ರೈಲ್ವೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಂಸದರಿಗೆ ಮನವಿ
Team Udayavani, Jul 28, 2019, 3:47 PM IST
ಬಾದಾಮಿ: ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಸಂಸದ ಪಿ.ಸಿ. ಗದ್ದಿಗೌಡರಗೆ ಮನವಿ ಸಲ್ಲಿಸಲಾಯಿತು.
ಬಾದಾಮಿ: ಬಾದಾಮಿ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ರೈಲ್ವೆ ಬೇಡಿಕೆ ಈಡೇರಿಕೆಗಾಗಿ ಸಂಸದ ಪಿ.ಸಿ. ಗದ್ದಿಗೌಡರ ಅವರಿಗೆ ಮನವಿ ಸಲ್ಲಿಸಲಾಯಿತು.
ಐತಿಹಾಸಿಕ ಬಾದಾಮಿ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ, ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಮತ್ತು ನಿಲ್ದಾಣ ಆಧುನೀಕರಣಗೊಳಿಸುವಂತೆ ಒತ್ತಾಯಿಸಲಾಯಿತು.
ವಿಶ್ವ ಪರಂಪರೆ ಪಟ್ಟಿಯಲ್ಲಿರುವ ಚಾಲುಕ್ಯರ ರಾಜಧಾನಿ ಬಾದಾಮಿಗೆ ಪ್ರತಿ ನಿತ್ಯ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ಬಾದಾಮಿ ಮೂಲಕ ಹಾಯ್ದು ಹೋಗುವ ಗದಗ-ಮುಂಬೈ, ಮೈಸೂರು-ಶಿರಡಿ, ಯಶವಂತಪುರ- ಬಿಕಾನೇರ ಸೇರಿದಂತೆ ಎಲ್ಲ ರೈಲುಗಳು ನಿಲುಗಡೆಯಾಗಬೇಕು. ಬಾದಾಮಿಯಿಂದ ಬಾಗಲಕೋಟೆ ಮಧ್ಯದಲ್ಲಿ ಬರುವ ರಸ್ತೆಗಳಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ಪ್ಲಾಟ್ಫಾರಂ 1, 2 ವಿಸ್ತರಣೆ ಮಾಡಬೇಕು, ಡಿಸ್ ಪ್ಲೇ ಮತ್ತು ದೀಪದ ವ್ಯವಸ್ಥೆ ಮಾಡಬೇಕು, ಮಹಿಳಾ ವಿಶ್ರಾಂತಿ ಕೊಠಡಿ ಸ್ಥಾಪನೆ, ಪ್ರತ್ಯೇಕ ಮುಂಗಡ ಕಾಯ್ದಿರಿಸುವಿಕೆ ಟಿಕೆಟ್ ಕೌಂಟರ್, ಎಟಿಎಂ ಸೌಲಭ್ಯ ಮತ್ತು ಆಸನಗಳ ವ್ಯವಸ್ಥೆ ಮಾಡಬೇಕು ಎಂದು ಹೋರಾಟ ಸಮಿತಿ ಮೂಲಕ ಮನವಿ ಸಲ್ಲಿಸಲಾಯಿತು.
ಸಮಿತಿ ಅಧ್ಯಕ್ಷ ಎಂ.ಎಸ್. ಹಿರೇಹಾಳ, ಕಾರ್ಯದರ್ಶಿ ಇಷ್ಟಲಿಂಗ ನರೇಗಲ್, ಸದಸ್ಯರಾದ ಎಂ.ಎಸ್. ಲೋಕಾಪುರ, ಮಹಾಂತೇಶ ವಡ್ಡರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು