ಮುಧೋಳ ತಾಲೂಕಿಗೆ ಮತ್ತೂಂದು ಬ್ಯಾರೇಜ್‌

­ಚಿಂಚಖಂಡಿ ಬ್ಯಾರೇಜ್‌ಗೆ ಆಡಳಿತಾತ್ಮಕ ಅನುಮೋದನೆ! ­ರೈತರ ಕನಸು ನನಸಾಗಿಸಿದ ಡಿಸಿಎಂ ಕಾರಜೋಳ

Team Udayavani, Mar 28, 2021, 7:15 PM IST

,ghkft

ಮುಧೋಳ: ತಾಲೂಕಿನ ನೀರಾವರಿ ಪ್ರದೇಶದ ವಿಸ್ತರಣೆಗೆ ಮುಂದಾಗಿರುವ ಕ್ಷೇತ್ರದ ಶಾಸಕ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರೈತರ ಬಹುದಿನದ ಬೇಡಿಕೆಯಾಗಿರುವ ಚಿಂಚಖಂಡಿ ಬ್ಯಾರೇಜ್‌ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕ್ಷೇತ್ರದ ರೈತಬಾಂಧವರ ಸಂತಸ ಇಮ್ಮಡಿಗೊಳಿಸಿದೆ.

ಅತಿಯಾದ ಮಳೆ ಹಾಗೂ ಪ್ರವಾಹದಂತಹ ಸನ್ನಿವೇಶದಲ್ಲಿ ಚಿಂಚಖಂಡಿ ಗ್ರಾಮದ ಪಕ್ಕದಲ್ಲಿರುವ ಘಟಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿತ್ತು. ಅಲ್ಲಿನ ನೀರು ತಡೆ ಹಿಡಿದು ನದಿ ತಟದಲ್ಲಿರುವ ರೈತರ ಜಮೀನುಗಳಿಗೆ ನೀರುಣಿಸುವುದು, ಅಂತರ್ಜಲ ಮಟ್ಟ ವೃದ್ಧಿಸುವ ಸಲುವಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೈಗೊಂಡ ಈ ಕಾರ್ಯ ಈ ಭಾಗದ ರೈತರಲ್ಲಿ ಹೊಸ ಆಸೆ ಮೂಡಿಸಿದೆ.

12 ಬ್ಯಾರೇಜ್‌ಗಳು: ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯಡಿ ಸದ್ಯ 12 ಬ್ಯಾರೇಜ್‌ ಗಳು ನಿರ್ಮಾಣಗೊಂಡಿವೆ. ಢವಳೇಶ್ವರ, ಮಿರ್ಜಿ, ಚನ್ನಾಳ, ಜಾಲಿಬೇರಿ, ಮುಧೋಳ, ಜೀರಗಾಳ, ಇಂಗಳಗಿ, ಜಂಬಗಿ ಕೆ.ಡಿ., ತಿಮ್ಮಾಪುರ, ಮಾಚಕನೂರ, ಆಲಗುಂಡಿ ಸೇರಿದಂತೆ ಅನೇಕ ಬ್ಯಾರೇಜ್‌ಗಳು ಸಾವಿರಾರು ಹೆಕ್ಟೇರ್‌ ಪ್ರದೇಶಗಳಿಗೆ ನೀರೊದಗಿಸುತ್ತಿವೆ. ಇದೀಗ ಚಿಂಚಖಂಡಿ ಬ್ಯಾರೇಜ್‌ ನಿರ್ಮಾಣವಾದರೆ ತಾಲೂಕಿನಲ್ಲಿ ನೀರಾವರಿ ಪ್ರದೇಶ ಮತ್ತಷ್ಟು ವಿಸ್ತಾರಗೊಂಡಂತಾಗುತ್ತದೆ.

ಸಾವಿರಾರು ಎಕರೆ ಪ್ರದೇಶಕ್ಕೆ ನೀರು: ಈಗಾಗಲೇ ತಾಲೂಕಿನಲ್ಲಿ 12 ಬ್ರಿಜ್‌ ಕಂ ಬ್ಯಾರೇಜ್‌ನಿಂದ ಸಾವಿರಾರು ಎಕರೆ ಭೂ ಪ್ರದೇಶ ನೀರಾವರಿ ಸೌಲಭ್ಯ ಪಡೆದಿದೆ. ಅಷ್ಟೇ ಅಲ್ಲ ಕುಡಿಯುವ ನೀರು, ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಬ್ಯಾರೇಜ್‌ಗಳು ಪ್ರಮುಖ ಪಾತ್ರ ವಹಿಸಿವೆ. ಇದೀಗ ಚಿಂಚಖಂಡಿ ಬ್ಯಾರೇಜ್‌ ನಿಂದ ನೀರು ಹಿಡಿದಿಡುವ ಕಾರ್ಯ ಹೆಚ್ಚಿ ನೀರಾವರಿ ಭೂ ಪ್ರದೇಶದ ವಿಸ್ತೀರ್ಣ ಹೆಚ್ಚಾದಂತಾಗಿದೆ.

ಬೇಸಿಗೆಯಲ್ಲಿ ಹೆಚ್ಚು ಅನುಕೂಲ: ಘಟಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಚಿಂಚಖಂಡಿ ಬ್ಯಾರೇಜ್‌ನಿಂದ ಬೇಸಿಗೆ ಕಾಲದಲ್ಲಿ ಅನುಕೂಲ ಹೆಚ್ಚಾಗಲಿದೆ. ಹಿಡಕಲ್‌ ಜಲಾಶಯದಿಂದ ಬೇಸಿಗೆ ವೇಳೆಯಲ್ಲಿ ನೀರು ಹರಿಸಿದರೆ ಈ ಭಾಗದ ಹಳ್ಳಿಗಳಿಗೆ ಬೇಸಿಗೆ ವೇಳೆ ಕುಡಿಯುವ ನೀರು ಹಾಗೂ ದನಕರುಗಳ ದಾಹ ನೀಗಿಸಲು ಅನುಕೂಲವಾಗಲಿದೆ. ಮಳೆಗಾಲ ದಿನಗಳಲ್ಲಂತೂ ಮಳೆಯ ಆರ್ಭಟದಿಂದ ಈ ಭಾಗದಲ್ಲಿ ಪ್ರವಾಹವೇ ಉಕ್ಕಿ ಹರಿಯುತ್ತದೆ. ಆದರೆ ಮಳೆಗಾಲ ಕಳೆದು ಒಂದು ತಿಂಗಳಾಗುವಷ್ಟರಲ್ಲಿ ನದಿ ಪಾತ್ರವೆಲ್ಲ ಒಣಗಿರುತ್ತದೆ. ಬಾರೇಜ್‌ ನಿರ್ಮಾಣದಿಂದ ನೀರಿನ ಸಂಗ್ರಹಕ್ಕೆ ಅನುಕೂಲವಾಗಲಿದೆ.

9.90 ಕೋಟಿ ವೆಚ್ಚ: ಜನರ ಅನುಕೂಲಕ್ಕೆ ಕೈಗೊಂಡಿರುವ ಬ್ಯಾರೇಜ್‌ ನಿರ್ಮಾಣ ಕಾರ್ಯಕ್ಕೆ ಒಟ್ಟು 9.90 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಬ್ಯಾರೇಜ್‌ 99 ಮೀಟರ್‌ ಉದ್ದ, ಮೇಲ್ಭಾಗದಲ್ಲಿ 5.5 ಮೀ.ಅಗಲ, 4 ಮೀಟರ್‌ ಎತ್ತರ, 19 ಮುಖ್ಯ ನಡುಗಂಬ ಹಾಗೂ 20 ಕಿಂಡಿಗಳನ್ನು ಹೊಂದಿರಲಿದೆ. ಬ್ಯಾರೇಜ್‌ ನಿರ್ಮಾಣದಿಂದ ಚಿಂಚಖಂಡಿ ಹಾಗೂ ಸುತ್ತಲಿನ ಅಂದಾಜು 268 ಹೆಕ್ಟೇರ್‌ ಭೂ ಪ್ರದೇಶ ನೀರಾವರಿಯಾಗಲಿದೆ.

ಗೋವಿಂದಪ್ಪ ತಳವಾರ 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.