ಆಲಮಟ್ಟಿ ಜಲಾಶಯ ಬಹುತೇಕ ಭರ್ತಿ


Team Udayavani, Jul 29, 2019, 8:35 AM IST

bk-tdy-2

ಆಲಮಟ್ಟಿ: ಕೃಷ್ಣೆ ಉಗಮ ಸ್ಥಾನ ಹಾಗೂ ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಬರುತ್ತಿರುವುದರಿಂದ ಬಹುತೇಕ ಭರ್ತಿಗೊಂಡಿದೆ.

ಮುಂಜಾಗ್ರತಾ ಕ್ರಮವಾಗಿ ಜಲಾಶಯದ 12 ಗೇಟುಗಳಿಂದ ಹಾಗೂ ವಿದ್ಯುದ್ದಾಗಾರಗಳಿಂದ ಬಸವಸಾಗರ ಜಲಾಶಯಕ್ಕೆ ನದಿ ಮೂಲಕ ನೀರು ಬಿಡಲಾಗುತ್ತಿದೆ.

2019ನೇ ಸಾಲಿನಲ್ಲಿ ಇದೇ ಪ್ರಥಮ ಬಾರಿಗೆ ಜಲಾಶಯ ಸಂಪೂರ್ಣ ತುಂಬಿದ್ದರಿಂದ ರವಿವಾರ ಬೆಳಗ್ಗೆಯಿಂದ 6 ಗೇಟ್ ಮತ್ತು ಸಂಜೆ 12 ಗೇಟ್ ಹಾಗೂ ಕೆಪಿಸಿಎಲ್ಗಳಿಂದ ನದಿ ಪಾತ್ರಕ್ಕೆ ನೀರು ಹರಿಸಲಾಗುತ್ತಿದೆ.

ಗರಿಷ್ಠ 519.60 ಮೀ ಎತ್ತರದ ಜಲಾಶಯ ಗರಿಷ್ಠ 123.81 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ ಬೆಳಗ್ಗೆ 519.350 ಮೀ. ಎತ್ತರದಲ್ಲಿ 118.727 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.

ರವಿವಾರ ಜಲಾಶಯಕ್ಕೆ 80 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದ 12 ಗೇಟುಗಳ ಮತ್ತು ಕೆಪಿಸಿಎಲ್ ಹಾಗೂ ಎಲ್ಲ ಕುಡಿಯುವ ನೀರಿನ ಘಟಕ ಮತ್ತು ಆಲಮಟ್ಟಿ ಎಡದಂಡೆ ಶಾಖಾ ಕಾಲುವೆ ಮತ್ತು ಚಿಮ್ಮಲಗಿ ಏತ ನೀರಾವರಿ ಯೋಜನೆಗಳಿಗೆ 297 ಕ್ಯೂಸೆಕ್‌, ಆಲಮಟ್ಟಿ ಬಲದಂಡೆ ಶಾಖಾ ಕಾಲುವೆ ಹಾಗೂ ತಿಮ್ಮಾಪುರ ಏತ ನೀರಾವರಿ ಯೋಜನೆಯ ಡಿಸಿ-1 ಮತ್ತು 2ಗಳಿಗೆ 103 ಕ್ಯೂಸೆಕ್‌, ಮುಳವಾಡ ಏತ ನೀರಾವರಿ ಯೋಜನೆಯ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ 258 ಕ್ಯೂಸೆಕ್‌, ಸೊನ್ನ, ರೊಳ್ಳಿಮನ್ನಿಕೇರಿ ಯೋಜನೆಗೆ 20 ಕ್ಯೂಸೆಕ್‌ ಸೇರಿ ಒಟ್ಟು ಕಾಲುವೆಗಳ ಮೂಲಕ 678 ಕ್ಯೂಸೆಕ್‌ ಸೇರಿ ಒಟ್ಟು ಜಲಾಶಯದಿಂದ 1,01,078 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಈಗ ಅ.ಸಂಖ್ಯೆ-1ರಿಂದ 6ವರೆಗಿನ ಗೇಟುಗಳನ್ನು ಬಂದ್‌ ಮಾಡಿ 7ರಿಂದ 18 ಗೇಟ್‌ಗಳನ್ನು ಒಂದು ಮೀಟರ್‌ವರೆಗೆ ಎತ್ತರಿಸಿ ನೀರು ಹರಿಸುತ್ತಿದ್ದು ಇನ್ನುಳಿದ 8 ಗೇಟ್‌ಗಳನ್ನು ಬಂದ್‌ ಮಾಡಲಾಗಿದೆ. ಜಲಾಶಯದ ಬಲಭಾಗದ ಆಲಮಟ್ಟಿ ವಿದ್ಯುತ್‌ ಉತ್ಪಾದನಾ ಕೇಂದ್ರದ ಮೂಲಕ 42,000 ಕ್ಯೂಸೆಕ್‌ ನೀರನ್ನು ಬಿಡುತ್ತಿರುವುದರಿಂದ ಅಲ್ಲಿನ ಎಲ್ಲ ಆರು ಘಟಕಗಳಿಂದ 270 ಮೆಗಾವ್ಯಾಟ್ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ. ನಾಳೆ ಒಳಗೆ ಒಳಹರಿವು ಇನ್ನಷ್ಟು ಹೆಚ್ಚಿದರೆ ಜಲಾಶಯದ ಗೇಟ್‌ಗಳ ಎತ್ತರ ಇನ್ನಷ್ಟು ಹೆಚ್ಚಿಸಿ ಹೊರಹರಿವು ಹೆಚ್ಚಿಸಲಾಗುವುದು ಎಂದು ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಗಳು ತಿಳಿಸಿವೆ.

ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಿಂದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ನೀರು ಹರಿಬಿಡುತ್ತಿರುವುದರಿಂದ ನಾರಾಯಣಪುರ ಬಸವಸಾಗರ ಹಿನ್ನೀರಿನಿಂದ ಬಾಧಿತಗೊಳ್ಳುತ್ತಿದ್ದ ಗ್ರಾಮಗಳ ಜಮೀನುಗಳ ರೈತರ ಜಮೀನುಗಳಲ್ಲಿ ನೀರು ನುಗ್ಗುವ ಆತಂಕ ಮೂಡುವಂತಾಗಿದೆ.

ಕಳೆದ ಬಾರಿ ಇದೇ ದಿನ ಜಲಾಶಯದಲ್ಲಿ 519.03 ಮೀ. ಎತ್ತರದಲ್ಲಿ 95.812 ಟಿಎಂಸಿ ಅಡಿ ಸಂಗ್ರಹವಾಗಿ ಒಳ ಹರಿವು 92,657 ಕ್ಯೂಸೆಕ್‌ ಜಲಾಶಯದಿಂದ 53,708 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿತ್ತು. ಆತಂಕದಲ್ಲಿ ರೈತರು: ಆಲಮಟ್ಟಿ ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿ ಬಿಡುತ್ತಿರುವುದರಿಂದ ನದಿ ಪಾತ್ರದ ಜಿಲ್ಲೆಯ ಅರಳದಿನ್ನಿ, ಯಲಗೂರ, ಕಾಶಿನಕುಂಟಿ, ಬಳಬಟ್ಟಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಮನಹಳ್ಳಿ, ನಾಗಸಂಪಗಿ, ನಾಯನೇಗಲಿ, ಸುತಗುಂಡಾರ ಸೇರಿ ಸುಮಾರು 20 ಗ್ರಾಮಗಳ ರೈತರ ಬೆಳೆ ಪ್ರತಿ ವರ್ಷವೂ ನೆರೆ ಹಾವಳಿಯಿಂದ ಹಾನಿಗೊಳಗಾಗುತ್ತಿದೆ.

• 12 ಗೇಟ್‌ಗಳಿಂದ ಹೊರಕ್ಕೆ ನೀರು 

ರವಿವಾರ ಸಂಗ್ರಹಗೊಂಡಿದೆ 118.727 ಟಿಎಂಸಿ ಅಡಿ ನೀರು

• ಜಲಾಶಯದಿಂದ ಬಿಡಲಾಗುತ್ತಿದೆ 1,01,078 ಕ್ಯೂಸೆಕ್‌ ನೀರು

• ಹಿನ್ನೀರಿನಿಂದ ಬಾಧಿತ ಜಮೀನುಗಳಿಗೆ ನೀರು ನುಗ್ಗುವ ಆತಂಕ

• ಒಳಹರಿವು ಇನ್ನಷ್ಟು ಹೆಚ್ಚಿದರೆ ಹೊರಹರಿವು ಹೆಚ್ಚಳ ಸಾಧ್ಯತೆ

 

•ಶಂಕರ ಜಲ್ಲಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.