ಮಂದಿರ ಧ್ವಂಸ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ
Team Udayavani, Dec 22, 2019, 11:43 AM IST
ಇಳಕಲ್ಲ: ಬಂಜಾರರ ಆರಾದ್ಯ ದೈವ ಸಂತ ಶ್ರೀ ಸೇವಾಲಾಲ ಮಂದಿರವನ್ನು ಮತ್ತು ಮರಿಯಮ್ಮದೇವಿ ಮಂದಿರವನ್ನು ಧ್ವಂಸ ಮಾಡಿದ ಕಲಬುರಗಿ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ತಪ್ಪಿತಸ್ಥರನ್ನು ಬಂಧಿಸಬೇಕು ಮತ್ತು ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇವಾಲಾಲ್ರ ಹೆಸರನ್ನು ನಾಮಕರಣ ಮಾಡಬೇಕು ಎಂದು ಆಗ್ರಹಿಸಿ ಲಂಬಾಣಿ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.
ಬಸವೇಶ್ವರ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರವಾಸಿ ಮಂದಿರ, ಕನಕದಾಸರ ವೃತ್ತ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತಕ್ಕೆ ಆಗಮಿಸಿ ಅಲ್ಲಿ ಸಾರ್ವಜನಿಕ ಸಭೆಯಾಗಿ ಮಾರ್ಪಟ್ಟಿತ್ತು.ಸೇವಾಲಾಲ ಸಮಾಜದ ಧರ್ಮಗುರುಗಳು ಮಾತನಾಡಿ, ಕಲಬುರಗಿ ಜಿಲ್ಲೆಯ ಮಾದಿಹಾಳತಾಂಡಾದ ಸೇವಾಲಾಲ ಮಂದಿರವನ್ನು ಕಲಬುರಗಿ ವಿಮಾನ ಪ್ರಾಧಿಕಾರ ಧ್ವಂಸ ಮಾಡಿದೆ. ಇದರಿಂದಾಗಿ ರಾಜ್ಯದ ಲಂಬಾಣಿ ಸಮಾಜದವರಿಗೆ ಅನ್ಯಾಯವಾಗಿದ್ದು, ಕೂಡಲೇ ಆ ಮಂದಿರವನ್ನು ಪುನರ್ ನಿರ್ಮಿಸಬೇಕು ಎಂದು ಹೇಳಿದರು. ಜಿಪಂ ಮಾಜಿ ಅಧ್ಯಕ್ಷ ಹನಮಂತಪ್ಪ ರಾಠೊಡ, ಕೃಷ್ಣಾ ರಾಠೊಡ, ಮುತ್ತಣ್ಣ ಜಾಧವ, ವಿಠಲ ಜಾಧವ, ಬಲಕುಂದಿ ಗ್ರಾಪಂ ಅಧ್ಯಕ್ಷ ಶರಣಪ್ಪ ರಾಠೊಡ, ಶರಣಪ್ಪ ಪವಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ