ಮಿನಿ ವಿಧಾನಸೌಧ ನಿರ್ಮಾಣಕ್ಕೆ ಜಾಗ ಮಂಜೂರು
Team Udayavani, Feb 3, 2020, 12:22 PM IST
ಬಾದಾಮಿ: ಇಲ್ಲಿನ ರಾಮದುರ್ಗ ರಸ್ತೆಯ ಮಲಪ್ರಭಾ ಎಡದಂಡೆ ಕಾಲುವೆ ವಿಭಾಗದ ಮೂರು ಎಕರೆ ಜಮೀನನ್ನ ಜಲಸಂಪನ್ಮೂಲ ಇಲಾಖೆಯಿಂದ ಕಂದಾಯ ಇಲಾಖೆಯ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಮಂಜೂರು ಮಾಡಿ ಜಲಸಂಪನ್ಮೂಲ ಇಲಾಖೆ ಅಧೀನ ಕಾರ್ಯದರ್ಶಿ ಶ್ರೀಹರಿ ಎಸ್.ಆರ್. ಆದೇಶ ಹೊರಡಿಸಿದ್ದಾರೆ.
ಸರ್ವೇ ನಂ: 191, 191/ಅ ಮತ್ತು 192 ರಲ್ಲಿ ಒಟ್ಟು 12 ಎಕರೆ ಜಮೀನಿನಲ್ಲಿ ಲಭ್ಯವಿರುವ ಕರ್ನಾಟಕ ನೀರಾವರಿ ನಿಗಮದ ಅಧೀನದಲ್ಲಿರುವ 3 ಎಕರೆ ಜಮೀನನ್ನು ಬಾದಾಮಿ ಮಿನಿವಿಧಾನಸೌಧ ಕಟ್ಟಡ ನಿರ್ಮಾಣಕ್ಕಾಗಿ ಉಚಿತವಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸಿ ಸರ್ಕಾರದ ಅನುಮೋದನೆ ನೀಡಿದೆ. ಇದರಿಂದ ಬಾದಾಮಿ ಜನತೆಗೆ ಮಿನಿ ವಿಧಾನಸೌಧ ದೂರವಾಗುತ್ತಿದೆ ಎಂಬ ಸಮಸ್ಯೆ ಬಗೆಹರಿದಂತಾಗಿದೆ. ಹಾಲಿ ಯರಗೊಪ್ಪ ಕ್ರಾಸ್ನಲ್ಲಿರುವ ಮಿನಿವಿಧಾನಸೌಧಕ್ಕೆ ಸರ್ಕಾರಿ ಪದವಿ ಕಾಲೇಜು ಸ್ಥಳಾಂತರಮಾಡಲಾಗುತ್ತಿದೆ. ಇದರಿಂದ ಎರಡೂ ಸಮಸ್ಯೆಗಳು ಬಗೆಹರಿದಂತಾಗುತ್ತದೆ.
ಬಿ.ಬಿ. ಚಿಮ್ಮನಕಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ 2017ರಲ್ಲಿ ಹೊಸ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಮಂಜೂರಾಗಿತ್ತು. ಮೊದಲು ನಗರದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣದ ಎದುರಿನ ಜಾಗದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಪುರಾತತ್ವ ಇಲಾಖೆ ಅನುಮತಿ ನೀಡದ್ದರಿಂದ ಈಗ ಎಂಎಲ್ಬಿಸಿ ಜಾಗಕ್ಕೆ ಸ್ಥಳಾಂತರಿಸಲು ಸರಕಾರ ಅನುಮತಿ ನೀಡಿದೆ.
ಮೂರು ಎಕರೆ ಜಾಗದಲ್ಲಿ ಹೊಸ ಮಿನಿವಿಧಾನ ಸೌಧ ಕಚೇರಿ ಕಟ್ಟಡ ನಿರ್ಮಿಸಲು ಯೋಜನೆ ಮಾಡಲಾಗಿದೆ. ನೀರಾವರಿ ನಿಗಮದ ಹಳೆಯ ವಸತಿಗೃಹಗಳು ಮತ್ತು ಕಚೇರಿಯ ಒಟ್ಟು 3 ಎಕರೆ ಜಮೀನಿನಲ್ಲಿ ಹೊಸ ಮಿನಿವಿಧಾನಸೌಧ ಕಟ್ಟಡ ನಿರ್ಮಾಣವಾಗಲಿದೆ. ಕೆಲವೇ ದಿನಗಳಲ್ಲಿ ನೀರಾವರಿ ನಿಗಮದ ಕಚೇರಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಕಟ್ಟಡ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು