ಮೃತಪಟ್ಟ ಹಾನಾಪುರ ತಾಂಡಾ ಯುವಕನಿಗೆ ಸೋಂಕು ದೃಢ: ಬಾಗಲಕೋಟೆಯಲ್ಲಿ ಸೋಂಕಿಗೆ 9ನೇ ಬಲಿ


Team Udayavani, Jul 7, 2020, 2:52 PM IST

ಮೃತಪಟ್ಟ ಹಾನಾಪುರ ತಾಂಡಾ ಯುವಕನಿಗೆ ಸೋಂಕು ದೃಢ: ಬಾಗಲಕೋಟೆಯಲ್ಲಿ ಸೋಂಕಿಗೆ 9ನೇ ಬಲಿ

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಾನಾಪುರ ತಾಂಡಾದಲ್ಲಿ ಮೃತಪಟ್ಟಿದ್ದ ಯುವಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಮೃತಪಟ್ಟಿದ್ದ ಯುವಕನ ರಿಪೋರ್ಟ್ ನಲ್ಲಿ ಕೋವಿಡ್-19 ಸೋಂಕು ದೃಢವಾಗಿದ್ದು, ಕೋವಿಡ್ ನಿಯಮಾವಳಿಯಂತೆ ಅಂತ್ಯಕ್ರಿಯೆ ನಡೆಸಲಾಗಿದೆ.

ಗುಳೇದಗುಡ್ಡ ತಾಲೂಕಿನ ಹಾನಾಪೂರ ಎಲ್ ಟಿಯ 30ವರ್ಷದ ಯುವಕ ಜುಲೈ 05ರಂದು ಮೃತಪಟ್ಟಿದ್ದ. ಈತ ಜುಲೈ 2ರಂದು ಗೋವಾದಿಂದ ಸ್ವಗ್ರಾಮಕ್ಕೆ ಬಂದಿದ್ದ. ಸೋಂಕಿರುವುದು ನಿರ್ಲಕ್ಷಿಸಿ, ತನಗೆ ಭೂತದ (ದೆವ್ವ) ಸಮಸ್ಯೆ ಇದೆ ಎಂದು, ಇಳಕಲ್ಲ ತಾಲೂಕಿನ ಗುಡೂರ ಎಸ್.ಸಿ ಗ್ರಾಮಕ್ಕೆ ಹೋಗಿ ದೆವ್ವ ಬಿಡಿಸುವವರನ್ನು ಭೇಟಿ ಮಾಡಿ ಬಂದಿದ್ದ ಎನ್ನಲಾಗಿದೆ.

ಜುಲೈ 5ರಂದು ಆತ ಮೃತಪಟ್ಟಿದ್ದು, ಬಳಿಕ ಗಂಟಲು ಮಾದರಿ ಪರೀಕ್ಷೆಗೆ ಕಳುಹಿಸಿ, ಅಂತ್ಯಕ್ರಿಯೆ ಮಾಡಲಾಗಿತ್ತು.

ಗ್ರಾಮದಲ್ಲಿ ಮೃತ ಯುವಕನ ಸಂಪರ್ಕಕ್ಕೆ ಬಂದಿದ್ದ 42 ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜಿಲ್ಲೆಯಲ್ಲಿ ಸೋಂಕಿನಿಂದ ಈವರೆಗೆ 9 ಜನ ಬಲಿಯಾಗಿದ್ದಾರೆ. ಕಲಾದಗಿಯ ವೈದ್ಯ ಬೆಂಗಳೂರಿನಲ್ಲಿ, ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿಯ ವೃದ್ಧೆ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಎರಡು ಪ್ರಕರಣ ಸಹಿತ ಜಿಲ್ಲೆಯಲ್ಲಿ ಒಟ್ಟು 9 ಜನರು ಕೋವಿಡ್-19ಗೆ ಬಲಿಯಾಗಿದ್ದಾರೆ.

ಸಕ್ಕರೆ ಕಾರ್ಖಾನೆ ನಿರ್ದೇಶಕನಿಗೆ ಸೋಂಕು: ಜಿಲ್ಲೆಯಲ್ಲಿ ಕೋವಿಡ್-19 ರಣಕೇಕೆ ಮುಂದುವರೆದಿದ್ದು, ಬಾಗಲಕೋಟೆ ನವನಗರದ ನಿವಾಸಿ, ಸಕ್ಕರೆ ಕಾರ್ಖಾನೆಯ ನಿರ್ದೇಶಕರೊಬ್ಬರಿಗೆ ಜಿಲ್ಲಾ ಕೋವಿಡ್ ಲ್ಯಾಬ್ ನಲ್ಲಿ ಸೋಂಕು ದೃಢಪಟ್ಟಿದೆ.

ಬಾಗಲಕೋಟೆ ಜಿಲ್ಲೆಯಲ್ಲಿಂದು ಮತ್ತೆ 20 ಹೊಸ ಕೇಸ್ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಬಾಗಲಕೋಟೆ ನಗರದ ರೈಲ್ವೆ ನಿಲ್ದಾಣ ಎದುರಿನ ಪ್ರದೇಶ, ಕಲಾದಗಿ, ಚಿಕ್ಕಮ್ಯಾಗೇರಿ, ಮುಡಪಲಜೀವಿ, ಮಲ್ಲಾಪೂರ, ಮುಧೋಳದಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.