ಫ್ರಂಟ್ ಲೈನ್ ವಾರಿಯರ್ಸ್ ಗೆ 10 ಸಾವಿರ ಪ್ಯಾಕೇಜ್ ಘೋಷಿಸಿ
Team Udayavani, May 30, 2020, 10:05 AM IST
ಬಾಗಲಕೋಟೆ: ಹತ್ತು ಸಾವಿರ ರೂ. ವಿಶೇಷ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರು ಶುಕ್ರವಾರ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿದರು.
ಕೋವಿಡ್ ನಿಯಂತ್ರಣಕ್ಕಾಗಿ ಫ್ರಂಟ್ ಲೈನ್ ವಾರಿಯರ್ ಆಗಿರುವ ಆಶಾಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಹಲ್ಲೆಗೊಳಗಾದ ಆಶಾಗಳಿಗೆ ಪರಿಹಾರ ನೀಡಬೇಕು.ಮಾರ್ಚ್ ತಿಂಗಳಿಂದ ಕೋವಿಡ್-19 ಕಾರ್ಯ ನಿರ್ವಹಣೆ ಅವಧಿಗೆ ಮಾಸಿಕ 10 ಸಾವಿರದಂತೆ ವಿಶೇಷ ಪ್ಯಾಕೇಜ್ ನೀಡಬೇಕು, ಆಶಾಗಳಿಗೆ ಅಗತ್ಯ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ವಿತರಿಸಬೇಕು. ಮದ್ಯ ಸೇವಿಸಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದವರಿಗೆ ಉಗ್ರ ಶಿಕ್ಷೆ ನೀಡುವ ಜತೆಗೆ ಮದ್ಯ ಮಾರಾಟ ನಿಷೇಧಿಸಬೇಕು, ಕೋವಿಡ್-19ರಿಂದ ಮೃತಪಟ್ಟ ಆಶಾಗಳ ಕುಟುಂಬಕ್ಕೆ 50 ಲಕ್ಷ ರೂ. ವಿಮೆ ಸೌಲಭ್ಯ ಸೇವೆ ಸಲ್ಲಿಸುವ ವೇಳೆ ಆಶಾಗಳು ಮೃತರಾದರೆ ಅವರ ಕುಟುಂಬಕ್ಕೂ ಈ ವಿಮೆ ವಿಸ್ತರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಸಂಘದ ಜಿಲ್ಲಾ ಕಾರ್ಯದರ್ಶಿ ಅಂಜನಾ ಕುಂಬಾರ, ಪ್ರಮುಖರಾದ ಸೈನಾಜ್ ಜಂಗಿ, ರುಕ್ಸಾನಾ ನಾಗಠಾಣ, ಸುರೇಖಾ ಕಾಳೆ, ವಿದ್ಯಾ ಕಡಕೋಳ, ದಾನಮ್ಮ ವಿಭೂತಿ, ಶೀಲಾ ಮೆಳ್ಳಿಗೇರಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ