ಪೆಂಡಾಲ್ ಗೋಡಾನಿಗೆ ಬೆಂಕಿ-ಹಾನಿ
Team Udayavani, Apr 20, 2019, 12:38 PM IST
ಇಳಕಲ್ಲ: ವಿದ್ಯುತ್ ಶಾರ್ಟ್ ಸರ್ಕ್ನೂಟ್ನಿಂದ ಪೆಂಡಾಲ್ ಗೋಡಾನಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಅಲಂಕಾರಿಕ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಗರದ ದರ್ಗಾ ಎದುರಿಗೆ ನಡೆದಿದೆ.
ಇಳಕಲ್ಲದ ನಾರಾಯಣ ಶಂಕರಪ್ಪ ಮೇಣೆದಾಳ ಮಾಲೀಕತ್ವದ ಬನಶಂಕರಿ ಡೆಕೋರೇಟರ್ನಲ್ಲಿ ಈ ಬೆಂಕಿಯ ಅವಘಡ ಸಂಭವಿಸಿದೆ. ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಬಳಸುವ ಪೆಂಡಾಲ್, ಚೇರ್, ಸೋಫಾ, ಮ್ಯಾಟ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಈ ಗೋಡಾನಿನಲ್ಲಿ ಶೇಖರಿಸಿ ಇಡಲಾಗಿತ್ತು. ಆದರೆ ಯಾವಾಗ ಈ ವಿದ್ಯುತ್ ಅವಘಡ ಸಂಭವಿಸಿತೋ ಗೊತ್ತಿಲ್ಲ. ಬೆಳಿಗ್ಗೆ 11:30ರ ಸುಮಾರಿಗೆ ಗೋಡಾನಿನ ವೆಂಟಿಲೇಟರ್ನಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿರುವದನ್ನು ಗಮನಿಸಿದ ಸಾರ್ವಜನಿಕರು, ಮಾಲೀಕರಿಗೆ ಹಾಗೂ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ.
ನಗರ ಠಾಣೆಯ ಪಿಎಸ್ಐ ಅನಿಲ ರಾಠೊಡ ಮತ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿ ಗೋಡಾನಿನ ತುಂಬ ಆವರಿಸಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿಗಳು 2 ಗಂಟೆಗಳ ಕಾಲ ಕಾರ್ಯಾಚನಾರಾಯಣ ಶಂಕರಪ್ಪರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸುಮಾರು 30ರಿಂದ 40 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎನ್ನಲಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ