ಕೈಗಾರಿಕೆ ಸ್ಥಾಪನೆಗೆ ಆಗ್ರಹಿಸಿ ಮನವಿ
Team Udayavani, Jul 21, 2020, 8:51 AM IST
ಬಾಗಲಕೋಟೆ: ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾದ ಸಂತ್ರಸ್ತರಿಗೆ ಉದ್ಯಮ-ಉದ್ಯೋಗ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ನಗರಕ್ಕೆ ಆಗಮಿಸಿದ್ದ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಅವರಿಗೆ ಮನವಿ ಸಲ್ಲಿಸಿದ ಸಮಿತಿಯ ಪದಾಧಿಕಾರಿಗಳು, ನವನಗರ ಅಗ್ರೋಟೆಕ್ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿ ಮೆ: ಗ್ರೀನ್ಫುಡ್ ಪಾರ್ಕ್ ಲಿಮಿಟೆಡ್ಗೆ ಹಂಚಿಕೆಯಾದ 100 ಎಕರೆ ಜಮೀನನ್ನು ಗುತ್ತಿಗೆಯನ್ನು ರದ್ದುಪಡಿಸಿ ಕೈಗಾರಿಕಾ ಇಲಾಖೆಗೆ ಹಸ್ತಾಂತರಗೊಳಿಸಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ನಿರ್ಮಿಸಲು ಬಾಗಲಕೋಟೆ ನಗರದ ಮುಳುಗಡೆ ಸಂತ್ರಸ್ತರಿಗೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಸಮಿತಿಯ ಕಾರ್ಯದರ್ಶಿ ವೆಂಕಟಾಚಲಪತಿ ಮಾತನಾಡಿ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಅಕ್ರಮವಾಗಿ ಗುತ್ತಿಗೆ ಮುಂದುವರಿಸಿರುವಕುರಿತು ಮಾಹಿತಿಯನ್ನು ವಿವರಿಸಿ ಗುತ್ತಿಗೆ ರದ್ದುಗೊಳಿಸುವಂತೆ ಮನವಿ ಮಾಡಿದರು.
ಸಮಿತಿಯ ಅಧ್ಯಕ್ಷ ಗೋವಿಂದರಾಜ ಬಳ್ಳಾರಿ, ಉತ್ತರ ಕರ್ನಾಟಕದವರಾದ ತಾವು ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಯಾವ ರೀತಿ ಕೈಗಾರಿಕೆ ಹಾಗೂ ವಾಣಿಜ್ಯ ಅಭಿವೃದ್ಧಿಗೊಳಿಸಿದ್ದೀರಿ. ಬಾಗಲಕೋಟೆ ನಗರವು ಮುಳುಗಡೆ ಪ್ರದೇಶವಾಗಿರುವುದರಿಂದ ನಗರವನ್ನು ವಾಣಿಜ್ಯ ಮತ್ತು ಕೈಗಾರಿಕಾ ಪ್ರದೇಶದಿಂದ ಅಭಿವೃದ್ಧಿ ಪಡಿಸಲು ವಿನಂತಿಸಿಕೊಂಡರು.
ಸದಸ್ಯರಾದ ಪಡಿಯಪ್ಪ ಕಟಗೇರಿ, ಮಹಮ್ಮದ ರಫೀಕ ನದಾಫ್, ಪ್ರಯಾಗ ಮಗಜಿ, ಮೆಹಬೂಬ ಸಂದಿಮನಿ ಹಾಗೂ ಸಲಹಾ ಸಮಿತಿ ಸದಸ್ಯರಾದ ಸದಾಶಿವ ಕೆಂಬಾವಿ, ಎಸ್.ಎಸ್.ಜಿಡಗಿ, ಆಸೀಫ್ ಹುಬ್ಬಳ್ಳಿ, ಮಂಜು, ಅಹಮದ್ ಹನಮಸಾಗರ, ಪ್ರದೀಪ ಮಿರಜಕರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ