಲಿ 1,56,533 (ಶೇ.73.09) ಮತದಾನ ಮಾಡಿದ್ದರು. ಅದರಲ್ಲಿ ಬಿಜೆಪಿ 65,012, ಕಾಂಗ್ರೆಸ್‌ 59,785 ಹಾಗೂ ಜೆಡಿಎಸ್‌ 25,850 ಮತ ಪಡೆದಿದ್ದವು.

 

 

 

 

 

ಈ ಬಾರಿಯ ಲೋಕಸಭೆ ಚುನಾವಣೆಗೆ ಕ್ಷೇತ್ರದಲ್ಲಿ ಒಟ್ಟು 2,14,542 ಮತದಾರರಿದ್ದು, ಅದರಲ್ಲಿ 1,45,473 (ಶೇ.67.81) ಹಕ್ಕು ಚಲಾಯಿಸಿದ್ದಾರೆ. ಈ ಕ್ಷೇತ್ರದಲ್ಲಿ ಪ್ರತಿ ಬಾರಿ ಲೋಕಸಭೆ ಚುನಾವಣೆಗೆ ಕಡಿಮೆ ಮತದಾನವಾದರೆ, ವಿಧಾನಸಭೆ ಚುನಾವಣೆಗೆ ಸರಾಸರಿ 70ರ ಮೇಲ್ಪಟ್ಟು ಮತದಾನವಾದ ದಾಖಲೆ ಇವೆ.

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.