ಕುಸಿಯುವ ಭೀತಿಯಲ್ಲಿ ಅಮೀನಗಡ ಪಶು ಆಸ್ಪತ್ರೆ ಕಟ್ಟಡ

ಜೀವ ಭಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು- ಸಿಬ್ಬಂದಿ

Team Udayavani, Jul 18, 2022, 4:05 PM IST

18

ಅಮೀನಗಡ: ಇಲ್ಲಿಯ ಸರ್ಕಾರಿ ಪಶು ಚಿಕಿತ್ಸಾ ಲಯ ಮತ್ತು ಕೃತಕ ಗರ್ಭಧಾರಣ ಉಪಕೇಂದ್ರ ಶಿಥಿಲಗೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವೈದ್ಯರು ಭಯದಲ್ಲಿಯೇ ಕಾರ್ಯನಿರ್ವಹಿಸುವಂತಾಗಿದೆ.

ಹೌದು, ಪಟ್ಟಣದ ಬೆಳಗಾವಿ-ರಾಯಚೂರು ಹೆದ್ದಾರಿಯ ಪಕ್ಕದಲ್ಲಿರುವ ಪಶು ಆಸ್ಪತ್ರೆಗೆ ಪಶುಗಳನ್ನು ಕರೆದುಕೊಂಡು ಬರುವ ರೈತರು ಆಸ್ಪತ್ರೆ ಕಟ್ಟಡ ನೋಡಿ ಆತಂಕಗೊಳ್ಳುವಂತಾಗಿದೆ. ಕಟ್ಟಡ ಯಾವಾಗ ಬೀಳುತ್ತದೋ ಎಂಬ ಆತಂಕ ಮೂಡದೇ ಇರದು, ಪಾಳು ಬಿದ್ದಂತೆ ಕಂಡು ಬರುವ ವಾತಾವರಣ ಅಲ್ಲಿ ನಿರ್ಮಾಣವಾಗಿದ್ದು, ಕಟ್ಟಡದ ಗೋಡೆಗಳಲ್ಲಿ ಬಿರುಕು, ಸಿಮೆಂಟ್‌ ಕಿತ್ತು ಬಂದಿರುವುದು ಸೇರಿದಂತೆ ದುರಾವಸ್ಥೆಯೇ ಇಲ್ಲಿ ನೆಲೆ ನಿಂತಂತಿದೆ.

ಆಸ್ಪತ್ರೆ ಕಟ್ಟಡ 1985ರಲ್ಲಿ ಉದ್ಘಾಟನೆಯಾ ಗಿದ್ದು, ಸುಮಾರು 37 ವರ್ಷಗಳ ಹಳೆಯ ಕಟ್ಟಡ ವಾಗಿದೆ. ಕಟ್ಟಡದಲ್ಲಿ ಒಂದು ಹಾಲ್‌, ಎರಡು ಕೊಠಡಿ ಹೊಂದಿದೆ. ಒಂದು ಕೊಠಡಿಯಲ್ಲಿ ವೈದ್ಯರು ಕುಳಿತು ಕಾರ್ಯನಿರ್ವಹಿಸುತ್ತಾರೆ.

ಮತ್ತೂಂದು ಕೊಠಡಿಯಲ್ಲಿ ಔಷಧ ದಾಸ್ತಾನು ಮಾಡಲಾಗಿದೆ. ಹಾಲ್‌ನಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಕಟ್ಟಡದ ಮೇಲ್ಛಾವಣಿ ಸಿಮೆಂಟ್‌ ಎಲ್ಲೆಂದರಲ್ಲಿ ಉದುರಿಬಿದ್ದು, ಛಾವಣಿಗೆ ಅಳವಡಿಸಿದ ಕಬ್ಬಿಣದ ರಾಡ್‌ಗಳು ಕಾಣುತ್ತಿವೆ. ಕಿಟಕಿಗಳು, ಬಾಗಿಲುಗಳು ಮುಟ್ಟದರೆ ಬೀಳುವ ಹಂತದಲ್ಲಿದೆ. ಆಸ್ಪತ್ರೆ ವ್ಯಾಪ್ತಿಯಲ್ಲಿ ಪಟ್ಟಣ ಸೇರಿದಂತೆ ಹಿರೇಮಾಗಿ, ಇನಾಮಬೂದಿಹಾಳ, ಮಾದಾಪುರ, ಹುಲಗಿನಾಳ, ಕಲ್ಲಗೋನಾಳ, ರಕ್ಕಸಗಿ, ಹಿರೇಯರನಕೇರಿ, ಚಿಕ್ಕಯರನಕೇರಿ, ಹೊನ್ನರಹಳ್ಳಿ, ಬೇವಿನಮಟ್ಟಿ ಸೇರಿದಂತೆ ಒಟ್ಟು 11 ಗ್ರಾಮಗಳ ರೈತರ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಯ ವ್ಯಾಪ್ತಿಯಲ್ಲಿ 2880 ಎಮ್ಮೆ-ಆಕಳು,11000 ಕುರಿ-ಆಡುಗಳು ಸೇರಿ ಇತರ ಪ್ರಾಣಿಗಳಿವೆ ಎಂದು ಅಂದಾಜಿಸಲಾಗಿದೆ.

ಪ್ರಸ್ತುತ ಮಳೆಗಾಲ ಪ್ರಾರಂಭವಾಗಿದ್ದು, ಮಳೆ ಸುರಿದರೆ ಛಾವಣಿಯಿಂದ ನೀರು ಗೋಡೆ ಮೇಲೆ ಹರಿಯುವ ಜತೆಗೆ ಗೋಡೆಯ ಒಳ ಭಾಗಕ್ಕೆ ಜಿನಗುತ್ತಿದೆ. ಇದರಿಂದ ಗೋಡೆ ಛಾವಣಿಯಲ್ಲಿ ತೇವಾಂಶದಿಂದ ಪಾಚಿ ಬೆಳೆದಿದೆ. ಆದರಿಂದ ದುಃಸ್ಥಿತಿಯಲ್ಲಿರುವ ಕಟ್ಟಡವನ್ನು ಅಧಿಕಾರಿಗಳು ಗಮನ ಹರಿಸಿ ಬೀಳುವ ಹಂತದಲ್ಲಿರುವ ಪಶು ಆಸ್ಪತ್ರೆ ಕಟ್ಟಡ ಸರಿಪಡಿಸಬೇಕು ಎಂಬುದು ರೈತರ ಆಗ್ರಹವಾಗಿದೆ.

ರೈತ ಸ್ನೇಹಿಯಾದ ಎತ್ತು, ಎಮ್ಮೆ, ಆಕಳು, ಕುರಿ,ನಾಯಿ ಹೀಗೆ ಹಲವು ಪ್ರಾಣಿಗಳಿಗೆ ಸಂಜೀವಿನಿಯಾಗಿರುವ ಪಟ್ಟಣದ ಪಶು ಆಸ್ಪತ್ರೆಯ ಕಟ್ಟಡ ಶಿಥಿಲಗೊಂಡಿದೆ.ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಸಿಬ್ಬಂದಿ ಜೀವಭಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಆದರಿಂದ ಸಂಬಂದಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಹಳೆ ಕಟ್ಟಡ ನೆಲಸಮಗೊಳಿಸಿ ಈಗಿರುವ ಸ್ಥಳದಲ್ಲಿ ಸುಸಜ್ಜಿತ ಪಶು ಆಸ್ಪತ್ರೆ ನಿರ್ಮಾಣ ಮಾಡಿ ಸಮಸ್ಯೆ ಬಗೆಹರಿಸಬೇಕು –ಹುಲ್ಲಪ್ಪ ಹುಲಗಿನಾಳ, ಇಸ್ಮಾಯಿಲ್‌ ಮುಲ್ಲಾ, ಗ್ರಾಮಸ್ಥರು

ಅಮೀನಗಡ ಪಟ್ಟಣದಲ್ಲಿರುವ ಪಶು ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ಸಮಸ್ಯೆಗಳನ್ನು ವೀಕ್ಷಣೆ ಮಾಡಿದ್ದೇನೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲು ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಆರ್‌ಐಡಿಎಫ್‌(ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಧಿ) -28 ಯೋಜನೆಯಡಿ 40 ಲಕ್ಷ ರೂ. ಅನುದಾನ ಬಿಡುಗೊಡೆಗೊಂಡ ತಕ್ಷಣವೇ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು. –ಡಾ| ಎಸ್‌.ಬಿ.ಬೇನಾಳ, ಮುಖ್ಯಪಶು ವೈದ್ಯಾಧಿಕಾರಿ, ಆಡಳಿತ, ಪಶು ಆಸ್ಪತ್ರೆ, ಹುನಗುಂದ

ನಮ್ಮ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲ. ಆದರೆ, ಆಸ್ಪತ್ರೆ ಕಟ್ಟಡ ಶಿಥಿಲಗೊಂಡಿದೆ. ಕಟ್ಟಡದ ಮೇಲ್ಚಾವಣಿ ಸಿಮೆಂಟ್‌ ಎಲ್ಲೆಂದರಲ್ಲಿ ಉದುರಿಬಿದ್ದು ಆತಂಕದಲ್ಲಿ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಹಿರಿಯ ಅಧಿಕಾರಿಗಳು ಸದ್ಯಕ್ಕೆ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿಸಲು ಜಿಪಂ ವತಿಯಿಂದ 4 ಲಕ್ಷ ಅನುದಾನ ಇದೆ. ಶೀಘ್ರ ಟೆಂಡರ್‌ ಕರೆದು ತಾತ್ಕಾಲಿಕ ಸಮಸ್ಯೆ ಬಗೆಹರಿಸಲಾಗುವುದು. ಕಟ್ಟಡ ಅನುದಾನ ಬಂದ ನಂತರ ಹೊಸ ಕಟ್ಟಡ ನಿರ್ಮಾಣ ಮಾಡಲಾಗುವುದು. –ಶಂಕರಗೌಡ ಎಂ.ಬಿ., ವೈದ್ಯರು, ಪಶು ಆಸ್ಪತ್ರೆ ಅಮೀನಗಡ

-ಎಚ್‌.ಎಚ್‌.ಬೇಪಾರಿ

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.