ಸರಳ ಗಣೇಶೋತ್ಸವಕ್ಕೆ ಮನವಿ


Team Udayavani, Aug 26, 2019, 10:05 AM IST

bg-tdy-2

ಬಾಗಲಕೋಟೆ: ಜಿಲ್ಲೆಯ ಲಕ್ಷಾಂತರ ಜನ ಪ್ರವಾಹಕ್ಕೆ ಒಳಗಾಗಿ ಸಂಕಷ್ಟದಲ್ಲಿರುವುದರಿಂದ ಈ ಬಾರಿ ಗಣೇಶೋತ್ಸವ ಹಾಗೂ ಮೊಹರಂ ಹಬ್ಬವನ್ನು ಸರಳವಾಗಿ ಶ್ರದ್ಧಾ-ಭಕ್ತಿ ಪೂರ್ವಕವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮನವಿ ಮಾಡಿದ್ದಾರೆ.

ಜಿಲ್ಲಾಡಳಿತದ ಸಭಾ ಭವನದಲ್ಲಿಂದು ಗಣೇಶ ಚತುರ್ಥಿ ಹಾಗೂ ಮೊಹರಂ ಹಬ್ಬಗಳ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿಯ ಗಣೇಶೋತ್ಸವ ಸರಳವಾಗಿ ಆಚರಿಸಿ ನೊಂದ ಜೀವಿಗಳಿಗೆ ಸಹಾಯಹಸ್ತ ನೀಡುವಂತೆ ವಿನಂತಿಸಿದ‌ರು. ವಾಯು ಮಾಲಿನ್ಯ ತಡೆಗೆ ಪಿಒಪಿ ಗಣಪತಿ ಬಳಸದೇ ಕೇವಲ ಮಣ್ಣಿನ ಗಣೇಶ ಮೂರ್ತಿಗಳನ್ನು ಪೂಜಿಸಬೇಕು ಎಂದು ತಿಳಿಸಿದರು.

ಸ್ವಚ್ಛತೆ ಹಾಗೂ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ತಡೆಯಲು ಪಟಾಕಿ ಹಾಗೂ ಕರ್ಕಶ ಧ್ವನಿಯ ಡಿ.ಜೆ ಗಳನ್ನು ಬಳಸಬಾರದು. ಇಡೀ ದೇಶದಲ್ಲಿ ಸ್ವಚ್ಚ ಭಾರತ ಅಭಿಯಾನವು ಚಾಲನೆಯಲ್ಲಿದ್ದು, ಜಿಲ್ಲೆಯ ಸಾರ್ವಜನಿಕರು ಸ್ಚಚ್ಛತೆಯ ಅಭಿಯಾನದಲ್ಲಿ ಕೈ ಜೋಡಿಸಬೇಕು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಗಣೇಶ ಹಾಗೂ ಮೊಹರಂ ಏಕಕಾಲಕ್ಕೆ ಬಂದಿರುವುದರಿಂದ ಶಾಂತಿ, ಸಹಕಾರದಿಂದ ಸೌಹಾರ್ದಯುತವಾಗಿ ಆಚರಿಸಬೇಕೆಂದು.

ಸಿಮೆಂಟ್ ಕ್ವಾರಿ, ಮಹಾ ರುದ್ರಪ್ಪನ ಹಳ್ಳದಲ್ಲಿ ಸಾರ್ವಜನಿಕರು ಗಣೇಶ ಮೂರ್ತಿಯನ್ನು ರಾತ್ರಿ 10ರ ಒಳಗಾಗಿ ವಿಸರ್ಜಿಸಬೇಕು. ಎಲ್ಲೆಡೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗುವುದು ಹಾಗೂ ಸಾರ್ವಜನಿಕ ಗಣೇಶೋತ್ಸವವನ್ನು 5 ಮತ್ತು 7 ದಿನಗಳ ಮಾತ್ರ ಆಚರಿಸಲು ಸೂಚಿಸಿದರು.

ರಾಜು ನಾಯ್ಕರ ಮಾತನಾಡಿ, ಮದ್ಯ ಮಾರಾಟ ನಿಷೇಧ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಎಮ್‌.ಎಸ್‌.ಆಯ್‌.ಎಲ್ ತೆರೆದಿರುತ್ತವೆ. ಈ ಬಗ್ಗೆ ಪೊಲೀಸ್‌ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.

ಎಂ.ಎ. ದಂಡಿಯಾ ಮಾತನಾಡಿ ಮಾತನಾಡಿ. ಸೆ. 5ರಂದು ಹಾಗೂ 10ರಂದು ಮೊಹರಂ ನಿಮಿತ್ತ ನಗರದ ಪಂಖಾ ಮಸೀದಿ ಹತ್ತಿರ ಪಂಜಾಗಳು ಕೂಡುವ ಹಿನ್ನೆಲೆಯಲ್ಲಿ ಜನ ದಟ್ಟಣೆಯಾಗುವುದರಿಂದ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು. ಅಪರ ಜಿಲ್ಲಾಧಿಕಾರಿ ದುರ್ಗೇಶ ರುದ್ರಾಕ್ಷಿ, ಪ್ರೊಬೆಷನರಿ ಐಎಎಸ್‌ ಅಧಿಕಾರಿ ಗರಿಮಾ ಪವ್ವಾರ, ಉಪ ವಿಭಾಗಾಧಿಕಾರಿ ಎಚ್.ಜಯಾ, ಮಾಧವ ಸೇವಾ ಕೇಂದ್ರದ ಅಧ್ಯಕ್ಷ ನಾಗರಾಜ ಹದ್ಲಿ, ಮುಖಂಡರಾದ ಮಾಧವಿ ರಾಠೊಡ, ಹನುಮಂತ ನಾರಾಯಣಿ, ಜ್ಯೋತಿ ಭಜಂತ್ರಿ, ಎನ್‌.ಜಿ.ಪವಾರ, ಮನೋಹರ ಎಳ್ಳೆಮ್ಮಿ, ವೈ.ಜೆ. ಪಠಾಣ, ಹಾಜಿಸಾಬ ದಂಡಿನ್‌, ಶಪೀಕ ದೊಡಕಟ್ಟಿ ಉಪಸ್ಥಿತರಿದ್ದರು.

ಪ್ರವಾಹದಿಂದ ಜಿಲ್ಲೆಯ 194 ಹಳ್ಳಿಗಳ ಜನರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಈ ಬಾರಿಯ ಗಣೇಶೋತ್ಸವವನ್ನು ಸರಳವಾಗಿ ಆಚರಿಸುವ ಜತೆಗೆ ಸಂತ್ರಸ್ತರ ಸಂಕಷ್ಟದಲ್ಲಿ ನಾವೆಲ್ಲ ಭಾಗಿಯಾಗೋಣ. ಅಲ್ಲದೇ ಈ ಬಾರಿ ವಿಶ್ವಸಂಸ್ಥೆಯಲ್ಲಿಯೂ ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಭಾರತದ ಸಾಂಸ್ಕೃತಿಕ ಪರಂಪರೆ ಸಂಪ್ರದಾಯ ಎತ್ತಿ ಹಿಡಿದಂತಾಗಿದೆ. •ಆರ್‌. ರಾಮಚಂದ್ರನ್‌, ಜಿಲ್ಲಾಧಿಕಾರಿ
ಜಿಲ್ಲಾಧಿಕಾರಿಗಳ ಮನಿವಿಯಂತೆ ಸಂತ್ರಸ್ತರ ನೋವಿನಲ್ಲಿ ಭಾಗಿಯಾಗಿ ಸರಳವಾದ ಗಣೇಶೋತ್ಸವ ಆಚರಣೆಗೆ ಸಹಕಾರ ನೀಡುತ್ತೇವೆ. ಶಹರ ಗಜಾನನ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂ ನೀಡಲಾಗುವುದು. •ಅಶೋಕ ಲಿಂಬಾವಳಿ, ಗಣೇಶೋತ್ಸವ ಆಚರಣೆ ಸಮಿತಿ ಮುಖಂಡ

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.